ಬ್ರೇಕಿಂಗ್ ನ್ಯೂಸ್
26-04-21 04:16 pm Headline Karnataka News Network ಕರ್ನಾಟಕ
Photo credits : WION
ಬೆಂಗಳೂರು,ಏ.26: ಕೊರೊನಾ ಮೊದಲನೆ ಅಲೆ ಕಾಣಿಸಿಕೊಂಡಾಗ ಏಕಾಏಕಿ ಲಾಕ್ಡೌನ್ ಘೋಷಣೆ ಮಾಡಲಾಗಿತ್ತು. ಇದರಿಂದ ಜನಸಾಮಾನ್ಯರು ಕಂಗಾಲಾಗಿದ್ದರು. ಅಲ್ಲದೆ, ಮದ್ಯಪ್ರಿಯರು ಆಲ್ಕೋಹಾಲ್ಗಾಗಿ ತುಂಬಾನೇ ತೊಂದರೆ ಅನುಭವಿಸಿದ್ದರು. ಸ್ಯಾನಿಟೈಸರ್ನಲ್ಲಿ ಆಲ್ಕೋಹಾಲ್ ಅಂಶ ಇರುತ್ತದೆ ಎಂದು ಅನೇಕರು ಅದನ್ನೇ ಕುಡಿಯೋಕೆ ಹೋಗಿದ್ದರು. ಆದರೆ, ಈ ಬಾರಿ ಹೀಗೆ ಆಗದಂತೆ ನೋಡಿಕೊಳ್ಳಲು ಸರ್ಕಾರ ಮುಂದಾಗಿದೆ. ಹೀಗಾಗಿ 15 ದಿನಗಳ ಕೊವಿಡ್ ಕರ್ಫ್ಯೂನಲ್ಲಿ ಬಾರ್ನಲ್ಲಿ ಪಾರ್ಸೆಲ್ ತೆಗೆದುಕೊಂಡು ಹೋಗಲು ಅವಕಾಶ ನೀಡಿದೆ.

ಕರ್ನಾಟಕದಲ್ಲಿ ಕೊರೊನಾ ಸೊಂಕಿನ ಎರಡನೇ ಅಲೆ ವ್ಯಾಪಕವಾಗಿ ಹಬ್ಬುತ್ತಿರುವುದರಿಂದ ರಾಜ್ಯ ಸರ್ಕಾರ ಕಠಿಣ ಕ್ರಮ ಕೈಗೊಳ್ಳಲೇಬೇಕಾದ ಅನಿವಾರ್ಯತೆಗೆ ಸಿಲುಕಿದೆ. ಹೀಗಾಗಿ 14 ದಿನಗಳ ಕಾಲ ಕರ್ನಾಟಕವನ್ನು ಲಾಕ್ಡೌನ್ ಮಾಡಲು ನಿರ್ಧರಿಸಿದ್ದು, ನಾಳೆ ಸಂಜೆಯಿಂದ ಕೊರೊನಾ ಕರ್ಫ್ಯೂ ಜಾರಿಯಾಗಲಿದೆ. 15 ದಿನಗಳ ಕಾಲ ಈ ಕಠಿಣ ನಿಯಮ ಮುಂದುವರೆಯಲಿದೆ ಎಂದು ಸರ್ಕಾರ ಸ್ಪಷ್ಟಪಡಿಸಿದೆ.

ಬೆಳಗ್ಗೆ 6-10 ಗಂಟೆವರೆಗೆ ಅಗತ್ಯ ವಸ್ತು ಖರೀದಿಗೆ ಅವಕಾಶ ಕಲ್ಪಿಸಲಾಗಿದೆ. ಉತ್ಪಾದನಾ ವಲಯ ಎಂದಿನಂತೆ ಮುಂದುವರಿಯುತ್ತದೆ. ಕೃಷಿ ಚಟುವಟಿಕೆಗಳಿಗೂ ಯಾವುದೇ ತೊಂದರೆ ಇಲ್ಲ. ಇದರ ಜತೆಗೆ ಮದ್ಯಪ್ರಿಯರಿಗೆ ತೊಂದರೆ ಆಗದಂತೆ ನೋಡಿಕೊಳ್ಳಲು ಬಾರ್ನಲ್ಲಿ ಮದ್ಯ ಪಾರ್ಸೆಲ್ ತೆಗೆದುಕೊಂಡು ಹೋಗಲು ಅವಕಾಶ ಇದೆ.
ಇನ್ನು, ಸರ್ಕಾರದ ಬೊಕ್ಕಸ ತುಂಬಲು ಆಲ್ಕೋಹಾಲ್ ಪಾತ್ರ ತುಂಬಾ ದೊಡ್ಡದಿದೆ. ಒಂದೊಮ್ಮೆ ಮದ್ಯ ಮಾರಾಟ ನಿಲ್ಲಿಸಿ ಬಿಟ್ಟರೆ ಸರ್ಕಾರಕ್ಕೆ ನಷ್ಟ ಉಂಟಾಗಲಿದೆ. ಕಳೆದ ಬಾರಿ ಹೀಗೆಯೇ ಮಾಡಿದ್ದರಿಂದ ದೊಡ್ಡ ನಷ್ಟ ಅನುಭವಿಸಿತ್ತು. ಈಗ ಹೀಗಾಗದಂತೆ ನೋಡಿಕೊಳ್ಳಲು ಸರ್ಕಾರದ ಈ ಕ್ರಮ ಬಹಳ ಮಹತ್ವ ಪಡೆದುಕೊಂಡಿದೆ.
ಮದ್ಯಪಾನ ಆರೋಗ್ಯಕ್ಕೆ ಹಾನಿಕಾರಕ
14-day lockdown in Karnataka govt to allow home delivery of alcohol by parcel. Karnataka government on Monday announced that the entire state including Bengaluru will go for a two weeks complete lockdown starting from April 27 night in a bid to break the chain of COVID-19 transmission in the state.
01-03-26 09:20 pm
HK News Staffer
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
ಖಮೇನಿ ಹತ್ಯೆ ಖಂಡನೀಯ, ಇರಾನ್ ಮೇಲಿನ ಅಮೆರಿಕ ಯುದ್ಧ...
01-03-26 04:51 pm
01-03-26 09:52 am
HK News Staffer
ದುಬೈ, ಅಬುಧಾಬಿ ಮೇಲೆ ಇರಾನ್ ಮಿಸೈಲ್ ದಾಳಿ ; ಜಗತ್ತಿ...
28-02-26 10:54 pm
ಗಲ್ಫ್ ರಾಷ್ಟ್ರಗಳಿಗೆ ವಿಮಾನ ಸಂಚಾರ ವ್ಯತ್ಯಯ ; ಏರ್...
28-02-26 07:17 pm
ಇರಾನ್ ಮೇಲೆ ಮುಗಿಬಿದ್ದ ಅಮೆರಿಕ-ಇಸ್ರೇಲ್ ಪಡೆಗಳು ;...
28-02-26 05:28 pm
ತ್ರಿಷಾ ಬಿರುಗಾಳಿ ; ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ್...
28-02-26 01:08 pm
01-03-26 08:37 pm
HK News Staffer
PSI Nasir Hussain: ಉಡುಪಿ ; ಮ್ಯಾರಥಾನಲ್ಲಿ ಪಾಲ್ಗ...
01-03-26 04:07 pm
ಹುಲಿಕಲ್ ಘಾಟಿಯಲ್ಲಿ ದುರ್ಗಾಂಬಾ ಬಸ್ ಗೆ ಬೆಂಕಿ ; ಕು...
28-02-26 08:53 pm
Mangaluru Muscat Flight: ಮಂಗಳೂರು- ಮಸ್ಕತ್ ನಡುವ...
27-02-26 08:59 pm
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm