ಬ್ರೇಕಿಂಗ್ ನ್ಯೂಸ್
10-04-21 04:21 pm Mysore Correspondent ಕರ್ನಾಟಕ
ಮೈಸೂರು, ಎ.10 : ಸುಮಾರು 11 ವರ್ಷಗಳಿಂದ 11 ಸಾವಿರ ಪುಸ್ತಕಗಳನ್ನು ಸಂಗ್ರಹಿಸಿ ಗ್ರಂಥಾಲಯ ನಿರ್ಮಿಸಿ ಸಾರ್ವಜನಿಕರ ಓದಿನ ದಾಹಕ್ಕೆ ಉಚಿತವಾಗಿ ಸೇವೆ ನೀಡುತ್ತಿದ್ದ ಕನ್ನಡ ಪ್ರೇಮಿ ಸೈಯದ್ ಇಸಾಕ್ ಅವರ ಗ್ರಂಥಾಲಯಕ್ಕೆ ಕಿಡಿಗೇಡಿಗಳು ಬೆಂಕಿಯಿಟ್ಟಿದ್ದು, ಗ್ರಂಥಾಲಯ ಸಂಪೂರ್ಣ ಭಸ್ಮವಾಗಿದೆ.
ಕನ್ನಡ ಪ್ರೇಮಿ ಸೈಯದ್ ಇಸಾಕ್ ಕಳೆದ 11 ವರ್ಷಗಳಿಂದ ಮೈಸೂರಿನ ರಾಜೀವ್ ನಗರದಲ್ಲಿ ಸುಮಾರು 3 ಸಾವಿರ ಕನ್ನಡ ಪುಸ್ತಕಗಳು, 3 ಸಾವಿರ ಭಗವಗೀತೆ ಕೃತಿಗಳು, 3 ಸಾವಿರ ಕುರಾನ್ ಪ್ರತಿಗಳು, ಒಂದು ಸಾವಿರ ಉರ್ದು ಪುಸ್ತಕಗಳು, 1 ಸಾವಿರ ಬೈಬಲ್ ಕನ್ನಡ ಪ್ರತಿಗಳು ಹಾಗೂ ಇತರ 1 ಸಾವಿರ ಕನ್ನಡ ಪುಸ್ತಕಗಳನ್ನು ಇಟ್ಟುಕೊಂಡು ಬೆಳಗ್ಗೆ 6 ಗಂಟೆಯಿಂದ ಸಂಜೆ 7 ಗಂಟೆ ವರೆಗೆ ಇಲ್ಲಿಗೆ ಬರುವ ಪುಸ್ತಕ ಪ್ರೇಮಿಗಳಿಗೆ ಉಚಿತವಾಗಿ ಗ್ರಂಥಾಲಯ ವ್ಯವಸ್ಥೆ ಒದಗಿಸಿದ್ದರು.
ರಾಜೀವ್ ನಗರದ ಮೂಡ ಪ್ರದೇಶಕ್ಕೆ ಸೇರಿದ್ದ ಈ ಸ್ಥಳದಲ್ಲಿ 2011 ರಲ್ಲಿ ಸೈಯ್ಯದ್ ಇಸಾಕ್ ಚಿಕ್ಕದೊಂದು ಗುಡಿಸಲು ಕಟ್ಟಿಕೊಂಡು ಗ್ರಂಥಾಲಯ ಆರಂಭಿಸಿದ್ದರು. ಬಳಿಕ ಶೀಟ್ ಹಾಕಿ ಮಳಿಗೆಯಾಗಿ ಮಾಡಿಕೊಂಡು 11 ಸಾವಿರ ಪುಸ್ತಕಗಳನ್ನು ಇಡುವುದರ ಜೊತೆಗೆ ನಿತ್ಯ 18 ದಿನ ಪತ್ರಿಕೆಗಳನ್ನು ತರಿಸುತ್ತಿದ್ದರು. ಬೆಳಗ್ಗೆ 6 ಗಂಟೆಯಿಂದ ಸಂಜೆ 7 ಗಂಟೆ ವರೆಗೆ ಪುಸ್ತಕ ಮತ್ತು ಪತ್ರಿಕೆಗಳನ್ನು ಸಾರ್ವಜನಿಕರಿಗೆ ಓದಲು ಉಚಿತವಾಗಿ ನೀಡುತ್ತಿದ್ದರು.

ಉರ್ದು ಭಾಷೆ ಮಾತನಾಡುವವರೇ ಹೆಚ್ಚಾಗಿರುವ ಈ ಪ್ರದೇಶದಲ್ಲಿ ಕನ್ನಡ ಹಾಗೂ ಜಾತ್ಯಾತೀತ ಮನೋಭಾವನೆ ಮೂಡಿಸುವ ಕೆಲಸವನ್ನು ಮಾಡುತ್ತಾ ಬಂದಿರುವೆ. ಗ್ರಂಥಾಲಯಕ್ಕೆ ಹಲವು ಭಾರೀ ಕಿಡಿಗೇಡಿಗಳು ತೊಂದರೆ ಕೊಟ್ಟಿದ್ದರು. ಶುಕ್ರವಾರ ಮುಂಜಾನೆ ಗ್ರಂಥಾಲಯಕ್ಕೆ ಕಿಡಿಗೇಡಿಗಳು ಬೆಂಕಿಯಿಟ್ಟು 11 ಸಾವಿರ ಪುಸ್ತಕಗಳನ್ನು ಬೆಂಕಿಯಲ್ಲಿ ಸುಟ್ಟು ಹಾಕಿದ್ದಾರೆ. ಅದರಲ್ಲಿ ದಾನಿಗಳು ನೀಡಿದ ಅಮೂಲ್ಯ ಪುಸ್ತಕಗಳು ಸೇರಿವೆ ಎಂದು ಸೈಯದ್ ಇಸಾಕ್ ಭಾವುಕರಾಗಿ ಹೇಳಿಕೊಂಡಿದ್ದಾರೆ.
ಈ ಬಗ್ಗೆ ಉದಯಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು, ಘಟನೆಯನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ನಡೆಸಲಾಗುತ್ತಿದೆ ಎಂದು ಡಿಸಿಪಿ ಡಾ.ಪ್ರಕಾಶ್ ಗೌಡ ತಿಳಿಸಿದ್ದಾರೆ.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
15-07-26 07:40 pm
HK News Staffer
ಉಡುಪಿ ; ಹೆದ್ದಾರಿ ಮಧ್ಯದಲ್ಲೇ ಟೇಬಲ್ ಹಾಕಿ ಟಿವಿ, ಮ...
15-07-26 07:02 pm
ಮುಕ್ಕ ಶ್ರೀನಿವಾಸ್ ಕಾಲೇಜು ಎಂಬಿಬಿಎಸ್ ವಿದ್ಯಾರ್ಥಿನ...
15-07-26 01:17 pm
Kasaragod car Accident: ಕಾಸರಗೋಡಿನಲ್ಲಿ ಡೆಡ್ಲಿ...
15-07-26 12:40 pm
ಟ್ರಾಫಿಕ್ ದಂಡ ಕಟ್ಟಲು ಎಪಿಕೆ ಫೈಲ್ ಡೌನ್ಲೋಡ್ ಮಾಡಲು...
14-07-26 09:13 pm