ಬ್ರೇಕಿಂಗ್ ನ್ಯೂಸ್
10-04-21 04:21 pm Mysore Correspondent ಕರ್ನಾಟಕ
ಮೈಸೂರು, ಎ.10 : ಸುಮಾರು 11 ವರ್ಷಗಳಿಂದ 11 ಸಾವಿರ ಪುಸ್ತಕಗಳನ್ನು ಸಂಗ್ರಹಿಸಿ ಗ್ರಂಥಾಲಯ ನಿರ್ಮಿಸಿ ಸಾರ್ವಜನಿಕರ ಓದಿನ ದಾಹಕ್ಕೆ ಉಚಿತವಾಗಿ ಸೇವೆ ನೀಡುತ್ತಿದ್ದ ಕನ್ನಡ ಪ್ರೇಮಿ ಸೈಯದ್ ಇಸಾಕ್ ಅವರ ಗ್ರಂಥಾಲಯಕ್ಕೆ ಕಿಡಿಗೇಡಿಗಳು ಬೆಂಕಿಯಿಟ್ಟಿದ್ದು, ಗ್ರಂಥಾಲಯ ಸಂಪೂರ್ಣ ಭಸ್ಮವಾಗಿದೆ.
ಕನ್ನಡ ಪ್ರೇಮಿ ಸೈಯದ್ ಇಸಾಕ್ ಕಳೆದ 11 ವರ್ಷಗಳಿಂದ ಮೈಸೂರಿನ ರಾಜೀವ್ ನಗರದಲ್ಲಿ ಸುಮಾರು 3 ಸಾವಿರ ಕನ್ನಡ ಪುಸ್ತಕಗಳು, 3 ಸಾವಿರ ಭಗವಗೀತೆ ಕೃತಿಗಳು, 3 ಸಾವಿರ ಕುರಾನ್ ಪ್ರತಿಗಳು, ಒಂದು ಸಾವಿರ ಉರ್ದು ಪುಸ್ತಕಗಳು, 1 ಸಾವಿರ ಬೈಬಲ್ ಕನ್ನಡ ಪ್ರತಿಗಳು ಹಾಗೂ ಇತರ 1 ಸಾವಿರ ಕನ್ನಡ ಪುಸ್ತಕಗಳನ್ನು ಇಟ್ಟುಕೊಂಡು ಬೆಳಗ್ಗೆ 6 ಗಂಟೆಯಿಂದ ಸಂಜೆ 7 ಗಂಟೆ ವರೆಗೆ ಇಲ್ಲಿಗೆ ಬರುವ ಪುಸ್ತಕ ಪ್ರೇಮಿಗಳಿಗೆ ಉಚಿತವಾಗಿ ಗ್ರಂಥಾಲಯ ವ್ಯವಸ್ಥೆ ಒದಗಿಸಿದ್ದರು.
ರಾಜೀವ್ ನಗರದ ಮೂಡ ಪ್ರದೇಶಕ್ಕೆ ಸೇರಿದ್ದ ಈ ಸ್ಥಳದಲ್ಲಿ 2011 ರಲ್ಲಿ ಸೈಯ್ಯದ್ ಇಸಾಕ್ ಚಿಕ್ಕದೊಂದು ಗುಡಿಸಲು ಕಟ್ಟಿಕೊಂಡು ಗ್ರಂಥಾಲಯ ಆರಂಭಿಸಿದ್ದರು. ಬಳಿಕ ಶೀಟ್ ಹಾಕಿ ಮಳಿಗೆಯಾಗಿ ಮಾಡಿಕೊಂಡು 11 ಸಾವಿರ ಪುಸ್ತಕಗಳನ್ನು ಇಡುವುದರ ಜೊತೆಗೆ ನಿತ್ಯ 18 ದಿನ ಪತ್ರಿಕೆಗಳನ್ನು ತರಿಸುತ್ತಿದ್ದರು. ಬೆಳಗ್ಗೆ 6 ಗಂಟೆಯಿಂದ ಸಂಜೆ 7 ಗಂಟೆ ವರೆಗೆ ಪುಸ್ತಕ ಮತ್ತು ಪತ್ರಿಕೆಗಳನ್ನು ಸಾರ್ವಜನಿಕರಿಗೆ ಓದಲು ಉಚಿತವಾಗಿ ನೀಡುತ್ತಿದ್ದರು.

ಉರ್ದು ಭಾಷೆ ಮಾತನಾಡುವವರೇ ಹೆಚ್ಚಾಗಿರುವ ಈ ಪ್ರದೇಶದಲ್ಲಿ ಕನ್ನಡ ಹಾಗೂ ಜಾತ್ಯಾತೀತ ಮನೋಭಾವನೆ ಮೂಡಿಸುವ ಕೆಲಸವನ್ನು ಮಾಡುತ್ತಾ ಬಂದಿರುವೆ. ಗ್ರಂಥಾಲಯಕ್ಕೆ ಹಲವು ಭಾರೀ ಕಿಡಿಗೇಡಿಗಳು ತೊಂದರೆ ಕೊಟ್ಟಿದ್ದರು. ಶುಕ್ರವಾರ ಮುಂಜಾನೆ ಗ್ರಂಥಾಲಯಕ್ಕೆ ಕಿಡಿಗೇಡಿಗಳು ಬೆಂಕಿಯಿಟ್ಟು 11 ಸಾವಿರ ಪುಸ್ತಕಗಳನ್ನು ಬೆಂಕಿಯಲ್ಲಿ ಸುಟ್ಟು ಹಾಕಿದ್ದಾರೆ. ಅದರಲ್ಲಿ ದಾನಿಗಳು ನೀಡಿದ ಅಮೂಲ್ಯ ಪುಸ್ತಕಗಳು ಸೇರಿವೆ ಎಂದು ಸೈಯದ್ ಇಸಾಕ್ ಭಾವುಕರಾಗಿ ಹೇಳಿಕೊಂಡಿದ್ದಾರೆ.
ಈ ಬಗ್ಗೆ ಉದಯಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು, ಘಟನೆಯನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ನಡೆಸಲಾಗುತ್ತಿದೆ ಎಂದು ಡಿಸಿಪಿ ಡಾ.ಪ್ರಕಾಶ್ ಗೌಡ ತಿಳಿಸಿದ್ದಾರೆ.
01-03-26 09:20 pm
HK News Staffer
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
ಖಮೇನಿ ಹತ್ಯೆ ಖಂಡನೀಯ, ಇರಾನ್ ಮೇಲಿನ ಅಮೆರಿಕ ಯುದ್ಧ...
01-03-26 04:51 pm
01-03-26 09:52 am
HK News Staffer
ದುಬೈ, ಅಬುಧಾಬಿ ಮೇಲೆ ಇರಾನ್ ಮಿಸೈಲ್ ದಾಳಿ ; ಜಗತ್ತಿ...
28-02-26 10:54 pm
ಗಲ್ಫ್ ರಾಷ್ಟ್ರಗಳಿಗೆ ವಿಮಾನ ಸಂಚಾರ ವ್ಯತ್ಯಯ ; ಏರ್...
28-02-26 07:17 pm
ಇರಾನ್ ಮೇಲೆ ಮುಗಿಬಿದ್ದ ಅಮೆರಿಕ-ಇಸ್ರೇಲ್ ಪಡೆಗಳು ;...
28-02-26 05:28 pm
ತ್ರಿಷಾ ಬಿರುಗಾಳಿ ; ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ್...
28-02-26 01:08 pm
01-03-26 08:37 pm
HK News Staffer
PSI Nasir Hussain: ಉಡುಪಿ ; ಮ್ಯಾರಥಾನಲ್ಲಿ ಪಾಲ್ಗ...
01-03-26 04:07 pm
ಹುಲಿಕಲ್ ಘಾಟಿಯಲ್ಲಿ ದುರ್ಗಾಂಬಾ ಬಸ್ ಗೆ ಬೆಂಕಿ ; ಕು...
28-02-26 08:53 pm
Mangaluru Muscat Flight: ಮಂಗಳೂರು- ಮಸ್ಕತ್ ನಡುವ...
27-02-26 08:59 pm
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm