ಬ್ರೇಕಿಂಗ್ ನ್ಯೂಸ್
02-05-21 11:11 am Headline Karnataka News Network ಕರ್ನಾಟಕ
ಬೀದರ್, ಮೇ 2: ತೀವ್ರ ಕುತೂಹಲ ಕೆರಳಿಸಿರುವ ಬಸವಕಲ್ಯಾಣ ಉಪ ಚುನಾವಣೆ ಮತ ಎಣಿಕೆ ಕಾರ್ಯ ಬೀದರ್ ನಗರದ ಬಿ.ವಿ ಭೂಮರೆಡ್ಡಿ ಕಾಲೇಜು ಮೈದಾನದಲ್ಲಿ ಆರಂಭವಾಗಿದ್ದು, ಡಜನ್ ಅಭ್ಯರ್ಥಿಗಳ ಹಣೆಬರಹ ನಿರ್ಧಾರವಾಗಲಿದೆ.
ತೀವ್ರ ಜಿದ್ದಾಜಿದ್ದಿನ ಕಣವಾಗಿ ಮಾರ್ಪಟ್ಟಿದ್ದ ಬಸವಕಲ್ಯಾಣ ವಿಧಾನಸಭೆ ಉಪ ಚುನಾವಣೆ ಫಲಿತಾಂಶ ಇಂದು ಪ್ರಕಟವಾಗಬೇಕಿದ್ದು, ಆದರೆ ಮತ ಎಣಿಕೆ ಕಾರ್ಯ ತಾಂತ್ರಿಕ ಕಾರಣದಿಂದ ಇನ್ನೂ ಆರಂಭವಾಗಿಲ್ಲ.
ಕೆಲವು ತಾಂತ್ರಿಕ ತೊಂದರೆಗಳ ಕಾರಣದಿಂದ ಮತ ಏಣಿಕೆ ಕಾರ್ಯ ತಡವಾಗಿದೆ ಎಂದು ಹೇಳಲಾಗಿದೆ. ಸದ್ಯದ ಮಾಹಿತಿ ಪ್ರಕಾರ ಅಂಚೆ ಮತ ಏಣಿಕೆ ಕಾರ್ಯ ಆರಂಭವಾಗಿದೆ.

ಬಸವಕಲ್ಯಾಣ ಉಪ ಚುನಾವಣೆಯ ಮತ ಎಣಿಕೆಯ ಕಾರ್ಯಕ್ಕೆ ಎಲ್ಲಾ ರೀತಿಯ ಸಿದ್ಧತೆಗಳು ಪೂರ್ಣಗೊಂಡಿವೆ ಎಂದು ಬೀದರ್ ಜಿಲ್ಲಾಧಿಕಾರಿ ರಾಮಚಂದ್ರನ್.ಆರ್ ತಿಳಿಸಿದ್ದಾರೆ.
ಬೀದರ್ ನಗರದ ಬಿ.ವಿ.ಭೂಮರೆಡ್ಡಿ ಕಾಲೇಜಿನಲ್ಲಿ ಮೇ.2ರಂದು ಬೆಳಗ್ಗೆ 8ರಿಂದ ಮೂರು ಕೌಂಟಿಂಗ್ ಕೇಂದ್ರದಲ್ಲಿ ಮತ ಎಣಿಕೆಯು ಆರಂಭವಾಗಲಿದೆ. ಪ್ರತಿ ಕೌಂಟಿಂಗ್ ಕೇಂದ್ರದಲ್ಲಿ ತಲಾ ನಾಲ್ಕು ಟೇಬಲ್ಗಳನ್ನು ಅಳವಡಿಸಲಾಗಿದೆ.
ಕಾಂಗ್ರೆಸ್ ಶಾಸಕರಾಗಿದ್ದ ಬಿ. ನಾರಾಯಣರಾವ್ ಅವರ ನಿಧನದಿಂದ ಬಸವಕಲ್ಯಾಣ ವಿಧಾನಸಭಾ ಕ್ಷೇತ್ರಕ್ಕೆ ಉಪ ಚುನಾವಣೆ ನಡೆಸಲಾಗಿತ್ತು.

ಬಸವಕಲ್ಯಾಣ ವಿಧಾನಸಭೆ ಉಪ ಚುನಾವಣೆ ಮತ ಎಣಿಕೆಯ ಮೊದಲ ಸುತ್ತಿನಲ್ಲಿ ಬಿಜೆಪಿ ಅಭ್ಯರ್ಥಿ ಶರಣು ಸಲಗಾರ್ ಮುನ್ನಡೆ ಕಾಯ್ದುಕೊಂಡಿದ್ದಾರೆ.
ಬಿಜೆಪಿ ಅಭ್ಯರ್ಥಿಗೆ ಮುಂದುವರೆದ ಮುನ್ನಡೆಬಿಜೆಪಿ ಅಭ್ಯರ್ಥಿ ಒಟ್ಟು 6440 ಮತಗಳು ಪಡೆದಿದ್ದು, ಕಾಂಗ್ರೆಸ್ ಅಭ್ಯರ್ಥಿ ಮಲ್ಲಮ್ಮ ಬಿ ನಾರಾಯಣರಾವ್ಗೆ 3188 ಹಾಗೂ ಜೆಡಿಎಸ್ ಅಭ್ಯರ್ಥಿ ಯಾಸ್ರಬ್ ಖಾದ್ರಿಗೆ ಕೇವಲ 549 ಮತಗಳು ಮಾತ್ರ ಲಭಿಸಿವೆ. ಬಿಜೆಪಿ ಅಭ್ಯರ್ಥಿಯ ಒಟ್ಟು ಮುನ್ನಡೆ 3252.

ಬಿಜೆಪಿ ಬಂಡಾಯ ಅಭ್ಯರ್ಥಿ ಖುಬಾಗೆ ಭಾರೀ ಹಿನ್ನೆಡೆಬಸವಕಲ್ಯಾಣ ಉಪ ಚುನಾವಣೆಗೆ ಬಿಜೆಪಿ ಟಿಕೆಟ್ ವಂಚಿತ ಮಾಜಿ ಶಾಸಕ ಮಲ್ಲಿಕಾರ್ಜುನ ಖುಬಾ ಬಂಡಾಯವಾಗಿ ಸ್ಪರ್ಧಿಸಿ ಸಾಕಷ್ಟು ಪೈಪೋಟಿ ನೀಡಿದರಾದರೂ, ಮತ ಗಳಿಕೆಯಲ್ಲಿ ತೀರಾ ಹಿನ್ನಡೆ ಅನುಭವಿಸುತ್ತಿದ್ದಾರೆ.
ಬಿಜೆಪಿಗೆ ಪ್ರಬಲ ಪೈಪೋಟಿ ನೀಡುವ ನಿರೀಕ್ಷೆ ಹುಟ್ಟಿಸಿದ ಮಲ್ಲಿಕಾರ್ಜುನ ಖುಬಾ ಎರಡು ಸುತ್ತಿನ ಮತ ಎಣಿಕೆಯಲ್ಲಿ ಕೇವಲ 618 ಮತಗಳನ್ನು ಮಾತ್ರ ಪಡೆದಿದ್ದಾರೆ. ಇದು ಮುನ್ನಡೆ ಸಾಧಿಸಿದ ಬಿಜೆಪಿ ಅಭ್ಯರ್ಥಿಗಿಂತ 5822 ಮತಗಳಿಂದ ಹಿಂದೆ ಬಿದ್ದಿದ್ದಾರೆ. ಎರಡು ಬಾರಿ ಬಸವಕಲ್ಯಾಣ ಕ್ಷೇತ್ರದಿಂದ ಜೆಡಿಎಸ್ ಪಕ್ಷದಿಂದ ಗೆದ್ದು ಬಂದಿದ್ದರು. ಕಳೆದ ಬಾರಿ ದಿವಂಗತ ಶಾಸಕ ಬಿ.ನಾರಾಯಣರಾವ್ ಎದುರು ಸೋಲನುಭವಿಸಿದರು. ಆದರೆ, ಗಣನೀಯ ಮತಗಳನ್ನು ಪಡೆದಿದ್ದರು.
Karnataka by-elections 2021 Bidar Basavakalyan election result bjp candidate Sharanu Salagar leading
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
15-07-26 07:40 pm
HK News Staffer
ಉಡುಪಿ ; ಹೆದ್ದಾರಿ ಮಧ್ಯದಲ್ಲೇ ಟೇಬಲ್ ಹಾಕಿ ಟಿವಿ, ಮ...
15-07-26 07:02 pm
ಮುಕ್ಕ ಶ್ರೀನಿವಾಸ್ ಕಾಲೇಜು ಎಂಬಿಬಿಎಸ್ ವಿದ್ಯಾರ್ಥಿನ...
15-07-26 01:17 pm
Kasaragod car Accident: ಕಾಸರಗೋಡಿನಲ್ಲಿ ಡೆಡ್ಲಿ...
15-07-26 12:40 pm
ಟ್ರಾಫಿಕ್ ದಂಡ ಕಟ್ಟಲು ಎಪಿಕೆ ಫೈಲ್ ಡೌನ್ಲೋಡ್ ಮಾಡಲು...
14-07-26 09:13 pm