ಬ್ರೇಕಿಂಗ್ ನ್ಯೂಸ್
08-05-21 10:11 pm Satish, Correspondent ಕರ್ನಾಟಕ
ನವದೆಹಲಿ, ಮೇ 8: ದೇಶದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಯಾವುದೇ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಿಕೊಳ್ಳಲು ಕೋವಿಡ್ ಪಾಸಿಟಿವ್ ರಿಪೋರ್ಟ್ ತೋರಿಸಬೇಕೆಂದು ಕಡ್ಡಾಯ ಪಡಿಸುವಂತಿಲ್ಲ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಹೊಸ ಮಾರ್ಗಸೂಚಿ ಪ್ರಕಟಿಸಿದೆ. ಕೊರೊನಾ ಸೋಂಕಿನ ಲಕ್ಷಣಗಳಿಂದ ಬಳಲುತ್ತಿರುವ ಯಾವುದೇ ವ್ಯಕ್ತಿಯನ್ನು ಆಸ್ಪತ್ರೆಗಳು ದಾಖಲಿಸಿಕೊಳ್ಳಲು ನಿರಾಕರಿಸುವಂತಿಲ್ಲ ಎಂದು ಎಲ್ಲ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸೂಚನೆಯನ್ನು ನೀಡಿದೆ.
ಕೊರೊನಾ ಎರಡನೇ ಅಲೆ ಮಾರಣಾಂತಿಕ ಆಗುತ್ತಿರುವ ಸಂದರ್ಭದಲ್ಲಿ ಕೋವಿಡ್ ಸೋಂಕಿತರು ಆಸ್ಪತ್ರೆಗೆ ದಾಖಲಾಗುವ ಕುರಿತ ನೀತಿಯನ್ನು ಆರೋಗ್ಯ ಸಚಿವಾಲಯ ಪರಿಷ್ಕರಿಸಿದ್ದು ಯಾವುದೇ ವ್ಯಕ್ತಿ ಸೋಂಕಿನ ಲಕ್ಷಣಗಳಿಂದ ಬಳಲುತ್ತಿದ್ದರೆ, ಆತನಿಗೆ ಪಾಸಿಟಿವ್ ರಿಪೋರ್ಟ್ ಬೇಕೆಂದು ಆಸ್ಪತ್ರೆಯಲ್ಲಿ ದಾಖಲಿಸಿಕೊಳ್ಳಲು ನಿರಾಕರಿಸುವಂತಿಲ್ಲ. ಶಂಕಿತ ಲಕ್ಷಣಗಳಿದ್ದರೆ ಆಸ್ಪತ್ರೆಗೆ ದಾಖಲಿಸಿಕೊಂಡು ಚಿಕಿತ್ಸೆ ನೀಡಬೇಕು ಎಂದು ಹೊಸ ಆದೇಶದಲ್ಲಿ ತಿಳಿಸಲಾಗಿದೆ.

ಈ ಹೊಸ ಮಾರ್ಗಸೂಚಿ ಎಲ್ಲ ರಾಜ್ಯಗಳ ಸರಕಾರಿ ಮತ್ತು ಖಾಸಗಿ ಆಸ್ಪತ್ರೆಗಳಿಗೆ ಅನ್ವಯವಾಗುತ್ತದೆ. ಈ ಬಗ್ಗೆ ಆಯಾ ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳು ಪ್ರಾದೇಶಿಕ ಮಟ್ಟದ ಆಸ್ಪತ್ರೆಗಳಿಗೆ ನಿರ್ದೇಶನಗಳನ್ನು ನೀಡುವಂತೆ ಕೇಂದ್ರ ಆರೋಗ್ಯ ಸಚಿವಾಲಯ ಸೂಚಿಸಿದೆ.
ಯಾವುದೇ ವ್ಯಕ್ತಿಯನ್ನು ಕೋವಿಡ್ ವಾರ್ಡಿಗೆ ದಾಖಲಿಸಿಕೊಳ್ಳಲು ಪಾಸಿಟಿವ್ ಸರ್ಟಿಫಿಕೇಟ್ ಹೊಂದಿರಬೇಕೆಂದು ಕಡ್ಡಾಯ ಮಾಡುವಂತಿಲ್ಲ. ಕೊರೊನಾ ಸೋಂಕಿನ ಲಕ್ಷಣಗಳಿದ್ದರೆ, ಕೋವಿಡ್ ಕೇರ್ ಸೆಂಟರಿಗೆ ದಾಖಲಿಸಿ ಚಿಕಿತ್ಸೆ ನೀಡಬೇಕು. ಯಾವುದೇ ವ್ಯಕ್ತಿ ದೇಶದ ಯಾವುದೇ ನಗರ ಅಥವಾ ಇನ್ನಾವುದೇ ಭಾಗದಲ್ಲಿ ಆಸ್ಪತ್ರೆಗೆ ದಾಖಲಾದರೂ, ಆತನಿಗೆ ಚಿಕಿತ್ಸೆ ನಿರಾಕರಿಸುವಂತಿಲ್ಲ. ಆತನಿಗೆ ಬೇಕಾದ ಆಕ್ಸಿಜನ್ ಇನ್ನಿತರ ಸೌಲಭ್ಯಗಳನ್ನೂ ಒದಗಿಸಬೇಕು.
ಯಾವುದೇ ನಗರಗಳಲ್ಲಿ ಆಯಾ ಭಾಗದ ಆಸ್ಪತ್ರೆಗಳು ದಾಖಲಾದ ವ್ಯಕ್ತಿಯನ್ನು ಇದೇ ಪರಿಸರದ ನಿವಾಸಿಯೆಂದು ಐಡಿ ಕಾರ್ಡ್ ತೋರಿಸುವಂತೆ ಕಡ್ಡಾಯ ಪಡಿಸುವಂತಿಲ್ಲ. ಆತ ದೇಶದ ಯಾವುದೇ ಮೂಲೆಯ ನಿವಾಸಿಯೇ ಆಗಿದ್ದರೂ, ಆತನಿಗೆ ಅಗತ್ಯವುಳ್ಳ ಚಿಕಿತ್ಸೆಯನ್ನು ಆಸ್ಪತ್ರೆಗಳು ನೀಡಬೇಕು ಎಂದು ಹೊಸ ಮಾರ್ಗಸೂಚಿಯಲ್ಲಿ ಕೇಂದ್ರ ಸರಕಾರ ಹೇಳಿದೆ.
The Centre on May 8 revised the national policy for admission of COVID-19 patients to the hospitals. A test report confirming the coronavirus infection is no longer mandatory for admission of patients to the COVID-dedicated medical facilities, the Union Health Ministry said.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 10:24 pm
Mangalore Correspondent
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
ಜ.18ರಂದು ಮಂಗಳೂರಿನಲ್ಲಿ ಪ್ರಪ್ರಥಮ ಜಾಗತಿಕ ಬಿಲ್ಲವರ...
15-01-26 04:01 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm