ಬ್ರೇಕಿಂಗ್ ನ್ಯೂಸ್
11-05-21 07:27 pm Shivamogga Correspondent ಕರ್ನಾಟಕ
ಶಿವಮೊಗ್ಗ, ಮೇ 11; ಶಿವಮೊಗ್ಗ ನಗರ ವ್ಯಾಪ್ತಿಯಲ್ಲಿ ಗುರುವಾರದಿಂದ ಭಾನುವಾರದ ತನಕ 4 ದಿನ ಲಾಕ್ಡೌನ್ ಇನ್ನಷ್ಟು ಬಿಗಿಗೊಳಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ. ಎಸ್. ಈಶ್ವರಪ್ಪ ಹೇಳಿದರು.
ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, "ಶಿವಮೊಗ್ಗ ನಗರದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ತೀವ್ರ ಪ್ರಮಾಣದಲ್ಲಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಲಾಕ್ಡೌನ್ ಇನ್ನಷ್ಟು ಬಿಗಿಗೊಳಿಸಲು ನಿರ್ಧರಿಸಲಾಗಿದೆ" ಎಂದರು.
ಈ ಅವಧಿಯಲ್ಲಿ ಎಲ್ಲಾ ಕೈಗಾರಿಕಾ ಚಟುವಟಿಕೆಗಳು, ಗಾಂಧಿ ಬಜಾರ್, ಸಗಟು ದಿನಸಿ ವ್ಯಾಪಾರ, ಎಪಿಎಂಸಿ ಸಂಪೂರ್ಣವಾಗಿ ಸ್ಥಬ್ತವಾಗಲಿದೆ. ಜಿಲ್ಲಾ ಕೈಗಾರಿಕಾ ಸಂಘ, ದಿನಸಿ ಸಗಟು ವ್ಯಾಪಾರಿಗಳ ಸಂಘ, ಗಾಂಧಿ ಬಜಾರ್ ವ್ಯಾಪಾರಿಗಳ ಸಂಘ ಮತ್ತು ಎಪಿಎಂಸಿ ಒಪ್ಪಿಗೆ ನೀಡಿದ್ದು ಸಹಕಾರ ನೀಡಲಿದ್ದಾರೆ" ಎಂದು ತಿಳಿಸಿದರು.
ಈ ಅವಧಿಯಲ್ಲಿ ಇನ್ನುಳಿದಂತೆ ಸರ್ಕಾರದ ಮಾರ್ಗಸೂಚಿ ಪ್ರಕಾರ ಅಗತ್ಯ ವಸ್ತುಗಳ ಮಾರಾಟಕ್ಕೆ ಯಾವುದೇ ನಿರ್ಬಂಧವಿರುವುದಿಲ್ಲ. ನೆರೆಹೊರೆಯ ಅಗತ್ಯ ವಸ್ತುಗಳ ಅಂಗಡಿಗಳು, ಬ್ಯಾಂಕ್, ಸರ್ಕಾರಿ ಕಚೇರಿ, ಹೊಟೇಲ್ ಪಾರ್ಸೆಲ್ ಸೌಲಭ್ಯ, ಮೆಡಿಕಲ್ ಇತ್ಯಾದಿ ಸೌಲಭ್ಯಗಳಿಗೆ ತೊಂದರೆಯಿರುವುದಿಲ್ಲ. ಸಾರ್ವಜನಿಕರು ಮನೆಯಲ್ಲಿಯೇ ಇದ್ದು, ಕೊರೊನಾ ನಿಯಂತ್ರಣಕ್ಕೆ ಸಹಕರಿಸಬೇಕು" ಎಂದು ಈಶ್ವರಪ್ಪ ಮನವಿ ಮಾಡಿದರು.
ಜಿಲ್ಲೆಯಲ್ಲಿ ವೈದ್ಯಕೀಯ ಸೇವೆಯನ್ನು ಇನ್ನಷ್ಟು ಉತ್ತಮಪಡಿಸಲು ನಿರಂತರ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಸೊರಬ ಮತ್ತು ಆನವಟ್ಟಿ ಆಸ್ಪತ್ರೆಗಳಲ್ಲಿ ಹೆಚ್ಚಿನ ಸೌಲಭ್ಯ ಕಲ್ಪಿಸಲಾಗುತ್ತಿದೆ. ಖಾಸಗಿ ಆಸ್ಪತ್ರೆಗಳು ಸಹ ಜಿಲ್ಲಾಡಳಿತದೊಂದಿಗೆ ಸಹಕರಿಸುತ್ತಿವೆ. ಶಿವಮೊಗ್ಗ ನಗರದಲ್ಲಿ ಹೊಟೇಲ್ನಲ್ಲಿ ಐಸೋಲೇಶನ್ ಸೌಲಭ್ಯ ಬಯಸುವ ಕೋವಿಡ್ ಪಾಸಿಟಿವ್ ವ್ಯಕ್ತಿಗಳಿಗಾಗಿ ವ್ಯವಸ್ಥೆ ಮಾಡಲಾಗಿದೆ" ಎಂದು ವಿವರಣೆ ನೀಡಿದರು.
ನ್ಯಾಯಬೆಲೆ ಅಂಗಡಿಗಳಲ್ಲಿ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಬೇಕು ಮತ್ತು ಪ್ರತಿಯೊಬ್ಬರು ಥಂಬ್ ಇಂಪ್ರೆಷನ್ ನೀಡುವ ಮೊದಲು ಸ್ಯಾನಿಟೈಸ್ ಮಾಡಲು ಕಡ್ಡಾಯವಾಗಿ ವ್ಯವಸ್ಥೆ ಕಲ್ಪಿಸಲು ಸೂಚನೆ ನೀಡಲಾಗಿದೆ" ಎಂದರು.
Complete 4 days full lockdown to be imposed in Shivamogga from thursday to sunday said district incharge minister Eshwarappa.
01-03-26 09:20 pm
HK News Staffer
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
ಖಮೇನಿ ಹತ್ಯೆ ಖಂಡನೀಯ, ಇರಾನ್ ಮೇಲಿನ ಅಮೆರಿಕ ಯುದ್ಧ...
01-03-26 04:51 pm
01-03-26 09:52 am
HK News Staffer
ದುಬೈ, ಅಬುಧಾಬಿ ಮೇಲೆ ಇರಾನ್ ಮಿಸೈಲ್ ದಾಳಿ ; ಜಗತ್ತಿ...
28-02-26 10:54 pm
ಗಲ್ಫ್ ರಾಷ್ಟ್ರಗಳಿಗೆ ವಿಮಾನ ಸಂಚಾರ ವ್ಯತ್ಯಯ ; ಏರ್...
28-02-26 07:17 pm
ಇರಾನ್ ಮೇಲೆ ಮುಗಿಬಿದ್ದ ಅಮೆರಿಕ-ಇಸ್ರೇಲ್ ಪಡೆಗಳು ;...
28-02-26 05:28 pm
ತ್ರಿಷಾ ಬಿರುಗಾಳಿ ; ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ್...
28-02-26 01:08 pm
01-03-26 08:37 pm
HK News Staffer
PSI Nasir Hussain: ಉಡುಪಿ ; ಮ್ಯಾರಥಾನಲ್ಲಿ ಪಾಲ್ಗ...
01-03-26 04:07 pm
ಹುಲಿಕಲ್ ಘಾಟಿಯಲ್ಲಿ ದುರ್ಗಾಂಬಾ ಬಸ್ ಗೆ ಬೆಂಕಿ ; ಕು...
28-02-26 08:53 pm
Mangaluru Muscat Flight: ಮಂಗಳೂರು- ಮಸ್ಕತ್ ನಡುವ...
27-02-26 08:59 pm
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm