ಬ್ರೇಕಿಂಗ್ ನ್ಯೂಸ್
05-04-21 02:00 pm Headline Karnataka News Network ಕರ್ನಾಟಕ
ನವದೆಹಲಿ, ಎ.5: ಕರ್ನಾಟಕದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ. ಯಡಿಯೂರಪ್ಪ ವಿರುದ್ಧದ ಭ್ರಷ್ಟಾಚಾರ ಪ್ರಕರಣದಲ್ಲಿ ಬೆಂಗಳೂರಿನ ವಿಶೇಷ ನ್ಯಾಯಾಲಯದ ವಿಚಾರಣೆಗೆ ಸುಪ್ರೀಂ ಕೋರ್ಟ್ ತಡೆ ಹಾಕಿದೆ.
ಬೆಂಗಳೂರು ಉತ್ತರ ತಾಲೂಕಿನಲ್ಲಿ ಎಸ್ ಇಝೆಡ್ ಏರಿಯಾದಲ್ಲಿ 24 ಎಕ್ರೆ ಜಾಗವನ್ನು ಖಾಸಗಿಯವರಿಗೆ ಕಡಿಮೆ ದರಕ್ಕೆ ನೀಡಿದ್ದ ದೂರಿನ ಪ್ರಕರಣದಲ್ಲಿ ತನಿಖೆ ನಡೆಸಿದ್ದ ಲೋಕಾಯುಕ್ತ ಅಧಿಕಾರಿಗಳು 2012ರಲ್ಲಿ ಚಾರ್ಜ್ ಶೀಟ್ ಸಲ್ಲಿಸಿದ್ದರು. ವಿಶೇಷ ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆಗೆ ವಿಧಿಸಿದ್ದ ತಡೆಯನ್ನು ಇತ್ತೀಚೆಗೆ ಹೈಕೋರ್ಟ್ ತೆರವು ಮಾಡಿತ್ತು. ಇದರಿಂದ ಯಡಿಯೂರಪ್ಪ ವಿರುದ್ಧ ಮತ್ತೆ ತೂಗುಗತ್ತಿ ಎದುರಾಗಿತ್ತು.
ಹೈಕೋರ್ಟ್ ತೀರ್ಪಿಗೆ ವಿರುದ್ಧವಾಗಿ ಯಡಿಯೂರಪ್ಪ ಸುಪ್ರೀಂ ಕೋರ್ಟಿಗೆ ಮೇಲ್ಮನವಿ ಸಲ್ಲಿಸಿ, ಪ್ರಕರಣಕ್ಕೆ ತಡೆ ಕೇಳಿದ್ದಾರೆ. ಸುಪ್ರೀಂ ಕೋರ್ಟ್ ತಾತ್ಕಾಲಿಕ ತಡೆ ವಿಧಿಸಿದ್ದು, ಸ್ವಲ್ಪಮಟ್ಟಿಗೆ ನಿರಾಳರಾಗಿದ್ದಾರೆ. 2006ರಲ್ಲಿ ಕೆಐಎಡಿಬಿಯವರು ಕೈಗಾರಿಕೆ ಉದ್ದೇಶಕ್ಕೆ ಖರೀದಿಸಿ, ಡಿನೋಟಿಫೈ ಮಾಡಿಸಿದ್ದ ಭೂಮಿಯನ್ನು ಯಡಿಯೂರಪ್ಪ ಸಿಎಂ ಆಗಿದ್ದಾಗ ಖಾಸಗಿ ವ್ಯಕ್ತಿಗಳಿಗೆ ಕಡಿಮೆ ದರಕ್ಕೆ ನೀಡುವಂತೆ ಮಾಡಿದ್ದರು. ಇದರಿಂದ ಸರಕಾರದ ಬೊಕ್ಕಸಕ್ಕೆ ಭಾರೀ ನಷ್ಟವಾಗಿತ್ತು. ಇದರಲ್ಲಿ ಯಡಿಯೂರಪ್ಪ ಅಧಿಕಾರ ದುರುಪಯೋಗಪಡಿಸಿ ಭ್ರಷ್ಟಾಚಾರ ಎಸಗಿದ್ದಾರೆಂದು ಲೋಕಾಯುಕ್ತಕ್ಕೆ ದೂರು ನೀಡಲಾಗಿತ್ತು.
ತನಿಖೆ ನಡೆಸಿದ್ದ ಲೋಕಾಯುಕ್ತ ಅಧಿಕಾರಿಗಳು ಅಂದು ಸಿಎಂ ಆಗಿದ್ದ ಯಡಿಯೂರಪ್ಪ ವಿರುದ್ಧವೇ ಚಾರ್ಜ್ ಶೀಟ್ ಹಾಕಿ, ಸಿಎಂ ಸ್ಥಾನದಿಂದ ಇಳಿಯುವಂತೆ ಮಾಡಿದ್ದರು. ಪ್ರಕರಣ ಅಂದಿನ ಸನ್ನಿವೇಶದಲ್ಲಿ ದೇಶಾದ್ಯಂತ ಭಾರೀ ದೊಡ್ಡ ಸಂಚಲನ ಎಬ್ಬಿಸಿತ್ತು.
Karnataka Chief Minister BS Yediyurappa today caught a reprieve from the Supreme Court as a 10-year-old case against him involving land allegations has been put on hold.
19-03-25 04:42 pm
HK News Desk
"ಹೆಂಗಸರಿಗೆ ಫ್ರೀ ಕೊಟ್ಟಂತೆ ಗಂಡಸರಿಗೂ ವಾರಕ್ಕೆರಡು...
19-03-25 12:44 pm
Sowjanya case, Protest; ಸೌಜನ್ಯಾ ಪ್ರಕರಣ ; ನ್ಯಾ...
19-03-25 11:39 am
ಮಾ.22ರಂದು ಕರ್ನಾಟಕ ಬಂದ್ ; ಯಾವುದೇ ಕಾರಣಕ್ಕೂ ಬಂದ್...
18-03-25 11:02 pm
ಬಿಡದಿಯಲ್ಲಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ...
18-03-25 10:34 pm
19-03-25 07:39 pm
HK News Desk
ಕೊನೆಗೂ ಭುವಿಗಿಳಿದ ಸುನಿತಾ ವಿಲಿಯಮ್ಸ್ ; 9 ತಿಂಗಳ ತ...
19-03-25 02:10 pm
ಮಹಾರಾಷ್ಟ್ರದಲ್ಲಿ 'ಛಾವಾ' ಚಿತ್ರ ಹೊತ್ತಿಸಿದ ಕಿಚ್ಚು...
17-03-25 10:57 pm
Case against Orry at Vaishno Devi: ವೈಷ್ಣೋದೇವಿ...
17-03-25 09:43 pm
Kerala Christan girls missing, PC George: ಕೊಟ...
13-03-25 03:49 pm
19-03-25 10:13 pm
Udupi Correspondent
ಪವಾಡಕ್ಕೆ ಸಾಕ್ಷಿಯಾಗಿದೆ ತಲಪಾಡಿ ದುರ್ಗಾಪರಮೇಶ್ವರೀ...
18-03-25 10:09 pm
Electricity, Malekudiya Tribal, Belthangady:...
18-03-25 08:53 pm
Mangalore accident, Kinnigoli, Bike, Vidoe: ಕ...
18-03-25 03:15 pm
ಮಂಗಳೂರು- ಮುಂಬೈ ವಂದೇ ಭಾರತ್ ರೈಲು ಸನ್ನಿಹಿತ ; ಉಡು...
17-03-25 11:02 pm
19-03-25 08:27 pm
Mangalore Correspondent
Mangalore drugs, NCB: ಅತಿ ದೊಡ್ಡ ಡ್ರಗ್ಸ್ ಬೇಟೆ...
18-03-25 06:31 pm
Ccb Police Mangalore, Kali Yogesh, Underworld...
17-03-25 07:51 pm
Bangalore crime, Fraud, Bank Manager: ಮನೆ ಮಾರ...
16-03-25 10:39 pm
Mangalore Police, CCB, Drugs, CM: ರಾಜ್ಯದಲ್ಲೇ...
16-03-25 07:27 pm