ಬ್ರೇಕಿಂಗ್ ನ್ಯೂಸ್
13-05-21 03:29 pm Headline Karnataka News Network ಕರ್ನಾಟಕ
ಚಾಮರಾಜನಗರ, ಮೇ 13: ಆಕ್ಸಿಜನ್ ಕೊರತೆಯಿಂದ 24 ಜನರ ಸಾಮೂಹಿಕ ಸಾವಿಗೆ ಕಾರಣವಾಗಿದ್ದ ಚಾಮರಾಜನಗರ ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಕಳೆದ 24 ಗಂಟೆಯಲ್ಲಿ ಹನ್ನೊಂದು ಮಂದಿ ಸಾವು ಕಂಡಿದ್ದಾರೆ.
ಈ ಬಗ್ಗೆ ಜಿಲ್ಲಾಸ್ಪತ್ರೆಯಿಂದ ಬುಲೆಟಿನ್ ನೀಡಲಾಗಿದ್ದು ಬುಧವಾರ ಬೆಳಗ್ಗೆ 9 ರಿಂದ ಗುರುವಾರ ಬೆಳಗ್ಗೆ 9 ಗಂಟೆ ವರೆಗೆ 11 ಮಂದಿ ಕೊರೊನಾ ಸೋಂಕಿತರು ಸಾವು ಕಂಡಿದ್ದಾಗಿ ಮಾಹಿತಿ ನೀಡಿದ್ದಾರೆ.

24 ಗಂಟೆ ಅವಧಿಯಲ್ಲಿ ಚಾಮರಾಜನಗರ ತಾಲ್ಲೂಕಿನ 9 ಮಂದಿ ಹಾಗೂ ಕೊಳ್ಳೇಗಾಲ ತಾಲ್ಲೂಕಿನ ಇಬ್ಬರು ಸಾವನ್ನಪ್ಪಿದ್ದಾರೆ. ಬುಧವಾರ ಬೆಳಗ್ಗೆ 9 ಗಂಟೆಯಿಂದ ಸಂಜೆ 6 ರ ತನಕ 4 ಮಂದಿ ಸಾವನ್ನಪ್ಪಿದ್ದು, ಸಂಜೆಯಿಂದ ಗುರುವಾರ ಬೆಳಗ್ಗೆ 9 ಗಂಟೆಯ ನಡುವೆ ಮತ್ತೆ 7 ಮಂದಿ ಸಾವನ್ನಪ್ಪಿದ್ದಾರೆ. ಮೃತಪಟ್ಟ 11 ಮಂದಿಯಲ್ಲಿ 7 ಮಂದಿ ಕೋವಿಡ್ ಸೋಂಕಿತರಾಗಿದ್ದರೆ, 4 ಮಂದಿ ಕೋವಿಡ್ ಸೋಂಕಿನ ಲಕ್ಷಣಗಳನ್ನು ಹೊಂದಿದ್ದವರು ಸಾವನ್ನಪ್ಪಿದ್ದಾರೆ.

ತಮಿಳುನಾಡಿಗೆ ಗಡಿಯನ್ನು ಹೊಂದಿಕೊಂಡಿರುವ ಬಹುತೇಕ ಅರಣ್ಯ ಭಾಗವನ್ನು ಹೊಂದಿರುವ ಚಾಮರಾಜನಗರ ಜಿಲ್ಲೆಯಲ್ಲಿ ದಿನವೂ ಸರಾಸರಿ ಹತ್ತು ಮಂದಿ ಸಾಯುತ್ತಿದ್ದಾರೆ. ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವುದು ಒಂದು ಕಡೆಯಾದರೆ, ಸಾವಿನ ಪ್ರಮಾಣವೂ ಈ ಭಾಗದಲ್ಲಿ ಹೆಚ್ಚಿರುವುದು ಗ್ರಾಮೀಣ ಭಾಗದ ಜಿಲ್ಲೆಯ ಶೋಚನೀಯ ಸ್ಥಿತಿಯನ್ನು ತೋರಿಸುತ್ತಿದೆ. ತಮಿಳು ಮತ್ತು ಮಲಯಾಳಿ ಭಾಷಿಗರು ಹೆಚ್ಚಿರುವ ಚಾಮರಾಜನಗರ ತಾಲೂಕಿನಲ್ಲೇ ಸೋಂಕು ಹೆಚ್ಚಿರುವುದು ಕಂಡುಬಂದಿದೆ. ವೈದ್ಯಕೀಯ ಚಿಕಿತ್ಸೆಯ ವೈಫಲ್ಯವೋ, ಅಧಿಕಾರಿಗಳ ಅಸಡ್ಡೆಯೋ ಗ್ರಾಮೀಣ ಭಾಗದಲ್ಲಿ ಕೊರೊನಾ ಸೋಂಕು ಮರಣ ಮೃದಂಗ ಬಾರಿಸುತ್ತಿರುವುದು ಈ ಭಾಗದ ಜನರ ಆತಂಕಕ್ಕೆ ಕಾರಣವಾಗಿದೆ.
Chamrajnagara reports 11 death of Covid-19 Patients in the last 24 hours resulting in major failure of administration. Recently 24 patients had died of oxygen shortage at the government hospital.
01-03-26 09:20 pm
HK News Staffer
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
ಖಮೇನಿ ಹತ್ಯೆ ಖಂಡನೀಯ, ಇರಾನ್ ಮೇಲಿನ ಅಮೆರಿಕ ಯುದ್ಧ...
01-03-26 04:51 pm
01-03-26 09:52 am
HK News Staffer
ದುಬೈ, ಅಬುಧಾಬಿ ಮೇಲೆ ಇರಾನ್ ಮಿಸೈಲ್ ದಾಳಿ ; ಜಗತ್ತಿ...
28-02-26 10:54 pm
ಗಲ್ಫ್ ರಾಷ್ಟ್ರಗಳಿಗೆ ವಿಮಾನ ಸಂಚಾರ ವ್ಯತ್ಯಯ ; ಏರ್...
28-02-26 07:17 pm
ಇರಾನ್ ಮೇಲೆ ಮುಗಿಬಿದ್ದ ಅಮೆರಿಕ-ಇಸ್ರೇಲ್ ಪಡೆಗಳು ;...
28-02-26 05:28 pm
ತ್ರಿಷಾ ಬಿರುಗಾಳಿ ; ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ್...
28-02-26 01:08 pm
01-03-26 08:37 pm
HK News Staffer
PSI Nasir Hussain: ಉಡುಪಿ ; ಮ್ಯಾರಥಾನಲ್ಲಿ ಪಾಲ್ಗ...
01-03-26 04:07 pm
ಹುಲಿಕಲ್ ಘಾಟಿಯಲ್ಲಿ ದುರ್ಗಾಂಬಾ ಬಸ್ ಗೆ ಬೆಂಕಿ ; ಕು...
28-02-26 08:53 pm
Mangaluru Muscat Flight: ಮಂಗಳೂರು- ಮಸ್ಕತ್ ನಡುವ...
27-02-26 08:59 pm
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm