ಬ್ರೇಕಿಂಗ್ ನ್ಯೂಸ್
10-04-21 02:47 pm Headline Karnataka News Network ಕರ್ನಾಟಕ
ಮಂಗಳೂರು, ಎ.9: ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಕೊರೊನಾ ಸೋಂಕು ತಗುಲಿದ್ದು, ಈ ಬಗ್ಗೆ ತಮ್ಮ ಟ್ವಿಟರ್ ಖಾತೆಯಲ್ಲಿ ಹೇಳಿಕೊಂಡಿದ್ದಾರೆ. ಅಲ್ಲದೆ, ತನ್ನ ಜೊತೆ ಎರಡು ದಿನಗಳಿಂದ ಸಂಪರ್ಕದಲ್ಲಿದ್ದವರೆಲ್ಲ ಟೆಸ್ಟ್ ಮಾಡಿಸಿಕೊಳ್ಳಿ ಎಂದು ಸಲಹೆಯನ್ನೂ ಮಾಡಿದ್ದಾರೆ.
#COVID19 Positive ಕಾರಣಕ್ಕೆ ನಾನು ಆಸ್ಪತ್ರೆಗೆ ದಾಖಲಾಗಿದ್ದು, ಅನಿವಾರ್ಯವಾದರೆ ದೂರವಾಣಿ ಮೂಲಕ ಸಂಪರ್ಕಿಸಬಹುದು. ಒಂದೆರಡು ದಿನಗಳಿಂದ ನನ್ನ ಸಂಪರ್ಕಕ್ಕೆ ಬಂದವರು Covid-19 ಟೆಸ್ಟ್ ಮಾಡಿಸಿಕೊಳ್ಳಿ.@BJP4Karnataka @BjpMangaluru @BJP4Udupi
— Kota Shrinivas Poojari (@KotasBJP) April 10, 2021

ಕಳೆದ ಮಾ.29ರಂದು ಕೋಟ ಶ್ರೀನಿವಾಸ ಪೂಜಾರಿಯವರು ಉಡುಪಿಯಲ್ಲಿ ಕೊರೊನಾ ಲಸಿಕೆ ಹಾಕಿಸಿಕೊಂಡಿದ್ದರು. ಆದರೂ ಸಚಿವರಿಗೆ ಒಂದೇ ವಾರದಲ್ಲಿ ಕೊರೊನಾ ಸೋಂಕು ತಗುಲಿದ್ದು, ಚರ್ಚೆಗೆ ಕಾರಣವಾಗಿದೆ. ವಿಶೇಷ ಅಂದ್ರೆ, ಕೋಟ ಶ್ರೀನಿವಾಸ ಪೂಜಾರಿಯವರು ಜಿಲ್ಲಾ ಉಸ್ತುವಾರಿ ಸಚಿವರ ನೆಲೆಯಲ್ಲಿ ಕಳೆದೆರಡು ದಿನಗಳಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಿದ ಎಲ್ಲ ಸಚಿವರ ಜೊತೆಗೂ ಕಾಣಿಸಿಕೊಂಡಿದ್ದರು.

ಎಪ್ರಿಲ್ 8 ಮತ್ತು 9ರಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಅವರ ತರವಾಡು ಮನೆಯ ಸವಣೂರು ಸಮೀಪದ ಕುಂಜಾಡಿಯಲ್ಲಿ ನಡೆದಿದ್ದ ಧರ್ಮನೇಮಕ್ಕೆಂದು ಹಲವು ಗಣ್ಯರು ಭಾಗವಹಿಸಿದ್ದರು. ಸಚಿವರಾದ ಈಶ್ವರಪ್ಪ, ಮುರುಗೇಶ್ ನಿರಾಣಿ, ಪ್ರಭು ಚೌಹಾಣ್, ಡಿಸಿಎಂ ಅಶ್ವತ್ಥ ನಾರಾಯಣ ಸೇರಿದಂತೆ ಹಲವು ಶಾಸಕರು, ಬಿಜೆಪಿ ನಾಯಕರು ಪಾಲ್ಗೊಂಡಿದ್ದು ಎಲ್ಲರ ಜೊತೆಗೂ ಕೋಟ ಶ್ರೀನಿವಾಸ ಪೂಜಾರಿಯವರು ಕಾಣಿಸಿಕೊಂಡಿದ್ದರು. ಹಿಂದಿನ ನಿಯಮಗಳ ಪ್ರಕಾರ, ಪ್ರಾಥಮಿಕ ಸಂಪರ್ಕಿತರನ್ನೆಲ್ಲ ಜಿಲ್ಲಾಧಿಕಾರಿಗಳು ಕ್ವಾರಂಟೈನ್ ಮಾಡಬೇಕಿದೆ.

ಎ.8ರಂದು ಸಂಜೆ ಮಂಗಳೂರಿನಲ್ಲಿ ಈಶ್ವರಪ್ಪ ಸುದ್ದಿಗೋಷ್ಠಿ ಕರೆದಿದ್ದ ವೇಳೆಯಲ್ಲೂ ಸಚಿವ ಕೋಟ ಮತ್ತು ಇತರೇ ಮುಖಂಡರು ಜೊತೆ ಜೊತೆಯಾಗಿ ಕುಳಿತು ಮಾಧ್ಯಮಕ್ಕೆ ಮಾಹಿತಿ ನೀಡಿದ್ದರು. ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯವರ ಸೂಚನೆ ಹೊರತಾಗಿಯೂ ಧರ್ಮನೇಮಕ್ಕೆ ಸಾವಿರಾರು ಮಂದಿ ಪಾಲ್ಗೊಂಡಿದ್ದರು. ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಆದೇಶ ಮತ್ತು ರಾಜ್ಯ ಸರಕಾರದ ಕೋವಿಡ್ ನಿಯಮಗಳನ್ನು ಧರ್ಮನೇಮದ ನೆಪದಲ್ಲಿ ಉಲ್ಲಂಘಿಸಲಾಗಿತ್ತು.

ಧರ್ಮನೇಮಕ್ಕೆ ತೆರಳಿದ್ದ ಗಣ್ಯರು, ಸಾರ್ವಜನಿಕರಲ್ಲಿ ಹೆಚ್ಚಿನವರು ಕೋವಿಡ್ ನಿಮಯಗಳನ್ನು ಪಾಲಿಸಿರಲಿಲ್ಲ. ಮುಖಕ್ಕೆ ಮಾಸ್ಕ್, ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಗಣ್ಯರು ಜೊತೆ ಜೊತೆಯಾಗಿ ಕುಳಿತುಕೊಂಡಿದ್ದು ಹಾರ ಹಾಕಿಸಿಕೊಂಡಿದ್ದ ಫೋಟೋಗಳು ಪತ್ರಿಕೆಗಳಲ್ಲೂ ಬಂದಿದ್ದವು. ಜಾಲತಾಣದಲ್ಲಿಯೂ ಪ್ರಕಟವಾಗಿತ್ತು. ಇದೀಗ ಧರ್ಮನೇಮದ ಮರುದಿನವೇ ಇಡೀ ಜಿಲ್ಲೆಯ ಉಸ್ತುವಾರಿ ಹೊಂದಿರುವ ಸಚಿವರಿಗೇ ಕೋವಿಡ್ ಸೋಂಕು ಕಂಡುಬಂದಿದೆ. ತನ್ನ ಜೊತೆಗಿದ್ದವರೆಲ್ಲ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಸಚಿವರು ಸಲಹೆ ಮಾಡಿದ್ದಾರೆ. ಇದರರ್ಥ ಧರ್ಮನೇಮಕ್ಕೆ ತನ್ನ ಜೊತೆಗೆ ಬಂದವರೆಲ್ಲ ಟೆಸ್ಟ್ ಮಾಡಿಸಿಕೊಳ್ಳಿ ಅಂತಲೇ ಅಲ್ಲವೇ ಉಸ್ತುವಾರಿಗಳೇ ?

ಹಾಗಾದರೆ, ಕೋವಿಡ್ ನಿಯಮಗಳು ಜನಸಾಮಾನ್ಯರಿಗೆ ಮಾತ್ರ ಅನ್ವಯವೇ.. ಸಾಮಾನ್ಯ ಜನರ ಮದುವೆ ಇನ್ನಿತರ ಕಾರ್ಯಕ್ರಮಗಳಿಗೆ ಮಾತ್ರ ಕೋವಿಡ್ ನಿಯಮಗಳನ್ನು ಹೇರಲಾಗ್ತಿದ್ಯಾ ಅನ್ನುವ ಸಾರ್ವಜನಿಕರ ಪ್ರಶ್ನೆಗಳಿಗೆ ಈಗ ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ನಾಯಕರು, ಸಚಿವರು ಉತ್ತರ ಕೊಡಬೇಕಾಗಿದೆ. ಯಾಕಂದ್ರೆ, ವಾರದ ಹಿಂದೆಯಷ್ಟೇ ಜಿಲ್ಲಾಧಿಕಾರಿ ರಾಜೇಂದ್ರ ಕೆ.ವಿ. ಕೋವಿಡ್ ಮಾರ್ಗಸೂಚಿ ಹೊರಡಿಸಿ, ಹೊರಾವರಣದಲ್ಲಿ ನಡೆಯುವ ಯಾವುದೇ ಕಾರ್ಯಕ್ರಮಗಳಿಗೆ 500ರಿಂದ ಹೆಚ್ಚು ಜನ ಪಾಲ್ಗೊಳ್ಳುವಂತಿಲ್ಲ. ಒಳಾಂಗಣದ ಸಭೆ, ಸಮಾರಂಭಗಳಿಗೆ 200 ಜನ ಮಾತ್ರ ಪಾಲ್ಗೊಳ್ಳಬಹುದು ಎಂದು ಆದೇಶ ಹೊರಡಿಸಿದ್ದರು.
Minister of Muzrai from Revenue Department of Karnataka Kota Srinivas Poojary Tested Positive for Covid-19 in Mangalore.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 09:04 pm
Mangalore Correspondent
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
ಜ.18ರಂದು ಮಂಗಳೂರಿನಲ್ಲಿ ಪ್ರಪ್ರಥಮ ಜಾಗತಿಕ ಬಿಲ್ಲವರ...
15-01-26 04:01 pm
ದೇವಸ್ಥಾನಕ್ಕೆ ಹೊರಟಿದ್ದ ಬಾಲಕನ ಶವ ಬಾವಿಯಲ್ಲಿ ಪತ್ತ...
14-01-26 03:15 pm
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
15-01-26 03:01 pm
Mangalore Correspondent
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm