ಬ್ರೇಕಿಂಗ್ ನ್ಯೂಸ್
21-08-20 03:00 pm Headline Karnataka News Network ಕರ್ನಾಟಕ
ಕೊಪ್ಪಳ, ಆಗಸ್ಟ್ 21: ಕೊರೊನಾ ನಿರ್ಬಂಧದ ನಡುವೆಯೂ ಇಲ್ಲಿನ ಕುಷ್ಟಗಿ ತಾಲೂಕಿನಲ್ಲಿ ಅವಧೂತ ಶುಕಮುನಿ ದೇವರ ಆರಾಧನೆಯ ಹೆಸರಲ್ಲಿ ಭಕ್ತರು ಬಲವಂತವಾಗಿ ಅಡ್ಡಪಲ್ಲಕ್ಕಿ ಉತ್ಸವ ಆಚರಿಸಿದ ಘಟನೆ ನಡೆದಿದ್ದು ಪೊಲೀಸರು 50ಕ್ಕೂ ಅಧಿಕ ಮಂದಿಯನ್ನು ಬಂಧಿಸಿದ್ದಾರೆ.
ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ದೋಟಿಹಾಳ ಗ್ರಾಮದ ಶ್ರೀ ಅವಧೂತ ಶುಕಮುನಿ ದೇವರ ಆರಾಧನೆ ಮಹೋತ್ಸವ ನಿಮಿತ್ತ ಪ್ರತಿ ವರ್ಷ ಅಡ್ಡಪಲ್ಲಕ್ಕಿ ಉತ್ಸವ ಅದ್ಧೂರಿಯಾಗಿ ಆಚರಿಸಲಾಗುತ್ತಿತ್ತು. ಆದರೆ ಈ ಬಾರಿ ಕೊರೊನಾ ಭೀತಿಯಿಂದ ತಲತಲಾಂತರದಿಂದ ಆಚರಿಸಿಕೊಂಡು ಬಂದಿದ್ದ ಅಡ್ಡಪಲ್ಲಕ್ಕಿ ಉತ್ಸವವನ್ನು ಸರಳವಾಗಿ ಆಚರಿಸಲು ದೇವಸ್ಥಾನದ ಆಡಳಿತ ನಿರ್ಧರಿಸಿತ್ತು.

ಇದರಂತೆ, ನಿನ್ನೆ ರಾತ್ರಿ ಅಡ್ಡಪಲ್ಲಕ್ಕಿ ಉತ್ಸವ ಮೆರವಣಿಗೆ ಆರಂಭವಾಗುತ್ತಿದಂತೆ ಏಕಾಏಕಿ ಕೆಲವು ಭಕ್ತರು ಸೇರಿ, ದೇವಸ್ಥಾನದ ಮುಖ್ಯದ್ವಾರದ ಬಾಗಿಲು ಒಡೆಯಲು ಆರಂಭಿಸಿದ್ದಾರೆ. ಕೊನೆಗೆ ದೇವಸ್ಥಾನದ ಬಾಗಿಲು ಮುರಿದು ಪಲ್ಲಕ್ಕಿಯನ್ನು ಹೊರ ತಂದಿದ್ದು ಗ್ರಾಮದಲ್ಲಿ ಮೆರವಣಿಗೆ ಮಾಡಿದ್ದಾರೆ. ಈ ಮಧ್ಯೆ ಪಲ್ಲಕ್ಕಿ ಹೊರಬರುತ್ತಿದಂತೆ ಅಲ್ಲಿಯೇ ನಿಲ್ಲಿಸಿದ್ದ ಪೊಲೀಸ್ ವಾಹನಕ್ಕೆ ಡಿಕ್ಕಿ ಹೊಡೆದಿದ್ದು, ಪೊಲೀಸ್ ವಾಹನದ ಗಾಜು ಪುಡಿಯಾಗಿದೆ.
ಅಡ್ಡಪಲ್ಲಕ್ಕಿ ಉತ್ಸವದ ಮೆರವಣಿಗೆ ನಡೆಸಲು ತಹಶೀಲ್ದಾರರು ನಿರ್ಬಂಧ ಹೇರಿದ್ದರೂ ಸಾವಿರಾರು ಮಂದಿ ಜನಜಂಗುಳಿ ಮಧ್ಯೆ ಪಲ್ಲಕ್ಕಿ ಉತ್ಸವ ಆಚರಣೆ ಮಾಡಿದ್ದಾರೆ. ಸ್ಥಳದಲ್ಲಿ ಬೀಡು ಬಿಟ್ಟಿದ್ದ ಕುಷ್ಟಗಿ ತಹಶೀಲ್ದಾರ್ ಎಂ.ಸಿದ್ದೇಶ ಸೇರಿದಂತೆ ಪೊಲೀಸ್ ಅಧಿಕಾರಿಗಳ ಮಾತಿಗೆ ಒಪ್ಪದೆ ಜನರು ಮೆರವಣಿಗೆ ನಡೆಸಿದ್ದಾರೆ. ಕೊನೆಗೆ ಪೊಲೀಸರು ಮತ್ತು ಜನರ ನಡುವೆ ಮಾತಿನ ಚಕಮಕಿ ನಡೆದು, ಪೊಲೀಸರು ಲಾಠಿ ಬೀಸಿದ ಚದುರಿಸುವ ಪ್ರಯತ್ನವನ್ನೂ ಮಾಡಿದರು. ಒಂದು ಗಂಟೆ ಕಾಲದ ಪ್ರಹಸನದ ಬಳಿಕ ಗ್ರಾಮದ ಮಧ್ಯೆ ಜನರು ಪಲ್ಲಕ್ಕಿಯನ್ನು ಬಿಟ್ಟು ಓಡಿದ್ದಾರೆ. ಬಳಿಕ ಪೊಲೀಸರೇ ಪಲ್ಲಕ್ಕಿಯನ್ನು ಹೊತ್ತು ದೇವಸ್ಥಾನಕ್ಕೆ ತಂದಿದ್ದಾರೆ. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ರಾತ್ರಿ ಸ್ಥಳಕ್ಕೆ ಎಸ್ಪಿ ಜಿ.ಸಂಗೀತಾ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಂದಾಯ ನೀರಿಕ್ಷಕ ಮತ್ತು ಪೊಲೀಸ್ ಠಾಣೆ ಸಿಬ್ಬಂದಿಯ ಪ್ರತ್ಯೇಕ ದೂರಿನಂತೆ ಪೊಲೀಸರು 50ಕ್ಕೂ ಹೆಚ್ಚು ಜನರನ್ನು ಬಂಧಿಸಿದ್ದಾರೆ.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 02:31 pm
HK News Staffer
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm