ಬ್ರೇಕಿಂಗ್ ನ್ಯೂಸ್
25-03-21 10:22 pm Headline Karnataka News Network ಕರ್ನಾಟಕ
ಬೆಂಗಳೂರು, ಮಾ.25: ಬೆಳಗಾವಿ ಲೋಕಸಭೆ ಕ್ಷೇತ್ರ ಮತ್ತು ಬಸವಕಲ್ಯಾಣ ಹಾಗೂ ಮಸ್ಕಿ ಕ್ಷೇತ್ರದ ವಿಧಾನಸಭೆ ಚುನಾವಣೆಗೆ ಅಭ್ಯರ್ಥಿಗಳನ್ನು ಘೋಷಿಸಿ ಬಿಜೆಪಿ ಹೈಕಮಾಂಡ್ ಆದೇಶ ಮಾಡಿದೆ. ಬೆಳಗಾವಿಗೆ ಎಲ್ಲರ ನಿರೀಕ್ಷೆ ತಲೆಕೆಳಗು ಮಾಡಿ ಮಾಜಿ ಸಚಿವ ಸುರೇಶ್ ಅಂಗಡಿಯವರ ಪತ್ನಿ ಮಂಗಳಾ ಸುರೇಶ್ ಅಂಗಡಿಗೆ ಬಿಜೆಪಿ ಟಿಕೆಟ್ ನೀಡಿದೆ.
ಲೋಕಸಭೆಗೆ ಬಿಜೆಪಿ ಟಿಕೆಟ್ ನೀಡುವಂತೆ ಶ್ರೀರಾಮ ಸೇನೆ ವರಿಷ್ಠ ಪ್ರಮೋದ್ ಮುತಾಲಿಕರಿಂದ ಹಿಡಿದು ರಮೇಶ್ ಕತ್ತಿ ಸೇರಿದಂತೆ ಹಲವರು ಲಾಬಿ ನಡೆಸಿದ್ದರು. ಕೆಲವರಂತೂ ದೆಹಲಿಗೂ ಹೋಗಿ ಲಾಬಿ ನಡೆಸಿದ್ದರು. ವೆಂಕಟೇಶ್ವರ ಸ್ವಾಮೀಜಿ ಎಂಬವರು ತಾನೇ ಬಿಜೆಪಿ ಅಭ್ಯರ್ಥಿ ಎಂದು ಹೇಳಿ ನಾಮಪತ್ರವನ್ನೂ ಸಲ್ಲಿಸಿದ್ದರು. ಇದೇ ವೇಳೆ, ಸುರೇಶ್ ಅಂಗಡಿಯವರ ಪುತ್ರಿ ಶ್ರದ್ಧಾ ಹೆಸರು ಕೂಡ ಕೇಳಿಬಂದಿತ್ತು. ಆದರೆ, ಬಿಜೆಪಿ ಹೈಕಮಾಂಡ್ ಮಂಗಳಾ ಅಂಗಡಿಗೆ ಟಿಕೆಟ್ ಘೋಷಣೆ ಮಾಡಿ ಅಚ್ಚರಿ ಮೂಡಿಸಿದೆ.
ಇನ್ನು ಬಸವಕಲ್ಯಾಣ ಕ್ಷೇತ್ರದಲ್ಲಿ ಟಿಕೆಟ್ ನಿರೀಕ್ಷೆ ಮಾಡಿದ್ದ ಭಗವಂತ ಖೂಬಾಗೆ ನಿರಾಸೆಯಾಗಿದ್ದು ಶರಣು ಹೂಗಾರಗೆ ಟಿಕೆಟ್ ನೀಡಿದೆ. ಮಸ್ಕಿ ಕ್ಷೇತ್ರದಲ್ಲಿ ಪ್ರತಾಪಗೌಡ ಪಾಟೀಲ್ ಈಗಾಗಲೇ ನಾಮಪತ್ರ ಸಲ್ಲಿಸಿದ್ದು ಅವರನ್ನೇ ಬಿಜೆಪಿ ಅಭ್ಯರ್ಥಿಯಾಗಿಸಿದೆ.
ಬೆಳಗಾವಿ ಲೋಕಸಭೆ ಕ್ಷೇತ್ರದಲ್ಲಿ ಕಾಂಗ್ರೆಸ್ ಅಲ್ಲಿನ ಪ್ರಭಾವಿ ಮುಖಂಡ ಸತೀಶ್ ಜಾರಕಿಹೊಳಿಗೆ ಟಿಕೆಟ್ ನೀಡಿದ್ದು ಸಾಂಪ್ರದಾಯಿಕವಾಗಿ ಬಿಜೆಪಿಯ ಕ್ಷೇತ್ರ ಆಗಿದ್ದರೂ, ಪೈಪೋಟಿಗೆ ಕಾರಣವಾಗಲಿದೆ. ಎಪ್ರಿಲ್ 17 ರಂದು ಅಲ್ಲಿ ಚುನಾವಣೆ ನಡೆಯಲಿದೆ. ಬಿಜೆಪಿ ಸಚಿವರಾಗಿದ್ದ ಸುರೇಶ್ ಅಂಗಡಿ ನಿಧನದಿಂದ ತೆರವಾದ ಸ್ಥಾನಕ್ಕೆ ಬೆಳಗಾವಿ ಉಪ ಚುನಾವಣೆ ನಡೆಯುತ್ತಿದೆ.
Belagavi bypoll elections 2021 BJP ticket go to Angadi family.
01-03-26 09:20 pm
HK News Staffer
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
ಖಮೇನಿ ಹತ್ಯೆ ಖಂಡನೀಯ, ಇರಾನ್ ಮೇಲಿನ ಅಮೆರಿಕ ಯುದ್ಧ...
01-03-26 04:51 pm
01-03-26 09:52 am
HK News Staffer
ದುಬೈ, ಅಬುಧಾಬಿ ಮೇಲೆ ಇರಾನ್ ಮಿಸೈಲ್ ದಾಳಿ ; ಜಗತ್ತಿ...
28-02-26 10:54 pm
ಗಲ್ಫ್ ರಾಷ್ಟ್ರಗಳಿಗೆ ವಿಮಾನ ಸಂಚಾರ ವ್ಯತ್ಯಯ ; ಏರ್...
28-02-26 07:17 pm
ಇರಾನ್ ಮೇಲೆ ಮುಗಿಬಿದ್ದ ಅಮೆರಿಕ-ಇಸ್ರೇಲ್ ಪಡೆಗಳು ;...
28-02-26 05:28 pm
ತ್ರಿಷಾ ಬಿರುಗಾಳಿ ; ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ್...
28-02-26 01:08 pm
01-03-26 08:37 pm
HK News Staffer
PSI Nasir Hussain: ಉಡುಪಿ ; ಮ್ಯಾರಥಾನಲ್ಲಿ ಪಾಲ್ಗ...
01-03-26 04:07 pm
ಹುಲಿಕಲ್ ಘಾಟಿಯಲ್ಲಿ ದುರ್ಗಾಂಬಾ ಬಸ್ ಗೆ ಬೆಂಕಿ ; ಕು...
28-02-26 08:53 pm
Mangaluru Muscat Flight: ಮಂಗಳೂರು- ಮಸ್ಕತ್ ನಡುವ...
27-02-26 08:59 pm
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm