ಬ್ರೇಕಿಂಗ್ ನ್ಯೂಸ್
28-03-21 05:11 pm Headline Karnataka News Network ಕರ್ನಾಟಕ
ಬೆಳಗಾವಿ,ಮಾ.28: ರಮೇಶ್ ಜಾರಕಿಹೊಳಿ ಅಶ್ಲೀಲ ಸಿಡಿ ಕೇಸ್ನಲ್ಲಿ ಡಿ.ಕೆ. ಶಿವಕುಮಾರ್ ಹೆಸರು ಬಹಿರಂಗ ವಿಚಾರವಾಗಿ ಬೆಳಗಾವಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸತೀಶ್ ಜಾರಕಿಹೊಳಿ ಪ್ರತಿಕ್ರಿಯಿಸಿದ್ದಾರೆ.
ಎಸ್ಐಟಿ ತನಿಖೆಯ ಬಳಿಕ ಪ್ರಕರಣದ ಸತ್ಯಾಂಶ ಗೊತ್ತಾಗಲಿದೆ. ನಾವು, ನೀವು ಏನೂ ಮಾಡಲು ಆಗುವುದಿಲ್ಲ. ಯುವತಿ ಬರಬೇಕು, ಬಂದ್ರೆ ಸತ್ಯಾಸತ್ಯತೆ ಗೊತ್ತಾಗಲಿದೆ ಎಂದು ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.

20 ದಿನದಿಂದ ನೋಡ್ತಿರುವೆ, ದಿನಕ್ಕೊಂದು ಹೇಳಿಕೆ ಬರ್ತಿವೆ. ಎಸ್ಐಟಿಯವರೇ ಬೇಗ ಯುವತಿಯನ್ನ ಪತ್ತೆ ಹಚ್ಚಬೇಕು. ಸಿಡಿ ಕೇಸ್ನ ಸತ್ಯಾಂಶ ಬಂದ ಮೇಲೆ ಎಲ್ಲವೂ ಗೊತ್ತಾಗಲಿದೆ. ಪೊಲೀಸರು ಆದಷ್ಟುಬೇಗ ಸತ್ಯಾಂಶ ರಾಜ್ಯದ ಜನತೆಗೆ ತಿಳಿಸಲಿ. ಯುವತಿ ಬಂದು ಹೇಳಿಕೆ ಕೊಟ್ಟ ಬಳಿಕ ಕ್ರಮ ಕೈಗೊಳ್ಳಬೇಕು. ಸಿಡಿ ಕೇಸ್ ಬಿಜೆಪಿ, ಕಾಂಗ್ರೆಸ್ಗೆ ಪ್ಲಸ್, ಮೈನಸ್ ಆಗಲ್ಲ ಎಂದು ಬೆಳಗಾವಿ ‘ಕೈ’ ಅಭ್ಯರ್ಥಿ ಹಾಗೂ ರಮೇಶ್ ಸಹೋದರ ಸತೀಶ್ ಜಾರಕಿಹೊಳಿ ಹೇಳಿಕೆ ನೀಡಿದ್ದಾರೆ.
ಡಿ.ಕೆ. ಶಿವಕುಮಾರ್ ಬೆಳಗಾವಿಗೆ ಬರಲು ಕೆಲ ಕಾರ್ಯಕರ್ತರಿಂದ ವಿರೋಧ ವ್ಯಕ್ತವಾಗಿದೆ. ಅಶ್ಲೀಲ ಸಿಡಿ ವಿಚಾರದಲ್ಲಿ ಕೆಪಿಸಿಸಿ ಅಧ್ಯಕ್ಷರ ಹೆಸರು ಕೇಳಿಬಂದ ಹಿನ್ನೆಲೆ ಕೆಲ ಕಾರ್ಯಕರ್ತರು ಶಿವಕುಮಾರ್ ಭೇಟಿ ವಿರೋಧಿಸಿದ್ದಾರೆ. ಈ ಬಗ್ಗೆಯೂ ಸತೀಶ್ ಜಾರಕಿಹೊಳಿ ತಮ್ಮ ಅಭಿಪ್ರಾಯ ತಿಳಿಸಿದ್ದಾರೆ.
ಕಾಂಗ್ರೆಸ್ನ ಕೆಲ ಕಾರ್ಯಕರ್ತರ ಹೇಳಿಕೆ ಅವರ ವೈಯಕ್ತಿಕ ವಿಚಾರ. ರಮೇಶ್ ಬೆಂಬಲಿಗರ ಪ್ರತಿಭಟನೆಗೂ, ನಮಗೂ ಸಂಬಂಧವಿಲ್ಲ. ಬೆಳಗಾವಿ ಜಿಲ್ಲೆಯ ಗೋಕಾಕ್ನಲ್ಲಿ ರಮೇಶ್ ಬೆಂಬಲಿಗರು, ಬೆಂಗಳೂರಲ್ಲಿ ಡಿಕೆಶಿ ಬೆಂಬಲಿಗರು ಪ್ರತಿಭಟನೆ ಮಾಡ್ತಿದ್ದಾರೆ. ನಾವು ಇಂದು ಸಂಜೆ ಡಿ.ಕೆ. ಶಿವಕುಮಾರ್ ಅಧ್ಯಕ್ಷತೆಯಲ್ಲಿ ಸಭೆ ನಡೆಸುತ್ತೇವೆ. ನಾಳೆ ಬೆಳಗ್ಗೆ 11 ಗಂಟೆಗೆ ನಾಮಪತ್ರ ಸಲ್ಲಿಸುತ್ತೇವೆ ಎಂದು ಸತೀಶ್ ಹೇಳಿದ್ದಾರೆ.



ಬೆಳಗಾವಿಯಲ್ಲಿ ಡಿ.ಕೆ. ಶಿವಕುಮಾರ್ ವಿರುದ್ಧ ರಮೇಶ್ ಬೆಂಬಲಿಗರ ಪ್ರತಿಭಟನೆ
ಬೆಳಗಾವಿಗೆ ಡಿ.ಕೆ.ಶಿವಕುಮಾರ್ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ರಮೇಶ್ ಜಾರಕಿಹೊಳಿ ಬೆಂಬಲಿಗರು ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರತಿಭಟನಾಕಾರ ರಮೇಶ್ ಬೆಂಬಲಿಗರು ಸಾಂಬ್ರಾ ಏರ್ಪೋರ್ಟ್ ತಲುಪಿದ್ದಾರೆ. ಡಿ.ಕೆ. ಶಿವಕುಮಾರ್ ವಿರುದ್ಧ ಪ್ರತಿಭಟನೆ ನಡೆಸಲು ಆಗಮಿಸಿದ ಬೆಂಬಲಿಗರನ್ನು ಪೊಲೀಸರು ವಿಮಾನ ನಿಲ್ದಾಣದ ಮುಂಭಾಗದಲ್ಲೇ ತಡೆದಿದ್ದಾರೆ. ಗೋಕಾಕ್ ಸೇರಿ ವಿವಿಧ ಕಡೆಗಳಿಂದ ಆಗಮಿಸಿದ ಬೆಂಬಲಿಗರು, ವಿಮಾನ ನಿಲ್ದಾಣದ ಸಮೀಪವಿರುವ ಮೈದಾನದಲ್ಲಿ ಜಮಾವಣೆಗೊಂಡಿದ್ದಾರೆ.



ಡಿ.ಕೆ. ಶಿವಕುಮಾರ್ ಬಂಧಿಸುವಂತೆ ಬೆಂಬಲಿಗರ ಘೋಷಣೆ
ಸಾಂಬ್ರಾ ಏರ್ಪೋರ್ಟ್ ಬಳಿ ಧರಣಿ ನಡೆಸುತ್ತಿರುವ ರಮೇಶ್ ಬೆಂಬಲಿಗರು ಕಪ್ಪುಬಾವುಟ ಹಿಡಿದು ‘ಗೋ ಬ್ಯಾಕ್ ಡಿಕೆಶಿ’ ಎಂದು ಘೋಷಣೆ ಕೂಗಿ ಆಕ್ರೋಶ ಹೊರಹಾಕುತ್ತಿದ್ದಾರೆ. ಏರ್ಪೋರ್ಟ್ ಸಮೀಪವಿರುವ ಮೈದಾನದಲ್ಲಿ ಪ್ರತಿಭಟನೆ ಮಾಡುತ್ತಿದ್ದಾರೆ.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
15-07-26 07:40 pm
HK News Staffer
ಉಡುಪಿ ; ಹೆದ್ದಾರಿ ಮಧ್ಯದಲ್ಲೇ ಟೇಬಲ್ ಹಾಕಿ ಟಿವಿ, ಮ...
15-07-26 07:02 pm
ಮುಕ್ಕ ಶ್ರೀನಿವಾಸ್ ಕಾಲೇಜು ಎಂಬಿಬಿಎಸ್ ವಿದ್ಯಾರ್ಥಿನ...
15-07-26 01:17 pm
Kasaragod car Accident: ಕಾಸರಗೋಡಿನಲ್ಲಿ ಡೆಡ್ಲಿ...
15-07-26 12:40 pm
ಟ್ರಾಫಿಕ್ ದಂಡ ಕಟ್ಟಲು ಎಪಿಕೆ ಫೈಲ್ ಡೌನ್ಲೋಡ್ ಮಾಡಲು...
14-07-26 09:13 pm