ಬ್ರೇಕಿಂಗ್ ನ್ಯೂಸ್
28-03-21 05:11 pm Headline Karnataka News Network ಕರ್ನಾಟಕ
ಬೆಳಗಾವಿ,ಮಾ.28: ರಮೇಶ್ ಜಾರಕಿಹೊಳಿ ಅಶ್ಲೀಲ ಸಿಡಿ ಕೇಸ್ನಲ್ಲಿ ಡಿ.ಕೆ. ಶಿವಕುಮಾರ್ ಹೆಸರು ಬಹಿರಂಗ ವಿಚಾರವಾಗಿ ಬೆಳಗಾವಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸತೀಶ್ ಜಾರಕಿಹೊಳಿ ಪ್ರತಿಕ್ರಿಯಿಸಿದ್ದಾರೆ.
ಎಸ್ಐಟಿ ತನಿಖೆಯ ಬಳಿಕ ಪ್ರಕರಣದ ಸತ್ಯಾಂಶ ಗೊತ್ತಾಗಲಿದೆ. ನಾವು, ನೀವು ಏನೂ ಮಾಡಲು ಆಗುವುದಿಲ್ಲ. ಯುವತಿ ಬರಬೇಕು, ಬಂದ್ರೆ ಸತ್ಯಾಸತ್ಯತೆ ಗೊತ್ತಾಗಲಿದೆ ಎಂದು ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.

20 ದಿನದಿಂದ ನೋಡ್ತಿರುವೆ, ದಿನಕ್ಕೊಂದು ಹೇಳಿಕೆ ಬರ್ತಿವೆ. ಎಸ್ಐಟಿಯವರೇ ಬೇಗ ಯುವತಿಯನ್ನ ಪತ್ತೆ ಹಚ್ಚಬೇಕು. ಸಿಡಿ ಕೇಸ್ನ ಸತ್ಯಾಂಶ ಬಂದ ಮೇಲೆ ಎಲ್ಲವೂ ಗೊತ್ತಾಗಲಿದೆ. ಪೊಲೀಸರು ಆದಷ್ಟುಬೇಗ ಸತ್ಯಾಂಶ ರಾಜ್ಯದ ಜನತೆಗೆ ತಿಳಿಸಲಿ. ಯುವತಿ ಬಂದು ಹೇಳಿಕೆ ಕೊಟ್ಟ ಬಳಿಕ ಕ್ರಮ ಕೈಗೊಳ್ಳಬೇಕು. ಸಿಡಿ ಕೇಸ್ ಬಿಜೆಪಿ, ಕಾಂಗ್ರೆಸ್ಗೆ ಪ್ಲಸ್, ಮೈನಸ್ ಆಗಲ್ಲ ಎಂದು ಬೆಳಗಾವಿ ‘ಕೈ’ ಅಭ್ಯರ್ಥಿ ಹಾಗೂ ರಮೇಶ್ ಸಹೋದರ ಸತೀಶ್ ಜಾರಕಿಹೊಳಿ ಹೇಳಿಕೆ ನೀಡಿದ್ದಾರೆ.
ಡಿ.ಕೆ. ಶಿವಕುಮಾರ್ ಬೆಳಗಾವಿಗೆ ಬರಲು ಕೆಲ ಕಾರ್ಯಕರ್ತರಿಂದ ವಿರೋಧ ವ್ಯಕ್ತವಾಗಿದೆ. ಅಶ್ಲೀಲ ಸಿಡಿ ವಿಚಾರದಲ್ಲಿ ಕೆಪಿಸಿಸಿ ಅಧ್ಯಕ್ಷರ ಹೆಸರು ಕೇಳಿಬಂದ ಹಿನ್ನೆಲೆ ಕೆಲ ಕಾರ್ಯಕರ್ತರು ಶಿವಕುಮಾರ್ ಭೇಟಿ ವಿರೋಧಿಸಿದ್ದಾರೆ. ಈ ಬಗ್ಗೆಯೂ ಸತೀಶ್ ಜಾರಕಿಹೊಳಿ ತಮ್ಮ ಅಭಿಪ್ರಾಯ ತಿಳಿಸಿದ್ದಾರೆ.
ಕಾಂಗ್ರೆಸ್ನ ಕೆಲ ಕಾರ್ಯಕರ್ತರ ಹೇಳಿಕೆ ಅವರ ವೈಯಕ್ತಿಕ ವಿಚಾರ. ರಮೇಶ್ ಬೆಂಬಲಿಗರ ಪ್ರತಿಭಟನೆಗೂ, ನಮಗೂ ಸಂಬಂಧವಿಲ್ಲ. ಬೆಳಗಾವಿ ಜಿಲ್ಲೆಯ ಗೋಕಾಕ್ನಲ್ಲಿ ರಮೇಶ್ ಬೆಂಬಲಿಗರು, ಬೆಂಗಳೂರಲ್ಲಿ ಡಿಕೆಶಿ ಬೆಂಬಲಿಗರು ಪ್ರತಿಭಟನೆ ಮಾಡ್ತಿದ್ದಾರೆ. ನಾವು ಇಂದು ಸಂಜೆ ಡಿ.ಕೆ. ಶಿವಕುಮಾರ್ ಅಧ್ಯಕ್ಷತೆಯಲ್ಲಿ ಸಭೆ ನಡೆಸುತ್ತೇವೆ. ನಾಳೆ ಬೆಳಗ್ಗೆ 11 ಗಂಟೆಗೆ ನಾಮಪತ್ರ ಸಲ್ಲಿಸುತ್ತೇವೆ ಎಂದು ಸತೀಶ್ ಹೇಳಿದ್ದಾರೆ.



ಬೆಳಗಾವಿಯಲ್ಲಿ ಡಿ.ಕೆ. ಶಿವಕುಮಾರ್ ವಿರುದ್ಧ ರಮೇಶ್ ಬೆಂಬಲಿಗರ ಪ್ರತಿಭಟನೆ
ಬೆಳಗಾವಿಗೆ ಡಿ.ಕೆ.ಶಿವಕುಮಾರ್ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ರಮೇಶ್ ಜಾರಕಿಹೊಳಿ ಬೆಂಬಲಿಗರು ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರತಿಭಟನಾಕಾರ ರಮೇಶ್ ಬೆಂಬಲಿಗರು ಸಾಂಬ್ರಾ ಏರ್ಪೋರ್ಟ್ ತಲುಪಿದ್ದಾರೆ. ಡಿ.ಕೆ. ಶಿವಕುಮಾರ್ ವಿರುದ್ಧ ಪ್ರತಿಭಟನೆ ನಡೆಸಲು ಆಗಮಿಸಿದ ಬೆಂಬಲಿಗರನ್ನು ಪೊಲೀಸರು ವಿಮಾನ ನಿಲ್ದಾಣದ ಮುಂಭಾಗದಲ್ಲೇ ತಡೆದಿದ್ದಾರೆ. ಗೋಕಾಕ್ ಸೇರಿ ವಿವಿಧ ಕಡೆಗಳಿಂದ ಆಗಮಿಸಿದ ಬೆಂಬಲಿಗರು, ವಿಮಾನ ನಿಲ್ದಾಣದ ಸಮೀಪವಿರುವ ಮೈದಾನದಲ್ಲಿ ಜಮಾವಣೆಗೊಂಡಿದ್ದಾರೆ.



ಡಿ.ಕೆ. ಶಿವಕುಮಾರ್ ಬಂಧಿಸುವಂತೆ ಬೆಂಬಲಿಗರ ಘೋಷಣೆ
ಸಾಂಬ್ರಾ ಏರ್ಪೋರ್ಟ್ ಬಳಿ ಧರಣಿ ನಡೆಸುತ್ತಿರುವ ರಮೇಶ್ ಬೆಂಬಲಿಗರು ಕಪ್ಪುಬಾವುಟ ಹಿಡಿದು ‘ಗೋ ಬ್ಯಾಕ್ ಡಿಕೆಶಿ’ ಎಂದು ಘೋಷಣೆ ಕೂಗಿ ಆಕ್ರೋಶ ಹೊರಹಾಕುತ್ತಿದ್ದಾರೆ. ಏರ್ಪೋರ್ಟ್ ಸಮೀಪವಿರುವ ಮೈದಾನದಲ್ಲಿ ಪ್ರತಿಭಟನೆ ಮಾಡುತ್ತಿದ್ದಾರೆ.
01-03-26 09:20 pm
HK News Staffer
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
ಖಮೇನಿ ಹತ್ಯೆ ಖಂಡನೀಯ, ಇರಾನ್ ಮೇಲಿನ ಅಮೆರಿಕ ಯುದ್ಧ...
01-03-26 04:51 pm
01-03-26 09:52 am
HK News Staffer
ದುಬೈ, ಅಬುಧಾಬಿ ಮೇಲೆ ಇರಾನ್ ಮಿಸೈಲ್ ದಾಳಿ ; ಜಗತ್ತಿ...
28-02-26 10:54 pm
ಗಲ್ಫ್ ರಾಷ್ಟ್ರಗಳಿಗೆ ವಿಮಾನ ಸಂಚಾರ ವ್ಯತ್ಯಯ ; ಏರ್...
28-02-26 07:17 pm
ಇರಾನ್ ಮೇಲೆ ಮುಗಿಬಿದ್ದ ಅಮೆರಿಕ-ಇಸ್ರೇಲ್ ಪಡೆಗಳು ;...
28-02-26 05:28 pm
ತ್ರಿಷಾ ಬಿರುಗಾಳಿ ; ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ್...
28-02-26 01:08 pm
01-03-26 08:37 pm
HK News Staffer
PSI Nasir Hussain: ಉಡುಪಿ ; ಮ್ಯಾರಥಾನಲ್ಲಿ ಪಾಲ್ಗ...
01-03-26 04:07 pm
ಹುಲಿಕಲ್ ಘಾಟಿಯಲ್ಲಿ ದುರ್ಗಾಂಬಾ ಬಸ್ ಗೆ ಬೆಂಕಿ ; ಕು...
28-02-26 08:53 pm
Mangaluru Muscat Flight: ಮಂಗಳೂರು- ಮಸ್ಕತ್ ನಡುವ...
27-02-26 08:59 pm
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm