ಬ್ರೇಕಿಂಗ್ ನ್ಯೂಸ್
29-03-21 05:15 pm Headline Karnataka News Network ಕರ್ನಾಟಕ
ಬೆಂಗಳೂರು, ಮಾ.29: ಶಿವಮೊಗ್ಗದ ಸ್ಫೋಟ ಪ್ರಕರಣದ ಬಳಿಕ ನಿಂತು ಹೋಗಿರುವ ಗಣಿಗಳನ್ನು ಮತ್ತೆ ಪುನರಾರಂಭಿಸಲು ಷರತ್ತುಬದ್ಧ ಅನುಮತಿ ನೀಡಲಾಗುವುದು ಎಂದು ಗಣಿ ಮತ್ತು ಭೂವಿಜ್ಞಾನ ಸಚಿವ ಮುರುಗೇಶ್ ನಿರಾಣಿ ಹೇಳಿದ್ದಾರೆ.
ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಗಣಿಗಳನ್ನು ಪುನರ್ ಆರಂಭಿಸುವವರು 90 ದಿನಗಳ ಒಳಗೆ ಗಣಿ ಮತ್ತು ಸುರಕ್ಷತಾ ವಿಭಾಗದ ಮಹಾನಿರ್ದೇಶಕರಿಂದ (ಡಿಜಿಎಂಎಸ್) ಅನುಮತಿ ಪಡೆಯುವುದು ಕಡ್ಡಾಯ ಎಂದು ತಿಳಿಸಿದ್ದಾರೆ.
ರಾಜ್ಯದಲ್ಲಿ ಡಿಜಿಎಂಎಸ್ ಪರವಾನಗಿ ಪಡೆದು ನಡೆಯುವ ಗಣಿಗಳು ಕೇವಲ ಹತ್ತು ಶೇಕಡಾ ಅಷ್ಟೇ. ಉಳಿದ 90 ಶೇಕಡಾ ಗಣಿಗಳು ಈ ಅನುಮತಿಯನ್ನು ಹೊಂದಿಲ್ಲ. ಈ ರೀತಿ ಅನುಮತಿ ಪಡೆಯದ ಕಲ್ಲಿನ ಕೋರೆಗಳೇ ರಾಜ್ಯದಲ್ಲಿ 2500ಕ್ಕೂ ಹೆಚ್ಚು ಇದೆ. ಡಿಜಿಎಂಎಸ್ ಅನುಮತಿ ಪಡೆಯದ ಹೊರತು ಕಲ್ಲಿನ ಕೋರೆ ಪುನರಾರಂಭ ಸಾಧ್ಯವಿಲ್ಲ ಎಂದು ನಿರಾಣಿ ತಿಳಿಸಿದ್ದಾರೆ.

ಗಣಿಗಳ ಚಟುವಟಿಕೆ ನಿಂತು ಹೋದ ಕಾರಣ 300 ಕೋಟಿಯಷ್ಟು ನಷ್ಟವಾಗಿದೆ. ಹಲವಾರು ಗಣಿಗಳಲ್ಲಿ ಕಾರ್ಮಿಕರನ್ನು ತೆಗೆದು ಹಾಕಿದ್ದು, ಉದ್ಯೋಗ ನಷ್ಟವಾಗಿದೆ. ಗಣಿ ಸ್ಥಗಿತಗೊಂಡ ಕಾರಣ ಕಟ್ಟಡಗಳ ನಿರ್ಮಾಣ ಕಾರ್ಯ ನಿಂತು ಹೋಗಿದ್ದು ಭಾರೀ ನಷ್ಟ ಅನುಭವಿಸುತ್ತಿದ್ದಾರೆ. ಹೀಗಾಗಿ ಒಂದೆಡೆ ರಿಯಲ್ ಎಸ್ಟೇಟ್ ವ್ಯವಹಾರಕ್ಕೆ ನಷ್ಟವಾಗಿದೆ. ಇದರಿಂದಾಗಿ ಗಣಿ ಚಟುವಟಿಕೆಯಲ್ಲಿ ತೊಡಗಿರುವ ಮಂದಿ ಗಣಿಗಾರಿಕೆ ಪುನರಾರಂಭಿಸಲು ಕೋರಿದ್ದಾರೆ. ಈ ಬಗ್ಗೆ ಸಿಎಂ ಜೊತೆ ಸಭೆ ನಡೆಸಿದ್ದು, ಯಾವುದೇ ಕಾರಣಕ್ಕೂ ಡಿಜಿಎಂಎಸ್ ಅನುಮತಿ ಇಲ್ಲದೆ ಗಣಿಗಾರಿಕೆ ನಡೆಸಲು ಅವಕಾಶ ನೀಡಿಲ್ಲ.
ಡಿಜಿಎಂಎಸ್ ಅನುಮತಿಯಿಲ್ಲದೆ ಸ್ಫೋಟಕಗಳನ್ನು ಖರೀದಿಸಲು ಮತ್ತು ಇರಿಸಿಕೊಳ್ಳಲು ಗಣಿಗಳಿಗೆ ಅವಕಾಶ ಇಲ್ಲ. ಎರಡು ಕೆಜಿಯಷ್ಟು ಸ್ಫೋಟಕ ಗಣಿಗಳಲ್ಲಿ ಬಳಸಲು ಡಿಜಿಎಂಎಸ್ ಅನುಮತಿ ಬೇಕಿಲ್ಲ ಎಂದರು.
quarries that were inactive after quarry blast will now go active in Karnataka minister Murugesh Nirani
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
04-05-26 01:16 pm
HK News Staffer
ತಮಿಳರ ಊರಲ್ಲಿ ನಟ ವಿಜಯ್ ಕಮಾಲ್ ; ದ್ರಾವಿಡ ಪಕ್ಷ ಬದ...
04-05-26 11:11 am
ಪೆಸಿಫಿಕ್ ಸಾಗರದಲ್ಲಿ ಎಲ್ ನಿನೋ ಎಫೆಕ್ಟ್ ; ತೀವ್ರ ಬ...
03-05-26 05:18 pm
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm