ಬ್ರೇಕಿಂಗ್ ನ್ಯೂಸ್
26-08-20 10:42 pm Headline Karnataka News Network ಕರ್ನಾಟಕ
ಬೆಂಗಳೂರು, ಆಗಸ್ಟ್ 26: ಹಣಕಾಸಿನ ತೊಂದರೆಗೆ ಸಿಲುಕಿ ವೃದ್ಧೆಯ ಹತ್ಯೆಗೈದು 45 ಲಕ್ಷ ನಗದು ಹಾಗೂ ಚಿನ್ನಾಭರಣ ಲೂಟಿ ಮಾಡಿದ್ದ ದಂಪತಿ ಸೇರಿ ಮೂವರು ಆರೋಪಿಗಳನ್ನು ಕಾಡುಗೋಡಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತರನ್ನು ರಾಯಚೂರು ಜಿಲ್ಲೆಯ ವೀರೇಶ್, ಆತನ ಪತ್ನಿ ಚೈತ್ರಾ ಮತ್ತು ಪ್ರಶಾಂತ್ ಎಂದು ಗುರುತಿಸಲಾಗಿದೆ. ಇದೇ ತಿಂಗಳ ಆ.12ರ ಬೆಳಗ್ಗೆ 10.30ರ ವೇಳೆ ಕಾಡುಗೋಡಿಯ ಚನ್ನಸಂದ್ರದಲ್ಲಿ ಜಯಮ್ಮ(65) ಅವರ ಕೊಲೆ ನಡೆದಿತ್ತು. ಈ ಕೊಲೆಯಿಂದ ಬಡಾವಣೆಯ ಜನರು ತೀವ್ರ ಆತಂಕಕ್ಕೆ ಒಳಗಾಗಿದ್ದರು.
ಆರೋಪಿಗಳು ಕೊಲೆಗೈದು 45 ಲಕ್ಷ ರೂ.ಹಣ, 88 ಗ್ರಾಂ ಚಿನ್ನಾಭರಣ ದೋಚಿ ಪರಾರಿಯಾಗಿದ್ದರು. ಪ್ರಕರಣ ದಾಖಲಿಸಿಕೊಂಡಿದ್ದ ಕಾಡುಗೋಡಿ ಠಾಣಾ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.
ಕೊಲೆ ಮಾಡಿರುವ ಆರೋಪಿ ವೀರೇಶ್ ಮತ್ತು ಚೈತ್ರಾ ದಂಪತಿ ಕಳೆದ ಎರಡು ವರ್ಷಗಳಿಂದ ಅಪ್ಪಯ್ಯಣ್ಣ, ಜಯಮ್ಮ ಅವರ ಮನೆಯಲ್ಲಿ ಬಾಡಿಗೆಗಿದ್ದರು. ವೀರೇಶ್ ಕ್ಯಾಬ್ ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದರೆ ಚೈತ್ರಾ ಕಂಪ್ಯೂಟರ್ ಆಪರೇಟರ್ ಆಗಿ ಕೆಲಸ ಮಾಡುತ್ತಿದ್ದರು. ಲಾಕ್ಡೌನ್ನಿಂದಾಗಿ ಕೆಲಸವಿಲ್ಲದೆ ಬಾಡಿಗೆ ಕಟ್ಟಲಾಗದೇ ಆರ್ಥಿಕ ಸಂಕಷ್ಟದಲ್ಲಿ ಮುಳುಗಿದ್ದು, ದಂಪತಿ ಕಳ್ಳತನ ಮಾಡಲು ನಿರ್ಧರಿಸಿದ್ದರು.
ಅದರಂತೆ ತಮ್ಮದೇ ಗ್ರಾಮದಿಂದ ಪ್ರಶಾಂತ್ ಎಂಬ ಮತ್ತೊಬ್ಬ ಆರೋಪಿಯನ್ನು ಕರೆಸಿಕೊಂಡು ಅಪ್ಪಯ್ಯಣ್ಣ ವಿದ್ಯುತ್ ಬಿಲ್ ಪಾವತಿಸಲು ಹೋರಹೋಗಿದ್ದಾಗ ಜಯಮ್ಮ ಒಬ್ಬಂಟಿಯಾಗಿದ್ದನ್ನು ಗಮನಿಸಿ ಮೂವರು ಮನೆಗೆ ನುಗ್ಗಿ, ಕತ್ತು ಸೀಳಿ ಕೊಲೆ ಮಾಡಿ 45 ಲಕ್ಷ ನಗದು ಹಾಗೂ ಚಿನ್ನಾಭರಣ ಲೂಟಿ ಮಾಡಿ ಪರಾರಿಯಾಗಿದ್ದರು. ಕಾಡುಗೋಡಿ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡು ಆರೋಪಿಗಳನ್ನು ಬಂಧಿಸಿದ್ದಾರೆ.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 02:31 pm
HK News Staffer
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm