ಬ್ರೇಕಿಂಗ್ ನ್ಯೂಸ್
04-04-21 09:13 pm Headline Karnataka News Network ಕರ್ನಾಟಕ
ಮಂಗಳೂರು, ಏಪ್ರಿಲ್ 4 : ಬೆಂಗಳೂರು- ಮಂಗಳೂರು ನಡುವೆ ಏಪ್ರಿಲ್ 10ರಿಂದ ಪ್ರತಿದಿನ ಮೂರು ಎಕ್ಸ್ಪ್ರೆಸ್ ರೈಲುಗಳು ಸಂಚಾರ ನಡೆಸಲಿದ್ದು ರಾಜಧಾನಿ ಮತ್ತು ಕರಾವಳಿ ನಡುವೆ ಸಂಚರಿಸುವ ಜನರಿಗೆ ಅನುಕೂಲವಾಗಲಿದೆ.
ಪ್ರತಿದಿನ ಮೂರು ಎಕ್ಸ್ಪ್ರೆಸ್ ರೈಲುಗಳು ಕುಣಿಗಲ್, ಶ್ರವಣಬೆಳಗೊಳ ಮತ್ತು ಹಾಸನ ಮಾರ್ಗವಾಗಿ ಬೆಂಗಳೂರಿನಿಂದ ಮಂಗಳೂರಿಗೆ ಸಂಚಾರ ನಡೆಸಲಿವೆ. ಹಾಸನ- ಶ್ರವಣಬೆಳಗೊಳ- ಚಿಕ್ಕಬಾಣಾವರ ನಡುವೆ ನೂತನ ರೈಲು ಮಾರ್ಗ ನಿರ್ಮಾಣವಾಗಿದ್ದು ಅದೀಗ ಉಪಯೋಗಕ್ಕೆ ಬರುತ್ತಿದೆ.
ಈ ಮೂರು ರೈಲುಗಳ ಜೊತೆ ಬೆಂಗಳೂರು - ಹಾಸನ ನಡುವೆ ಸಂಚರಿಸುತ್ತಿರುವ ಡೆಮೋ ರೈಲು ಜೊತೆಗೆ ಮತ್ತೆರಡು ರೈಲುಗಳ ಸಂಚಾರ ಎಂದಿನಂತೆ ಇರಲಿವೆ. ಸೊಲ್ಹಾಪುರ- ಹಾಸನ ನಡುವೆ ಪ್ರತಿದಿನ ಸಂಚರಿಸುವ ರೈಲು ಸಹ ಏಪ್ರಿಲ್ 10 ರಿಂದ ಆರಂಭವಾಗುತ್ತಿದೆ. ಕೊರೊನಾ ಲಾಕ್ಡೌನ್ ವರ್ಷದ ಬಳಿಕ ಮೊದಲ ಬಾರಿಗೆ ರೈಲು ಪೂರ್ಣ ಮಟ್ಟದಲ್ಲಿ ಸಂಚಾರಕ್ಕೆ ಬರಲಿದೆ.

ಬೆಂಗಳೂರು - ಮಂಗಳೂರು ನಡುವೆ ಶ್ರವಣಬೆಳಗೊಳ ಮಾರ್ಗವಾಗಿ ರಾತ್ರಿ 2 ರೈಲು, ಬೆಳಗ್ಗೆ 1 ರೈಲು ಸಂಚಾರ ನಡೆಸಲಿದೆ. ಬೆಂಗಳೂರು, ಮಂಗಳೂರು, ಹಾಸನ ಜಿಲ್ಲೆಗಳ ನಡುವೆ ಸಂಚರಿಸುವವರಿಗೆ ಸಹಾಯಕವಾಗಲಿದೆ.
ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ನಿಲ್ದಾಣ (ಮೆಜೆಸ್ಟಿಕ್)ನಿಂದ ಸಂಜೆ 6.40ಕ್ಕೆ ಹೊರಡುವ ರೈಲು 9.30ಕ್ಕೆ ಹಾಸನವನ್ನು ತಲುಪಲಿದೆ. ಮರುದಿನ ಬೆಳಗ್ಗೆ 8.35ಕ್ಕೆ ಕಾರವಾರ ತಲುಪಲಿದೆ. ಈ ರೈಲು ಮಂಗಳೂರು ನಿಲ್ದಾಣಕ್ಕೆ ಹೋಗದೆ ಪಡೀಲ್ ರೈಲು ನಿಲ್ದಾಣದಿಂದ ಕಾರವಾರಕ್ಕೆ ಸಂಚರಿಸಲಿದೆ. ಕಾರವಾರದಿಂದ ಸಂಜೆ 6.30ಕ್ಕೆ ಹೊರಡುವ ರೈಲು ಮರುದಿನ ಬೆಳಗ್ಗೆ 7 ಗಂಟೆಗೆ ಬೆಂಗಳೂರಿನ ಮೆಜೆಸ್ಟಿಕ್ ತಲುಪಲಿದೆ.

ಬೆಂಗಳೂರು-ಹಾಸನ- ಮಂಗಳೂರು
ಪ್ರತಿದಿನ ರಾತ್ರಿ 9.30ಕ್ಕೆ ಬೆಂಗಳೂರಿನ ಮೆಜೆಸ್ಟಿಕ್ನಿಂದ ಹೊರಡುವ ರೈಲು 12.30ಕ್ಕೆ ಹಾಸನ ತಲುಪಲಿದೆ. ಮರುದಿನ ಬೆಳಗ್ಗೆ 7.50ಕ್ಕೆ ಮಂಗಳೂರು ಸೆಂಟ್ರಲ್ ನಿಲ್ದಾಣ ತಲುಪಲಿದೆ. ಮಂಗಳೂರಿನಿಂದ ಬೆಳಗ್ಗೆ 8.50ಕ್ಕೆ ಹೊರಡುವ ರೈಲು ಸಂಜೆ 7.30ಕ್ಕೆ ಬೆಂಗಳೂರಿಗೆ ಬಂದು ತಲುಪಲಿದೆ.
ಯಶವಂತಪುರ- ಹಾಸನ-ಮಂಗಳೂರು ರೈಲು
ಬೆಂಗಳೂರು ನಗರದ ಯಶವಂತಪುರದಿಂದ ಪ್ರತಿದಿನ ಬೆಳಗ್ಗೆ 7.10ಕ್ಕೆ ಹೊರಡುವ ಎಕ್ಸ್ಪ್ರೆಸ್ ರೈಲು 10.05ಕ್ಕೆ ಹಾಸನ ತಲುಪಲಿದೆ. ಹಾಸನದಿಂದ ಹೊರಟ ರೈಲು ಸಂಜೆ 4.55ಕ್ಕೆ ಮಂಗಳೂರು ಜಂಕ್ಷನ್ ತಲುಪಲಿದೆ. ವಾರದಲ್ಲಿ 4 ದಿನ ಮಂಗಳೂರು ಜಂಕ್ಷನ್ ಮತ್ತು 3 ದಿನ ಕಾರವಾರದ ತನಕ ಈ ರೈಲು ಸಂಚಾರ ನಡೆಸಲಿದೆ.
ವಾರದ 7 ದಿನವೂ ಸಂಚಾರ
ಇಷ್ಟು ದಿನ ವಾರದಲ್ಲಿ 4 ದಿನ ಕುಣಿಗಲ್, ಶ್ರವಣಬೆಳಗೊಳ ಹಾಸನ ಮಾರ್ಗವಾಗಿ, ವಾರದಲ್ಲಿ ಮೂರು ದಿನ ಮಂಡ್ಯ, ಮೈಸೂರು, ಹಾಸನ ಮಾರ್ಗವಾಗಿ ಸಂಚಾರ ನಡೆಸುತ್ತಿದ್ದ ಎಕ್ಸ್ಪ್ರೆಸ್ ರೈಲು ಏಪ್ರಿಲ್ 10ರಿಂದ ವಾರದ 7 ದಿನವೂ ಬೆಂಗಳೂರಿನಿಂದ ಕುಣಿಗಲ್, ಶ್ರವಣಬೆಳಗೊಳ, ಹಾಸನ ಮಾರ್ಗವಾಗಿ ಮಂಗಳೂರು ಸೆಂಟ್ರಲ್ಗೆ ಸಂಚಾರ ನಡೆಸಲಿದೆ.
Three train services to start everyday from Mangalore to Bangalore from April 10th stated railway department
01-03-26 09:20 pm
HK News Staffer
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
ಖಮೇನಿ ಹತ್ಯೆ ಖಂಡನೀಯ, ಇರಾನ್ ಮೇಲಿನ ಅಮೆರಿಕ ಯುದ್ಧ...
01-03-26 04:51 pm
01-03-26 09:52 am
HK News Staffer
ದುಬೈ, ಅಬುಧಾಬಿ ಮೇಲೆ ಇರಾನ್ ಮಿಸೈಲ್ ದಾಳಿ ; ಜಗತ್ತಿ...
28-02-26 10:54 pm
ಗಲ್ಫ್ ರಾಷ್ಟ್ರಗಳಿಗೆ ವಿಮಾನ ಸಂಚಾರ ವ್ಯತ್ಯಯ ; ಏರ್...
28-02-26 07:17 pm
ಇರಾನ್ ಮೇಲೆ ಮುಗಿಬಿದ್ದ ಅಮೆರಿಕ-ಇಸ್ರೇಲ್ ಪಡೆಗಳು ;...
28-02-26 05:28 pm
ತ್ರಿಷಾ ಬಿರುಗಾಳಿ ; ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ್...
28-02-26 01:08 pm
01-03-26 08:37 pm
HK News Staffer
PSI Nasir Hussain: ಉಡುಪಿ ; ಮ್ಯಾರಥಾನಲ್ಲಿ ಪಾಲ್ಗ...
01-03-26 04:07 pm
ಹುಲಿಕಲ್ ಘಾಟಿಯಲ್ಲಿ ದುರ್ಗಾಂಬಾ ಬಸ್ ಗೆ ಬೆಂಕಿ ; ಕು...
28-02-26 08:53 pm
Mangaluru Muscat Flight: ಮಂಗಳೂರು- ಮಸ್ಕತ್ ನಡುವ...
27-02-26 08:59 pm
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm