ಬ್ರೇಕಿಂಗ್ ನ್ಯೂಸ್
26-04-21 01:53 pm Headline Karnataka News Network ಕರ್ನಾಟಕ
Photo credits : Prajavaani
ಬೆಂಗಳೂರು,ಏ. 26: ಸಂಪೂರ್ಣ ಹವಾನಿಯಂತ್ರಿತ ಸೌಲಭ್ಯ ಹೊಂದಿರುವ ದೇಶದ ಮೊದಲ ರೈಲು ನಿಲ್ದಾಣ ಎಂಬ ಹಿರಿಮೆಗೆ ಪಾತ್ರವಾಗಿರುವ ನಗರದ ಬೈಯಪ್ಪನಹಳ್ಳಿಯಲ್ಲಿರುವ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಒಂದೇ ಮಳೆಗೆ ಅರ್ಧದಷ್ಟು ಮುಳುಗಿ ಹೋಗಿದೆ.
₹314 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಿರುವ ಈ ನಿಲ್ದಾಣ ಉದ್ಘಾಟನೆಗೆ ಸಿದ್ಧವಾಗಿದೆ. ಆದರೆ, ಕಳೆದ ಶುಕ್ರವಾರ ರಾತ್ರಿ ಸುರಿದ ಮಳೆಗೆ ನಿಲ್ದಾಣದ ಚಾವಣಿಗಳಲ್ಲಿ ನೀರು ಸೋರಿದೆ. ಅಲ್ಲದೆ, ನಿಲ್ದಾಣದೊಳಗೆ ಪ್ಲಾಟ್ಫಾರಂ 1 ಮತ್ತು 7ನ್ನು ಸಂಪರ್ಕಿಸಲು ನಿರ್ಮಿಸಲಾಗಿರುವ ಸುರಂಗ ಮಾರ್ಗದಲ್ಲಿ ಎರಡು ಅಡಿಗಿಂತ ಹೆಚ್ಚು ಎತ್ತರದಲ್ಲಿ ನೀರು ನಿಂತಿದೆ’ ಎಂದು ಸ್ಥಳೀಯರೊಬ್ಬರು ಹೇಳಿದರು.

‘ವಿಶ್ವದರ್ಜೆಯ ನಿಲ್ದಾಣ ಇದಾಗಿರಲಿದೆ ಎಂಬ ಆಶಾಭಾವ ನಮ್ಮದಾಗಿತ್ತು. ಆದರೆ, ಒಂದೇ ಮಳೆಗೆ ನಿಲ್ದಾಣದ ಕಳಪೆ ಗುಣಮಟ್ಟದ ಅನಾವರಣವಾಗಿದೆ‘ ಎಂದರು.
ಸಿಬ್ಬಂದಿ ಕರೆಸಿ ನೀರನ್ನೆಲ್ಲ ಹೊರ ಹಾಕಲಾಗಿದೆ. ನೀರು ಸೋರಿಕೆಗೆ ಕಾರಣ ಏನು ಎಂಬ ಬಗ್ಗೆ ಪರಿಶೀಲನೆ ನಡೆಸಲಾಗುವುದು’ ಎಂದು ಅಧಿಕಾರಿಯೊಬ್ಬರು ಹೇಳಿದರು.

‘ಚಾವಣಿ ಎಲ್ಲ ಸೋರಿಕೆಯಾಗಿದೆ ಎಂಬುದು ಸುಳ್ಳು. ಸುರಂಗ ಅಥವಾ ಸಬ್ವೇದಲ್ಲಿ ನೀರು ಹರಿದಿದೆ. ಮಳೆ ನೀರು ಸಂಗ್ರಹ ವ್ಯವಸ್ಥೆ ಮಾಡಲಾಗಿದ್ದು, ಈ ಕಾಮಗಾರಿ ಅಂತಿಮ ಹಂತದಲ್ಲಿದೆ. ಮುಂದೆ ಎಂತಹ ಮಳೆ ಬಂದರೂ ನೀರು ಸರಾಗವಾಗಿ ಹರಿದು ಹೋಗಿ ಸಂಗ್ರಹವಾಗುತ್ತದೆ. ನಿಲ್ದಾಣದಲ್ಲಿ ಮಳೆ ನೀರು ನಿಲ್ಲುವುದಿಲ್ಲ’ ಎಂದು ನೈರುತ್ಯ ರೈಲ್ವೆ ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ಅನೀಶ್ ಹೆಗ್ಡೆ ಮಾಧ್ಯಮಗಳಿಗೆ ತಿಳಿಸಿದರು.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
15-07-26 07:40 pm
HK News Staffer
ಉಡುಪಿ ; ಹೆದ್ದಾರಿ ಮಧ್ಯದಲ್ಲೇ ಟೇಬಲ್ ಹಾಕಿ ಟಿವಿ, ಮ...
15-07-26 07:02 pm
ಮುಕ್ಕ ಶ್ರೀನಿವಾಸ್ ಕಾಲೇಜು ಎಂಬಿಬಿಎಸ್ ವಿದ್ಯಾರ್ಥಿನ...
15-07-26 01:17 pm
Kasaragod car Accident: ಕಾಸರಗೋಡಿನಲ್ಲಿ ಡೆಡ್ಲಿ...
15-07-26 12:40 pm
ಟ್ರಾಫಿಕ್ ದಂಡ ಕಟ್ಟಲು ಎಪಿಕೆ ಫೈಲ್ ಡೌನ್ಲೋಡ್ ಮಾಡಲು...
14-07-26 09:13 pm