ಬ್ರೇಕಿಂಗ್ ನ್ಯೂಸ್
22-04-21 11:31 am Headline Karnataka News Network ಕರ್ನಾಟಕ
ಬೆಂಗಳೂರು, ಏ.22: : ಕೊವಿಡ್ RT-PCR ಪರೀಕ್ಷೆಗಾಗಿ ಮಾದರಿ ಸಂಗ್ರಹಿಸಿದ ಬಳಿಕ ಪರೀಕ್ಷಾ ಫಲಿತಾಂಶವನ್ನು ಅತಿ ಶೀಘ್ರದಲ್ಲಿ ಪ್ರಕಟಿಸಬೇಕು. ಪರೀಕ್ಷೆಯ ವರದಿಯನ್ನು 24 ಗಂಟೆಯೊಳಗೆ ನೀಡುವಂತೆ ಕರ್ನಾಟಕ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ. ಅಲ್ಲದೇ, ಪರೀಕ್ಷಾ ಮಾಹಿತಿಯನ್ನು 24 ಗಂಟೆಗಳ ಅವಧಿಯೊಳಗಾಗಿ ICMR ಪೋರ್ಟಲ್ನಲ್ಲಿ ನಮೂದಿಸಬೇಕು ಎಂದು ಕೋರ್ಟ್ ಸರ್ಕಾರಕ್ಕೆ ಸೂಚನೆ ನೀಡಿದೆ.
ಕರ್ನಾಟಕದಲ್ಲಿ ಕೊರೊನಾ ಸೋಂಕು ತೀವ್ರಗತಿಯಲ್ಲಿ ಹೆಚ್ಚಳವಾಗುತ್ತಿದೆ. ನಿನ್ನೆ (ಏಪ್ರಿಲ್ 21) 23,558 ಮಂದಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಒಟ್ಟು 116 ಮಂದಿ ಮೃತಪಟ್ಟಿದ್ದಾರೆ. ಈ ಪೈಕಿ ಬೆಂಗಳೂರಿನಲ್ಲಿ 13,640 ಜನರಲ್ಲಿ ಸೋಂಕು ದೃಢಪಟ್ಟಿದ್ದು, 70 ಜನರು ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಕೊರೊನಾ ಸೋಂಕಿತರ ಒಟ್ಟು ಸಂಖ್ಯೆ 12,22,202ಕ್ಕೆ (12.22 ಲಕ್ಷ) ಏರಿಕೆಯಾಗಿದೆ. ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 13,762 ಜನರು ಸಾವನ್ನಪ್ಪಿದ್ದಾರೆ. ಸೋಂಕಿತರ ಪೈಕಿ 10,32,233 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಪ್ರಸ್ತುತ 17,6,188 ಸೋಂಕಿತರು ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಬೆಂಗಳೂರಿನಲ್ಲಿಂದು ಒಂದೇ ದಿನ 13,640 ಜನರಿಗೆ ಸೋಂಕು ಕಾಣಿಸಿಕೊಂಡಿದೆ. ಬೆಂಗಳೂರಲ್ಲಿ ಕೊರೊನಾ ಪೀಡಿತರ ಒಟ್ಟು ಸಂಖ್ಯೆ 5,83,675ಕ್ಕೆ ಏರಿಕೆಯಾಗಿದೆ. ಈ ಪೈಕಿ 4,53,398 ಜನರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಬೆಂಗಳೂರಿನಲ್ಲಿ ಇಂದು ಕೊರೊನಾ ಸೋಂಕಿಗೆ 70 ಜನರ ಬಲಿ. ಬೆಂಗಳೂರಲ್ಲಿ ಕೊರೊನಾದಿಂದ ಈವರೆಗೆ 5,382 ಜನರು ಸಾವನ್ನಪ್ಪಿದ್ದಾರೆ. 1,24,894 ಸೋಂಕಿತರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಕೊರೊನಾ ಸೋಂಕು ಇಷ್ಟೊಂದು ತೀವ್ರ ಪ್ರಮಾಣದಲ್ಲಿ ಏರಿಕೆಯಾಗುತ್ತಿರುವಾಗ ಕೊವಿಡ್ ಪರೀಕ್ಷೆ ವರದಿ ಬರಲು ಹೆಚ್ಚಿನ ಕಾಲಾವಧಿ ನೀಡಿದರೆ ಸೋಂಕು ಹೆಚ್ಚಳಕ್ಕೆ ಇನ್ನಷ್ಟು ಇಂಬು ನೀಡಿದಂತಾಗುತ್ತಿತ್ತು. ಹೀಗಾಗಿ ಕೋರ್ಟ್ ನಿರ್ದೇಶನ ಮಹತ್ವ ಪಡೆದಿದೆ.
The Karnataka High Court directed the State Government to issue appropriate orders to all recognised laboratories to provide test results to patients who have undergone RT-PCR test at the earliest and not later than 24-hours.
28-03-25 12:19 pm
Bangalore Correspondent
Yatnal expulsion, Ramesh Jarkiholi: ಯತ್ನಾಳ್...
27-03-25 06:41 pm
Nandini Milk Rate: ಬೆಲೆ ಏರಿಕೆ ಬಿಸಿಯಿಂದ ತತ್ತರಿ...
27-03-25 04:49 pm
Yatnal, BJP, Karnataka Congress Twitter: ಈಗ '...
27-03-25 02:03 pm
BJP MLA Yatnal, Tweet: 'ಸತ್ಯವಂತರಿಗಿದು ಕಾಲವಲ್ಲ...
27-03-25 01:00 pm
28-03-25 01:38 pm
HK News Desk
Vladimir Putin, Zelensky: ರಷ್ಯಾ ಅಧ್ಯಕ್ಷ ಪುಟಿನ...
28-03-25 01:07 pm
Uber, Ola, Sahkar Taxi: ಓಲಾ, ಉಬರ್ ರೀತಿಯಲ್ಲೇ ಸ...
27-03-25 04:07 pm
ರಾಹುಲ್ ಗಾಂಧಿ ಭಾರತೀಯ ಪೌರತ್ವ ಹೊಂದಿದ್ದಾರೋ, ಇಲ್ಲ...
25-03-25 04:06 pm
Justice Yashwant Varma: ಭಾರೀ ಪ್ರಮಾಣದ ನೋಟು ಸುಟ...
24-03-25 03:54 pm
28-03-25 11:52 am
Mangalore Correspondent
Mangalore Jail, Mobile Jammer: ಎತ್ತಿಗೆ ಜ್ವರ ಬ...
27-03-25 08:45 pm
Mangalore Kukke Subrahmanya Temple: ರಾಜ್ಯದ ಶ್...
27-03-25 07:53 pm
Bedra Bus Saudi, Mangalore, Moodbidri: ಸೌದಿಯಲ...
27-03-25 04:39 pm
U T Khader, Ullal, Cashew: ದೇಶದಲ್ಲಿ 90 ಶೇ. ಗೇ...
27-03-25 01:42 pm
27-03-25 01:37 pm
HK News Desk
Bangalore Fake Marksheet, Arrest: ನಕಲಿ ಅಂಕಪಟ್...
26-03-25 11:19 pm
ಮನೆ ಮಾಲೀಕನ ಪತ್ನಿಯೊಂದಿಗೆ ಅಕ್ರಮ ಸಂಬಂಧ ಶಂಕೆ ; ಯೋ...
26-03-25 11:08 pm
Mangalore Dharmasthala PSI P Kishor, Wife Att...
26-03-25 08:38 pm
ಸೈಬರ್ ಕೇಸಿನಲ್ಲಿ ಆರೋಪಿಗಳನ್ನು ವಶಕ್ಕೆ ಪಡೆಯಲು ಲಂಚ...
26-03-25 08:00 pm