ಬ್ರೇಕಿಂಗ್ ನ್ಯೂಸ್
12-04-21 10:45 pm Headline Karnataka News Network ಕರ್ನಾಟಕ
ಬೆಂಗಳೂರು, ಎ 12: ಕರ್ನಾಟಕ ರಾಜ್ಯದ ಹಲವು ಭಾಗಗಳಲ್ಲಿ ಮುಂದಿನ ನಾಲ್ಕರಿಂದ ಐದು ದಿನಗಳಲ್ಲಿ, ಅಂದರೆ ಏಪ್ರಿಲ್ 13ರಿಂದ 15ರವರೆಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮತ್ತು ಒಳನಾಡಿನ ಕೆಲವು ಭಾಗಗಳಲ್ಲಿ ಮಳೆ ಸುರಿಯುವ ಸಾಧ್ಯತೆಯಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಏಪ್ರಿಲ್ 13ರಿಂದ 15ರವರೆಗೆ ಗುಡುಗು ಸಹಿತ ಮಳೆ ಸುರಿಯುವ ಸಾಧ್ಯತೆ ಇದೆ. ಏಪ್ರಿಲ್ 14ರಂದು ಬಳ್ಳಾರಿ, ಬೆಂಗಳೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಮತ್ತು ತುಮಕೂರಿನಲ್ಲಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ರಾಜ್ಯದಲ್ಲಿ ಅತಿ ಹೆಚ್ಚೆಂದರೆ 34 ಡಿಗ್ರಿ ತಾಪಮಾನ ದಾಖಲಾಗಬಹುದು, ಅತಿ ಕಡಿಮೆಯೆಂದರೆ 21 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.

ಈಗಾಗಲೇ ಕೆಲವು ಜಿಲ್ಲೆಗಳಲ್ಲಿ ತಾಪಮಾನ ಗರಿಷ್ಠ ಮಟ್ಟವನ್ನು ತಲುಪಿದ್ದು, ಜನಸಾಮಾನ್ಯರು ಬೆವರಿ ಬಳಲುತ್ತಿದ್ದಾರೆ. ಸುಡು ಬಿಸಿಲಿಗೆ ಕಂಗಾಲಾಗಿ ಒಂದು ಮಳೆ ಬರಲಿ ಎಂದು ಕಾಯುತ್ತಿದ್ದಾರೆ. ಹೀಗಾಗಿ ಈಗ ಹವಾಮಾನ ಇಲಾಖೆ ನುಡಿದಿರುವ ಭವಿಷ್ಯ ನಿಜವಾದಲ್ಲಿ ಜನರು ಕೊಂಚ ನಿರಾಳರಾಗಲಿದ್ದಾರೆ.

ಮಾರ್ಚ್ ತಿಂಗಳು ಪೂರ್ತಿ ಭಾರತದಲ್ಲಿ ತಾಪಮಾನ ಏರುಗತಿಯಲ್ಲೇ ಸಾಗಿದ್ದು, ಕಳೆದ 121 ವರ್ಷಗಳಲ್ಲಿ ಮಾರ್ಚ್ ತಿಂಗಳಲ್ಲಿ ಮೂರನೇ ಬಾರಿಗೆ ಈ ಪ್ರಮಾಣದ ಉಷ್ಣಾಂಶ ದಾಖಲಾಗಿದೆ ಎಂದು ವರದಿಗಳು ತಿಳಿಸಿವೆ. ಅಂತೆಯೇ ಕಳೆದ 11 ವರ್ಷಗಳಲ್ಲಿ ಇದು ತಿಂಗಳ ಗರಿಷ್ಠ ತಾಪಮಾನವಾಗಿದ್ದು, ಈ ಬಾರಿಯ ಮಾರ್ಚ್ನಲ್ಲಿ ದೇಶದಲ್ಲಿ ಸರಾಸರಿ 32.65 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ಹೀಗೆಯೇ ಏಪ್ರಿಲ್ನಲ್ಲಿಯೂ ತಾಪಮಾನ ಏರುತ್ತಲೇ ಸಾಗಿತ್ತು. ಅಲ್ಲದೇ ಕೆಲವು ಪ್ರದೇಶಗಳಲ್ಲಿ ಮಳೆ ಸುರಿದಿತ್ತು ಎಂಬುದನ್ನು ಇಲ್ಲಿ ಸ್ಮರಿಸಬಹುದು.
Weather forecast has started that heavy rains will be seen in Karnatakas few district by April 13th to 15th.
01-03-26 09:20 pm
HK News Staffer
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
ಖಮೇನಿ ಹತ್ಯೆ ಖಂಡನೀಯ, ಇರಾನ್ ಮೇಲಿನ ಅಮೆರಿಕ ಯುದ್ಧ...
01-03-26 04:51 pm
01-03-26 09:52 am
HK News Staffer
ದುಬೈ, ಅಬುಧಾಬಿ ಮೇಲೆ ಇರಾನ್ ಮಿಸೈಲ್ ದಾಳಿ ; ಜಗತ್ತಿ...
28-02-26 10:54 pm
ಗಲ್ಫ್ ರಾಷ್ಟ್ರಗಳಿಗೆ ವಿಮಾನ ಸಂಚಾರ ವ್ಯತ್ಯಯ ; ಏರ್...
28-02-26 07:17 pm
ಇರಾನ್ ಮೇಲೆ ಮುಗಿಬಿದ್ದ ಅಮೆರಿಕ-ಇಸ್ರೇಲ್ ಪಡೆಗಳು ;...
28-02-26 05:28 pm
ತ್ರಿಷಾ ಬಿರುಗಾಳಿ ; ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ್...
28-02-26 01:08 pm
01-03-26 08:37 pm
HK News Staffer
PSI Nasir Hussain: ಉಡುಪಿ ; ಮ್ಯಾರಥಾನಲ್ಲಿ ಪಾಲ್ಗ...
01-03-26 04:07 pm
ಹುಲಿಕಲ್ ಘಾಟಿಯಲ್ಲಿ ದುರ್ಗಾಂಬಾ ಬಸ್ ಗೆ ಬೆಂಕಿ ; ಕು...
28-02-26 08:53 pm
Mangaluru Muscat Flight: ಮಂಗಳೂರು- ಮಸ್ಕತ್ ನಡುವ...
27-02-26 08:59 pm
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm