ಬ್ರೇಕಿಂಗ್ ನ್ಯೂಸ್
21-04-21 10:34 pm Headline Karnataka News Network ಕರ್ನಾಟಕ
ಬೆಂಗಳೂರು, ಎ.21: ಮುಷ್ಕರ ನಿಲ್ಲಿಸಿ, ತಕ್ಷಣ ಕರ್ತವ್ಯಕ್ಕೆ ಹಾಜರಾಗುವಂತೆ ಹೈಕೋರ್ಟ್ ಛಾಟಿ ಬೀಸುತ್ತಿದ್ದಂತೆಯೇ ಮುಷ್ಕರ ನಿರತ ಸಾರಿಗೆ ನೌಕರರಿಗೆ ಬಿಸಿ ಮುಟ್ಟಿದೆ. ಹೈಕೋರ್ಟ್ ಸೂಚನೆ ಪರಿಗಣಿಸಿ ಇಂದು ಬೆಳಗ್ಗೆ ಹೆಚ್ಚಿನ ನೌಕರರು ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಇದರೊಂದಿಗೆ ಕಳೆದ 15 ದಿನಗಳಿಂದ ನಡೆಯುತ್ತಿದ್ದ ಸಾರಿಗೆ ಮುಷ್ಕರ ದಿಢೀರ್ ಅಂತ್ಯಗೊಂಡಿದೆ.
ಅತ್ತ ಹೆಚ್ಚಿನ ನೌಕರರು ಕರ್ತವ್ಯಕ್ಕೆ ಹಾಜರಾಗುತ್ತಿದ್ದಂತೆ ಮುಖಭಂಗ ಅನುಭವಿಸಿದ ಸಾರಿಗೆ ನೌಕರರ ಸಂಘದವರು ಅನಿವಾರ್ಯ ಎಂಬಂತೆ ಮುಷ್ಕರ ಕೈಬಿಟ್ಟಿದ್ದಾಗಿ ಹೇಳಿಕೆ ನೀಡಿದ್ದಾರೆ. ಅಲ್ಲದೆ, ತಾತ್ಕಾಲಿಕವಾಗಿ ಮುಷ್ಕರ ಹಿಂಪಡೆಯುತ್ತಿದ್ದು ಮತ್ತೆ ಮುಷ್ಕರ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಮುಷ್ಕರದಲ್ಲಿ ಪಾಲ್ಗೊಂಡಿದ್ದಲ್ಲದೆ, ಇತರರನ್ನೂ ಮುಷ್ಕರಕ್ಕೆ ಒತ್ತಾಯಿಸುತ್ತಿದ್ದ ಕಾರಣಕ್ಕೆ ತರಬೇತಿ ನಿರತ ಮತ್ತು ಖಾಯಂ ಸೇರಿ 1900 ಕ್ಕೂ ಹೆಚ್ಚು ಸಾರಿಗೆ ನೌಕರರನ್ನು ಕರ್ತವ್ಯದಿಂದ ವಜಾ ಮಾಡಲಾಗಿತ್ತು. ಅಲ್ಲದೆ, 2900ಕ್ಕೂ ಹೆಚ್ಚು ಮಂದಿಯನ್ನು ಅಮಾನತು ಮಾಡಲಾಗಿತ್ತು.
ಈ ನಡುವೆ, ಮಂಗಳವಾರ ಸಾರ್ವಜನಿಕ ಹಿತಾಸಕ್ತಿ ದೂರಿನ ಬಗ್ಗೆ ವಿಚಾರಣೆ ನಡೆಸಿದ ಹೈಕೋರ್ಟ್ ಕೋವಿಡ್ ಸಂಕಷ್ಟದ ನಡುವೆ ಸಾರಿಗೆ ನೌಕರರು ಮುಷ್ಕರ ನಡೆಸುವುದು ಸರಿಯಲ್ಲ. ಕೂಡಲೇ ಕರ್ತವ್ಯಕ್ಕೆ ಹಾಜರಾಗುವಂತೆ ಸೂಚನೆ ನೀಡಿತ್ತು. ಇದರಂತೆ ಬುಧವಾರ ಹೆಚ್ಚಿನ ಮಂದಿ ಸಾರಿಗೆ ಸಿಬಂದಿ ಕರ್ತವ್ಯಕ್ಕೆ ಹಾಜರಾಗಿದ್ದರು. ಈ ನಡುವೆ, ಅಮಾನತಾದ ಮತ್ತು ವಜಾ ಆಗಿರುವ ಸಿಬಂದಿ ಅತಂತ್ರಕ್ಕೆ ಸಿಲುಕಿದ್ದಾರೆ. ಅವರನ್ನು ಮತ್ತೆ ಕೆಲಸಕ್ಕೆ ಸೇರಿಸಿಕೊಳ್ಳಬೇಕೆಂಬ ಬೇಡಿಕೆಯನ್ನೂ ಮುಂದಿರಿಸದೆ ಸಾರಿಗೆ ನೌಕರರ ಸಂಘದವರು ಮುಷ್ಕರ ಹಿಂಪಡೆದಿರುವುದು ಸಿಬಂದಿಯನ್ನು ಇಕ್ಕಟ್ಟಿಗೆ ಸಿಲುಕಿದ್ದಾರೆ.
The Karnataka State Road Transport Employees League called off its two-week-long strike on Wednesday a day after the Karnataka High Court observed that the workers of the state road transport corporations (RTCs) had chosen the "worst time to go on a strike" citing the pandemic.
22-06-25 07:52 pm
HK News Desk
Heart Attack, Hassan: ಊಟಕ್ಕೆ ಕುಳಿತುಕೊಳ್ಳುವಾಗ...
22-06-25 12:36 pm
Iran Attack Illegal,War, CM Siddaramaiah; ಇರಾ...
21-06-25 02:48 pm
ಗುತ್ತಿಗೆ ಮೀಸಲು ಹೆಚ್ಚಳ ಬೆನ್ನಲ್ಲೇ ಅಲ್ಪಸಂಖ್ಯಾತರಿ...
20-06-25 10:36 am
ಕಮಲ್ ನಟನೆಯ 'ಥಗ್ ಲೈಫ್' ಸಿನಿಮಾ ಪ್ರಸಾರಕ್ಕೆ ಸುಪ್ರ...
17-06-25 05:35 pm
24-06-25 01:02 am
HK News Desk
NEET ಪರೀಕ್ಷೆಯಲ್ಲಿ ಮಗಳಿಗೆ ಕಡಿಮೆ ಅಂಕ ; ಕೂಲಿನಿಂದ...
23-06-25 08:54 pm
Rapper Tommy Genesis, Controversy: ಹಿಂದು ದೇವತ...
23-06-25 04:37 pm
VP Jagdeep Dhankhar; ಜೂನ್ 25 ಸಂವಿಧಾನ ಹತ್ಯೆಗೈದ...
22-06-25 07:48 pm
Yoga Haram Muslims; ಯೋಗವನ್ನು ಒಪ್ಪುತ್ತೇವೆ, ಸೂರ...
22-06-25 04:57 pm
23-06-25 11:01 pm
Mangalore Correspondent
Udupi BJP, Kishore Kumar: ಉಡುಪಿ ಬಿಜೆಪಿಯಲ್ಲಿ ಬ...
23-06-25 10:28 pm
Journalist Vijay Kotian, Brand Mangalore Awar...
23-06-25 09:48 pm
Mangalore, Lokayukta Raid, MCC: ಮಂಗಳೂರು ಪಾಲಿಕ...
23-06-25 06:56 pm
Sudheer Kumar Reddy, Mangalore; ಸಾಕ್ಷ್ಯಗಳಿದ್ದ...
23-06-25 06:07 pm
23-06-25 08:51 pm
HK News Desk
Manipal, Udupi Murder: ಮಣಿಪಾಲ ; ಹೆತ್ತ ತಾಯಿಯನ್...
23-06-25 11:47 am
Sandhya Pavithra Nagaraj Fraud; ಸೌಜನ್ಯಾ ಹೆಸರಿ...
21-06-25 08:58 pm
Crime Mangalore, Bantwal Attack, Fake News; ಬ...
21-06-25 12:21 pm
Brahmavar, Udupi Murder, Crime: ಪತ್ನಿಗೆ ಮೊಬೈಲ...
20-06-25 02:04 pm