ಬ್ರೇಕಿಂಗ್ ನ್ಯೂಸ್
29-03-21 05:15 pm Headline Karnataka News Network ಕರ್ನಾಟಕ
ಬೆಂಗಳೂರು, ಮಾ.29: ಶಿವಮೊಗ್ಗದ ಸ್ಫೋಟ ಪ್ರಕರಣದ ಬಳಿಕ ನಿಂತು ಹೋಗಿರುವ ಗಣಿಗಳನ್ನು ಮತ್ತೆ ಪುನರಾರಂಭಿಸಲು ಷರತ್ತುಬದ್ಧ ಅನುಮತಿ ನೀಡಲಾಗುವುದು ಎಂದು ಗಣಿ ಮತ್ತು ಭೂವಿಜ್ಞಾನ ಸಚಿವ ಮುರುಗೇಶ್ ನಿರಾಣಿ ಹೇಳಿದ್ದಾರೆ.
ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಗಣಿಗಳನ್ನು ಪುನರ್ ಆರಂಭಿಸುವವರು 90 ದಿನಗಳ ಒಳಗೆ ಗಣಿ ಮತ್ತು ಸುರಕ್ಷತಾ ವಿಭಾಗದ ಮಹಾನಿರ್ದೇಶಕರಿಂದ (ಡಿಜಿಎಂಎಸ್) ಅನುಮತಿ ಪಡೆಯುವುದು ಕಡ್ಡಾಯ ಎಂದು ತಿಳಿಸಿದ್ದಾರೆ.
ರಾಜ್ಯದಲ್ಲಿ ಡಿಜಿಎಂಎಸ್ ಪರವಾನಗಿ ಪಡೆದು ನಡೆಯುವ ಗಣಿಗಳು ಕೇವಲ ಹತ್ತು ಶೇಕಡಾ ಅಷ್ಟೇ. ಉಳಿದ 90 ಶೇಕಡಾ ಗಣಿಗಳು ಈ ಅನುಮತಿಯನ್ನು ಹೊಂದಿಲ್ಲ. ಈ ರೀತಿ ಅನುಮತಿ ಪಡೆಯದ ಕಲ್ಲಿನ ಕೋರೆಗಳೇ ರಾಜ್ಯದಲ್ಲಿ 2500ಕ್ಕೂ ಹೆಚ್ಚು ಇದೆ. ಡಿಜಿಎಂಎಸ್ ಅನುಮತಿ ಪಡೆಯದ ಹೊರತು ಕಲ್ಲಿನ ಕೋರೆ ಪುನರಾರಂಭ ಸಾಧ್ಯವಿಲ್ಲ ಎಂದು ನಿರಾಣಿ ತಿಳಿಸಿದ್ದಾರೆ.

ಗಣಿಗಳ ಚಟುವಟಿಕೆ ನಿಂತು ಹೋದ ಕಾರಣ 300 ಕೋಟಿಯಷ್ಟು ನಷ್ಟವಾಗಿದೆ. ಹಲವಾರು ಗಣಿಗಳಲ್ಲಿ ಕಾರ್ಮಿಕರನ್ನು ತೆಗೆದು ಹಾಕಿದ್ದು, ಉದ್ಯೋಗ ನಷ್ಟವಾಗಿದೆ. ಗಣಿ ಸ್ಥಗಿತಗೊಂಡ ಕಾರಣ ಕಟ್ಟಡಗಳ ನಿರ್ಮಾಣ ಕಾರ್ಯ ನಿಂತು ಹೋಗಿದ್ದು ಭಾರೀ ನಷ್ಟ ಅನುಭವಿಸುತ್ತಿದ್ದಾರೆ. ಹೀಗಾಗಿ ಒಂದೆಡೆ ರಿಯಲ್ ಎಸ್ಟೇಟ್ ವ್ಯವಹಾರಕ್ಕೆ ನಷ್ಟವಾಗಿದೆ. ಇದರಿಂದಾಗಿ ಗಣಿ ಚಟುವಟಿಕೆಯಲ್ಲಿ ತೊಡಗಿರುವ ಮಂದಿ ಗಣಿಗಾರಿಕೆ ಪುನರಾರಂಭಿಸಲು ಕೋರಿದ್ದಾರೆ. ಈ ಬಗ್ಗೆ ಸಿಎಂ ಜೊತೆ ಸಭೆ ನಡೆಸಿದ್ದು, ಯಾವುದೇ ಕಾರಣಕ್ಕೂ ಡಿಜಿಎಂಎಸ್ ಅನುಮತಿ ಇಲ್ಲದೆ ಗಣಿಗಾರಿಕೆ ನಡೆಸಲು ಅವಕಾಶ ನೀಡಿಲ್ಲ.
ಡಿಜಿಎಂಎಸ್ ಅನುಮತಿಯಿಲ್ಲದೆ ಸ್ಫೋಟಕಗಳನ್ನು ಖರೀದಿಸಲು ಮತ್ತು ಇರಿಸಿಕೊಳ್ಳಲು ಗಣಿಗಳಿಗೆ ಅವಕಾಶ ಇಲ್ಲ. ಎರಡು ಕೆಜಿಯಷ್ಟು ಸ್ಫೋಟಕ ಗಣಿಗಳಲ್ಲಿ ಬಳಸಲು ಡಿಜಿಎಂಎಸ್ ಅನುಮತಿ ಬೇಕಿಲ್ಲ ಎಂದರು.
quarries that were inactive after quarry blast will now go active in Karnataka minister Murugesh Nirani
01-03-26 09:20 pm
HK News Staffer
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
ಖಮೇನಿ ಹತ್ಯೆ ಖಂಡನೀಯ, ಇರಾನ್ ಮೇಲಿನ ಅಮೆರಿಕ ಯುದ್ಧ...
01-03-26 04:51 pm
01-03-26 09:52 am
HK News Staffer
ದುಬೈ, ಅಬುಧಾಬಿ ಮೇಲೆ ಇರಾನ್ ಮಿಸೈಲ್ ದಾಳಿ ; ಜಗತ್ತಿ...
28-02-26 10:54 pm
ಗಲ್ಫ್ ರಾಷ್ಟ್ರಗಳಿಗೆ ವಿಮಾನ ಸಂಚಾರ ವ್ಯತ್ಯಯ ; ಏರ್...
28-02-26 07:17 pm
ಇರಾನ್ ಮೇಲೆ ಮುಗಿಬಿದ್ದ ಅಮೆರಿಕ-ಇಸ್ರೇಲ್ ಪಡೆಗಳು ;...
28-02-26 05:28 pm
ತ್ರಿಷಾ ಬಿರುಗಾಳಿ ; ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ್...
28-02-26 01:08 pm
01-03-26 08:37 pm
HK News Staffer
PSI Nasir Hussain: ಉಡುಪಿ ; ಮ್ಯಾರಥಾನಲ್ಲಿ ಪಾಲ್ಗ...
01-03-26 04:07 pm
ಹುಲಿಕಲ್ ಘಾಟಿಯಲ್ಲಿ ದುರ್ಗಾಂಬಾ ಬಸ್ ಗೆ ಬೆಂಕಿ ; ಕು...
28-02-26 08:53 pm
Mangaluru Muscat Flight: ಮಂಗಳೂರು- ಮಸ್ಕತ್ ನಡುವ...
27-02-26 08:59 pm
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm