ಬ್ರೇಕಿಂಗ್ ನ್ಯೂಸ್
25-08-20 09:55 pm Headline Karnataka News Network ಕರ್ನಾಟಕ
ಬೆಂಗಳೂರು, ಆಗಸ್ಟ್ 25: ಕೋಲು ಮಂಡೆ ಜಂಗಮ ದೇವ ಜಾನಪದ ಹಾಡು ತಿರುಚಲಾಗಿದೆ ಹಾಗೂ ಹಾಡಿನಲ್ಲಿ ಅಶ್ಲೀಲತೆ ಇದೆ ಎಂಬ ಆರೋಪ ಕೇಳಿ ಬಂದ ಹಿನ್ನೆಲೆ ಕನ್ನಡ ರ್ಯಾಪರ್ ಹಾಗೂ ಬಿಗ್ ಬಾಸ್ ವಿಜೇತ ಚಂದನ್ ಶೆಟ್ಟಿ ಜನತೆಯಲ್ಲಿ ಕ್ಷಮೆ ಕೇಳಿ, ಅಶ್ಲೀಲತೆ ಇರುವ ತುಣುಕನ್ನು ತೆಗೆದು ಹಾಕುವುದಾಗಿ ತಿಳಿಸಿದ್ದಾರೆ.
ಈ ಸಂಬಂಧ ವಿಡಿಯೋ ಮಾಡಿ ಸ್ಪಷ್ಟನೆ ಕೊಟ್ಟಿರುವ ಚಂದನ್, ಯಾರ ಭಾವನೆಗಳಿಗೂ ಧಕ್ಕೆ ಉಂಟು ಮಾಡಲು ಈ ಹಾಡನ್ನು ಮಾಡಿಲ್ಲ. ಈಗಿನ ಪೀಳಿಗೆಗೆ ನಮ್ಮ ಜಾನಪದ ತಲುಪಲಿ ಅನ್ನುವ ಕಾರಣಕ್ಕೆ ರ್ಯಾಪ್ ಹಾಡಿನ ರೂಪ ಕೊಟ್ಟಿದ್ದೆ. ಇದರಿಂದ ಯಾರಿಗಾದರೂ ಬೇಸರವಾಗಿದ್ದರೆ ಕ್ಷಮೆ ಕೇಳುತ್ತೇನೆ ಎಂದು ಹೇಳಿದ್ದಾರೆ. ಅಲ್ಲದೇ ಅಶ್ಲೀಲತೆ ಇರುವ ತುಣುಕನ್ನು ತೆಗೆದು ಮರು ಚಿತ್ರೀಕರಣ ಮಾಡುವುದಾಗಿ ತಿಳಿಸಿದ್ದಾರೆ.
ಗಣೇಶ ಹಬ್ಬದ ಹಿನ್ನೆಲೆ ‘ಕೋಲು ಮಂಡೆ ಜಂಗಮ ದೇವ’ ಎಂಬ ಹೊಸ ರ್ಯಾಪ್ ಸಾಂಗ್ ಅನ್ನು ಚಂದನ್ ಶೆಟ್ಟಿ ಯೂಟ್ಯೂಬ್ನಲ್ಲಿ ಬಿಡುಗಡೆ ಮಾಡಿದ್ದರು. ಆದರೆ, ಮಾದಪ್ಪನ ಗೀತೆಯನ್ನು ಅಶ್ಲೀಲವಾಗಿ ತೋರಿಸಿರುವ ಆರೋಪ ಚಂದನ್ ಶೆಟ್ಟಿ ವಿರುದ್ಧ ಕೇಳಿಬಂದಿತ್ತು.
ಶಿವಶರಣೆ ಸಂಕಮ್ಮನ ಬಗ್ಗೆ ಅಶ್ಲೀಲ ಪ್ರದರ್ಶಿಸಲಾಗಿದೆ ಮತ್ತು ಭಕ್ತಿ ಗೀತೆಯನ್ನು ತಿರುಚಲಾಗಿದೆ. ಈ ಮೂಲಕ ಮಾದಪ್ಪನ ಭಕ್ತರ ಧಾರ್ಮಿಕ ಮನೋಭಾವನೆಗೆ ಧಕ್ಕೆ ತಂದಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ಆ.23ರಂದು ಈ ವಿಡಿಯೋ ಬಿಡುಗಡೆಯಾಗಿತ್ತು. ಈಗಾಗಲೇ 36 ಲಕ್ಷಕ್ಕೂ ಅಧಿಕ ಮಂದಿ ಈ ಹಾಡನ್ನು ವೀಕ್ಷಿಸಿದ್ದಾರೆ. ಅಲ್ಲದೇ ಯೂಟ್ಯೂಬ್ನಲ್ಲಿ ನಂಬರ್ ಒನ್ ಟ್ರೆಂಡಿಂಗ್ ಆಗಿದೆ.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
14-07-26 07:55 pm
HK News Staffer
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm