ಬ್ರೇಕಿಂಗ್ ನ್ಯೂಸ್
30-07-20 10:32 am News Correspondant ಕರ್ನಾಟಕ
ಬೆಂಗಳೂರು(ಜು.30): ನೂತನ ರಾಜ್ಯ ವಿಧಾನ ಪರಿಷತ್ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದ ತಕ್ಷಣವೇ ಎಚ್. ವಿಶ್ವನಾಥ್ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಪರ ಬ್ಯಾಟ್ ಮಾಡಿದರು. ವಿಧಾನಸೌಧದ ಸಮ್ಮೇಳನ ಸಂಭಾಗಣದಲ್ಲಿ ಎಂಎಲ್ಸಿ ಆಗಿ ಪ್ರಮಾನವಚನ ತೆಗೆದುಕೊಂಡ ಬಳಿಕ ಮಾತಾಡಿದ ಎಚ್. ವಿಶ್ವನಾಥ್, ಮಾತಿನ ಮೇಲೆ ನಿಂತ ನಾಯಕ ಬಿ.ಎಸ್ ಯಡಿಯೂರಪ್ಪ. ಯಡಿಯೂರಪ್ಪನವರ ಬೆಂಬಲಕ್ಕೆ ನಾವಿದ್ದೇವೆ ಎಂದರು.
ರಾಜ್ಯ ವಿಧಾನ ಪರಿಷತ್ಗೆ ನಾಮನಿರ್ದೇಶನಕ್ಕೆ ಅವಕಾಶ ಕಲ್ಪಿಸಿದ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ. ನಡ್ಡಾ ಮತ್ತು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರಿಗೆ ಧನ್ಯವಾದಗಳು. ನಮ್ಮ ಮೇಲೆ ದೊಡ್ಡ ಜವಾಬ್ದಾರಿ ಇದೆ ಎಂದರು ಎಚ್. ವಿಶ್ವನಾಥ್.
ಇನ್ನು, ರಾಜ್ಯದಲ್ಲಿ ಮಾರಕ ಕೊರೋನಾ ವೈರಸ್ ವ್ಯಾಪಕವಾಗಿ ಹರಡುತ್ತಿದೆ. ಎಲ್ಲ ಜನ ಪ್ರತಿನಿಧಿಗಳು ಕೊರೋನಾ ನಿಯಂತ್ರಿಸಲು ಪ್ರಯತ್ನಿಸುತ್ತಿದ್ದಾರೆ. ನಾವೂ ಇವರೊಂದಿಗೆ ಕೈಜೋಡಿಸಿ ಕೆಲಸ ಮಾಡುತ್ತೇವೆ ಎಂದರು.
ಭಾರತೀಯ ಜನತಾ ಪಕ್ಷದ ಇಡಿ ಕುಟುಂಬ ನಮಗೆ ಆಶೀರ್ವಾದ ಮಾಡಿರುವುದು ಸಂತೋಷವಾಗಿದೆ. ಶಾಂತಾರಾಮ್ ಸಿದ್ದಿ ಅವರು ಬುಡಕಟ್ಟು ಸಮಾಜದ ಅಭಿವೃದ್ಧಿಗೆ ಎಲೆಮರೆ ಕಾಯಿಯಂತೆ ಕೆಲಸ ಮಾಡುತ್ತಿದ್ದಾರೆ. ಅವರ ಸಮುದಾಯದ ಮಕ್ಕಳ ಶಿಕ್ಷಣ ಹಾಗೂ ಸಮಾಜದ ಅಭಿವೃದ್ಧಿಗೆ ಸರ್ಕಾರದ ಮಟ್ಟದಿಂದಲೂ ಎಲ್ಲ ಸಹಕಾರ ನೀಡುತ್ತದೆ ಎಂದು ಹೇಳಿದರು.
ಹೀಗೆ ಮುಂದುವರಿದ ಅವರು, ಬಿಜೆಪಿ ಎಲ್ಲ ಜಾತಿ ಜನಾಂಗಕ್ಕೆ ಅವಕಾಶ ನೀಡುತ್ತಿದೆ. ಇದು ಪಕ್ಷದ ಕಾರ್ಯಕರ್ತರಿಗೆ ಉತ್ಸಾಹ ಹೆಚ್ಚಾಗುವಂತೆ ಮಾಡಿದೆ ಎಂದು ತಿಳಿಸಿದರು.
ವಿಧಾನಪರಿಷತ್ಗೆ ರಾಜ್ಯಪಾಲರಿಂದ ನೇರವಾಗಿ ನಾಮನಿರ್ದೇಶನಗೊಂಡಿದ್ದ ಹೆಚ್. ವಿಶ್ವನಾಥ್, ಸಿ.ಪಿ. ಯೋಗೇಶ್ವರ್, ಭಾರತಿ ಶೆಟ್ಟಿ, ಶಾಂತಾರಾಂ ಸಿದ್ದಿ ಮತ್ತು ಸಾಬಣ್ಣ ತಲವಾರ್ ಅವರು ಇಂದು ಪರಿಷತ್ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಪರಿಷತ್ ಸಭಾಪತಿ ಪ್ರತಾಪಚಂದ್ರ ಶೆಟ್ಟಿ ಅವರು ನೂತನ ಸದಸ್ಯರಿಗೆ ಪ್ರಮಾಣ ವಚನ ಬೋಧಿಸಿದರು.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm