ಬ್ರೇಕಿಂಗ್ ನ್ಯೂಸ್
22-08-20 01:05 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 22: ಕರ್ತವ್ಯ ನಿರ್ವಹಿಸುವ ವೇಳೆ ಮಾಸ್ಕ್ ಧರಿಸದೆ, ಸಾಮಾಜಿಕ ಅಂತರ ಪಾಲನೆ ಮಾಡದೆ ಪಾರ್ಕ್ನಲ್ಲಿ ಗುಂಪು ಸೇರಿದ್ದ 6 ಮಂದಿ ಪೊಲೀಸರನ್ನು ಅಮಾನತುಗೊಳಿಸಿ ಸಂಚಾರ ವಿಭಾಗದ ಡಿಸಿಪಿ ಸೌಮ್ಯಲತಾ ಆದೇಶ ಹೊರಡಿಸಿದ್ದಾರೆ.
ಜಾಲಹಳ್ಳಿ ಸಂಚಾರ ಠಾಣೆಯ ಎಎಸ್ಐ ಮಂಜುನಾಥಯ್ಯ, ಹೆಡ್ ಕಾನ್ಸ್ಟೇಬಲ್ ನಾಗರಾಜು, ಕಾನ್ಸ್ ಟೇಬಲ್ಗಳಾದ ಪದ್ಮನಾಭ್, ಮಧುಸೂಧನ್, ವಿಶ್ವನಾಥ್ ಹಾಗೂ ಮಹಿಳಾ ಕಾನ್ಸ್ಟೇಬಲ್ ಸುಜನಾ ಅಮಾನತುಗೊಂಡವರು
ಜಾಲಹಳ್ಳಿ ಸಂಚಾರ ಠಾಣೆಯ ಇನ್ಸ್ಪೆಕ್ಟರ್ ಆಗಸ್ಟ್ 11ರಂದು ಈ ಆರು ಸಿಬ್ಬಂದಿಯನ್ನು ಗಂಗಮ್ಮನಗುಡಿ ಠಾಣೆ ವ್ಯಾಪ್ತಿಯಲ್ಲಿ ಕರ್ತವ್ಯಕ್ಕೆ ನಿಯೋಜಿಸಿದ್ದರು. ಕೋಬ್ರಾ ಡ್ಯೂಟಿಗೆ, ಜಾಲಹಳ್ಳಿ ಜಂಕ್ಷನ್, ಗಂಗಮ್ಮನ ವೃತ್ತ, ಸಾಹಿತ್ಯ ಕೂಟ ಜಂಕ್ಷನ್ ಸೇರಿ ಹಲವೆಡೆ ಸಂಚಾರ ನಿರ್ವಹಣೆಯ ಕರ್ತವ್ಯಕ್ಕೆ ಇವರನ್ನು ನಿಯೋಜಿಸಲಾಗಿತ್ತು. ಆ ವೇಳೆ ಹಿರಿಯ ಅಧಿಕಾರಿಗಳು ಕೊರೊನಾ ಸಂಬಂಧ ಅಗತ್ಯ ಮುಂಜಾಗ್ರತಾ ಕ್ರಮ ವಹಿಸುವಂತೆ ಸೂಚಿಸಿದ್ದು, ಅವರ ಸಲಹೆಯನ್ನು ಲೆಕ್ಕಿಸದೇ ನಿರ್ಲಕ್ಷ್ಯ ಮಾಡಿ, ಈ 6 ಮಂದಿ ಸಾಹಿತ್ಯ ಕೂಟ ಬಳಿಯ ಪಾರ್ಕ್ನಲ್ಲಿ ಗುಂಪು ಸೇರಿದ್ದರು ಎನ್ನಲಾಗಿದೆ.
ಈ ವೇಳೆ ಮಾಸ್ಕ್ ಧರಿಸಿಲ್ಲ ಹಾಗೂ ವ್ಯಕ್ತಿಗತ ಅಂತರ ಕಾಯ್ದುಕೊಂಡಿರಲಿಲ್ಲ ಎಂಬ ಮಾಹಿತಿ ಪಡೆದ ಡಿಸಿಪಿ ಸೌಮ್ಯಲತಾ, ಕರ್ತವ್ಯದ ವೇಳೆ ನಿರ್ಲಕ್ಷ್ಯ ಹಾಗೂ ಬೇಜವಾಬ್ದಾರಿತನ ತೋರಿದ ಆರೋಪದ ಮೇಲೆ ಸಿಬ್ಬಂದಿಯನ್ನ ಅಮಾನತು ಮಾಡಿದ್ದಾರೆ. ಹಾಗೂ ಅಮಾನತು ಅವಧಿಯಲ್ಲಿ ಖಾಸಗಿ ನೌಕರಿ ಭತ್ಯೆ ಹಾಗೂ ವ್ಯವಹಾರ ಮಾಡಿದರೆ ಜೀವನ ಭತ್ಯೆ ಮುಟ್ಟುಗೋಲು ಹಾಕಿಕೊಳ್ಳುವುದಾಗಿ ಖಡಕ್ ಎಚ್ಚರಿಕೆಯನ್ನು ಸಹ ನೀಡಿದ್ದಾರೆ.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
14-07-26 07:55 pm
HK News Staffer
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm