ಬ್ರೇಕಿಂಗ್ ನ್ಯೂಸ್
28-03-21 05:11 pm Headline Karnataka News Network ಕರ್ನಾಟಕ
ಬೆಳಗಾವಿ,ಮಾ.28: ರಮೇಶ್ ಜಾರಕಿಹೊಳಿ ಅಶ್ಲೀಲ ಸಿಡಿ ಕೇಸ್ನಲ್ಲಿ ಡಿ.ಕೆ. ಶಿವಕುಮಾರ್ ಹೆಸರು ಬಹಿರಂಗ ವಿಚಾರವಾಗಿ ಬೆಳಗಾವಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸತೀಶ್ ಜಾರಕಿಹೊಳಿ ಪ್ರತಿಕ್ರಿಯಿಸಿದ್ದಾರೆ.
ಎಸ್ಐಟಿ ತನಿಖೆಯ ಬಳಿಕ ಪ್ರಕರಣದ ಸತ್ಯಾಂಶ ಗೊತ್ತಾಗಲಿದೆ. ನಾವು, ನೀವು ಏನೂ ಮಾಡಲು ಆಗುವುದಿಲ್ಲ. ಯುವತಿ ಬರಬೇಕು, ಬಂದ್ರೆ ಸತ್ಯಾಸತ್ಯತೆ ಗೊತ್ತಾಗಲಿದೆ ಎಂದು ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.

20 ದಿನದಿಂದ ನೋಡ್ತಿರುವೆ, ದಿನಕ್ಕೊಂದು ಹೇಳಿಕೆ ಬರ್ತಿವೆ. ಎಸ್ಐಟಿಯವರೇ ಬೇಗ ಯುವತಿಯನ್ನ ಪತ್ತೆ ಹಚ್ಚಬೇಕು. ಸಿಡಿ ಕೇಸ್ನ ಸತ್ಯಾಂಶ ಬಂದ ಮೇಲೆ ಎಲ್ಲವೂ ಗೊತ್ತಾಗಲಿದೆ. ಪೊಲೀಸರು ಆದಷ್ಟುಬೇಗ ಸತ್ಯಾಂಶ ರಾಜ್ಯದ ಜನತೆಗೆ ತಿಳಿಸಲಿ. ಯುವತಿ ಬಂದು ಹೇಳಿಕೆ ಕೊಟ್ಟ ಬಳಿಕ ಕ್ರಮ ಕೈಗೊಳ್ಳಬೇಕು. ಸಿಡಿ ಕೇಸ್ ಬಿಜೆಪಿ, ಕಾಂಗ್ರೆಸ್ಗೆ ಪ್ಲಸ್, ಮೈನಸ್ ಆಗಲ್ಲ ಎಂದು ಬೆಳಗಾವಿ ‘ಕೈ’ ಅಭ್ಯರ್ಥಿ ಹಾಗೂ ರಮೇಶ್ ಸಹೋದರ ಸತೀಶ್ ಜಾರಕಿಹೊಳಿ ಹೇಳಿಕೆ ನೀಡಿದ್ದಾರೆ.
ಡಿ.ಕೆ. ಶಿವಕುಮಾರ್ ಬೆಳಗಾವಿಗೆ ಬರಲು ಕೆಲ ಕಾರ್ಯಕರ್ತರಿಂದ ವಿರೋಧ ವ್ಯಕ್ತವಾಗಿದೆ. ಅಶ್ಲೀಲ ಸಿಡಿ ವಿಚಾರದಲ್ಲಿ ಕೆಪಿಸಿಸಿ ಅಧ್ಯಕ್ಷರ ಹೆಸರು ಕೇಳಿಬಂದ ಹಿನ್ನೆಲೆ ಕೆಲ ಕಾರ್ಯಕರ್ತರು ಶಿವಕುಮಾರ್ ಭೇಟಿ ವಿರೋಧಿಸಿದ್ದಾರೆ. ಈ ಬಗ್ಗೆಯೂ ಸತೀಶ್ ಜಾರಕಿಹೊಳಿ ತಮ್ಮ ಅಭಿಪ್ರಾಯ ತಿಳಿಸಿದ್ದಾರೆ.
ಕಾಂಗ್ರೆಸ್ನ ಕೆಲ ಕಾರ್ಯಕರ್ತರ ಹೇಳಿಕೆ ಅವರ ವೈಯಕ್ತಿಕ ವಿಚಾರ. ರಮೇಶ್ ಬೆಂಬಲಿಗರ ಪ್ರತಿಭಟನೆಗೂ, ನಮಗೂ ಸಂಬಂಧವಿಲ್ಲ. ಬೆಳಗಾವಿ ಜಿಲ್ಲೆಯ ಗೋಕಾಕ್ನಲ್ಲಿ ರಮೇಶ್ ಬೆಂಬಲಿಗರು, ಬೆಂಗಳೂರಲ್ಲಿ ಡಿಕೆಶಿ ಬೆಂಬಲಿಗರು ಪ್ರತಿಭಟನೆ ಮಾಡ್ತಿದ್ದಾರೆ. ನಾವು ಇಂದು ಸಂಜೆ ಡಿ.ಕೆ. ಶಿವಕುಮಾರ್ ಅಧ್ಯಕ್ಷತೆಯಲ್ಲಿ ಸಭೆ ನಡೆಸುತ್ತೇವೆ. ನಾಳೆ ಬೆಳಗ್ಗೆ 11 ಗಂಟೆಗೆ ನಾಮಪತ್ರ ಸಲ್ಲಿಸುತ್ತೇವೆ ಎಂದು ಸತೀಶ್ ಹೇಳಿದ್ದಾರೆ.



ಬೆಳಗಾವಿಯಲ್ಲಿ ಡಿ.ಕೆ. ಶಿವಕುಮಾರ್ ವಿರುದ್ಧ ರಮೇಶ್ ಬೆಂಬಲಿಗರ ಪ್ರತಿಭಟನೆ
ಬೆಳಗಾವಿಗೆ ಡಿ.ಕೆ.ಶಿವಕುಮಾರ್ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ರಮೇಶ್ ಜಾರಕಿಹೊಳಿ ಬೆಂಬಲಿಗರು ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರತಿಭಟನಾಕಾರ ರಮೇಶ್ ಬೆಂಬಲಿಗರು ಸಾಂಬ್ರಾ ಏರ್ಪೋರ್ಟ್ ತಲುಪಿದ್ದಾರೆ. ಡಿ.ಕೆ. ಶಿವಕುಮಾರ್ ವಿರುದ್ಧ ಪ್ರತಿಭಟನೆ ನಡೆಸಲು ಆಗಮಿಸಿದ ಬೆಂಬಲಿಗರನ್ನು ಪೊಲೀಸರು ವಿಮಾನ ನಿಲ್ದಾಣದ ಮುಂಭಾಗದಲ್ಲೇ ತಡೆದಿದ್ದಾರೆ. ಗೋಕಾಕ್ ಸೇರಿ ವಿವಿಧ ಕಡೆಗಳಿಂದ ಆಗಮಿಸಿದ ಬೆಂಬಲಿಗರು, ವಿಮಾನ ನಿಲ್ದಾಣದ ಸಮೀಪವಿರುವ ಮೈದಾನದಲ್ಲಿ ಜಮಾವಣೆಗೊಂಡಿದ್ದಾರೆ.



ಡಿ.ಕೆ. ಶಿವಕುಮಾರ್ ಬಂಧಿಸುವಂತೆ ಬೆಂಬಲಿಗರ ಘೋಷಣೆ
ಸಾಂಬ್ರಾ ಏರ್ಪೋರ್ಟ್ ಬಳಿ ಧರಣಿ ನಡೆಸುತ್ತಿರುವ ರಮೇಶ್ ಬೆಂಬಲಿಗರು ಕಪ್ಪುಬಾವುಟ ಹಿಡಿದು ‘ಗೋ ಬ್ಯಾಕ್ ಡಿಕೆಶಿ’ ಎಂದು ಘೋಷಣೆ ಕೂಗಿ ಆಕ್ರೋಶ ಹೊರಹಾಕುತ್ತಿದ್ದಾರೆ. ಏರ್ಪೋರ್ಟ್ ಸಮೀಪವಿರುವ ಮೈದಾನದಲ್ಲಿ ಪ್ರತಿಭಟನೆ ಮಾಡುತ್ತಿದ್ದಾರೆ.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 04:01 pm
Mangalore Correspondent
ದೇವಸ್ಥಾನಕ್ಕೆ ಹೊರಟಿದ್ದ ಬಾಲಕನ ಶವ ಬಾವಿಯಲ್ಲಿ ಪತ್ತ...
14-01-26 03:15 pm
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
15-01-26 03:01 pm
Mangalore Correspondent
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm