ಬ್ರೇಕಿಂಗ್ ನ್ಯೂಸ್
13-05-21 03:29 pm Headline Karnataka News Network ಕರ್ನಾಟಕ
ಚಾಮರಾಜನಗರ, ಮೇ 13: ಆಕ್ಸಿಜನ್ ಕೊರತೆಯಿಂದ 24 ಜನರ ಸಾಮೂಹಿಕ ಸಾವಿಗೆ ಕಾರಣವಾಗಿದ್ದ ಚಾಮರಾಜನಗರ ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಕಳೆದ 24 ಗಂಟೆಯಲ್ಲಿ ಹನ್ನೊಂದು ಮಂದಿ ಸಾವು ಕಂಡಿದ್ದಾರೆ.
ಈ ಬಗ್ಗೆ ಜಿಲ್ಲಾಸ್ಪತ್ರೆಯಿಂದ ಬುಲೆಟಿನ್ ನೀಡಲಾಗಿದ್ದು ಬುಧವಾರ ಬೆಳಗ್ಗೆ 9 ರಿಂದ ಗುರುವಾರ ಬೆಳಗ್ಗೆ 9 ಗಂಟೆ ವರೆಗೆ 11 ಮಂದಿ ಕೊರೊನಾ ಸೋಂಕಿತರು ಸಾವು ಕಂಡಿದ್ದಾಗಿ ಮಾಹಿತಿ ನೀಡಿದ್ದಾರೆ.

24 ಗಂಟೆ ಅವಧಿಯಲ್ಲಿ ಚಾಮರಾಜನಗರ ತಾಲ್ಲೂಕಿನ 9 ಮಂದಿ ಹಾಗೂ ಕೊಳ್ಳೇಗಾಲ ತಾಲ್ಲೂಕಿನ ಇಬ್ಬರು ಸಾವನ್ನಪ್ಪಿದ್ದಾರೆ. ಬುಧವಾರ ಬೆಳಗ್ಗೆ 9 ಗಂಟೆಯಿಂದ ಸಂಜೆ 6 ರ ತನಕ 4 ಮಂದಿ ಸಾವನ್ನಪ್ಪಿದ್ದು, ಸಂಜೆಯಿಂದ ಗುರುವಾರ ಬೆಳಗ್ಗೆ 9 ಗಂಟೆಯ ನಡುವೆ ಮತ್ತೆ 7 ಮಂದಿ ಸಾವನ್ನಪ್ಪಿದ್ದಾರೆ. ಮೃತಪಟ್ಟ 11 ಮಂದಿಯಲ್ಲಿ 7 ಮಂದಿ ಕೋವಿಡ್ ಸೋಂಕಿತರಾಗಿದ್ದರೆ, 4 ಮಂದಿ ಕೋವಿಡ್ ಸೋಂಕಿನ ಲಕ್ಷಣಗಳನ್ನು ಹೊಂದಿದ್ದವರು ಸಾವನ್ನಪ್ಪಿದ್ದಾರೆ.

ತಮಿಳುನಾಡಿಗೆ ಗಡಿಯನ್ನು ಹೊಂದಿಕೊಂಡಿರುವ ಬಹುತೇಕ ಅರಣ್ಯ ಭಾಗವನ್ನು ಹೊಂದಿರುವ ಚಾಮರಾಜನಗರ ಜಿಲ್ಲೆಯಲ್ಲಿ ದಿನವೂ ಸರಾಸರಿ ಹತ್ತು ಮಂದಿ ಸಾಯುತ್ತಿದ್ದಾರೆ. ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವುದು ಒಂದು ಕಡೆಯಾದರೆ, ಸಾವಿನ ಪ್ರಮಾಣವೂ ಈ ಭಾಗದಲ್ಲಿ ಹೆಚ್ಚಿರುವುದು ಗ್ರಾಮೀಣ ಭಾಗದ ಜಿಲ್ಲೆಯ ಶೋಚನೀಯ ಸ್ಥಿತಿಯನ್ನು ತೋರಿಸುತ್ತಿದೆ. ತಮಿಳು ಮತ್ತು ಮಲಯಾಳಿ ಭಾಷಿಗರು ಹೆಚ್ಚಿರುವ ಚಾಮರಾಜನಗರ ತಾಲೂಕಿನಲ್ಲೇ ಸೋಂಕು ಹೆಚ್ಚಿರುವುದು ಕಂಡುಬಂದಿದೆ. ವೈದ್ಯಕೀಯ ಚಿಕಿತ್ಸೆಯ ವೈಫಲ್ಯವೋ, ಅಧಿಕಾರಿಗಳ ಅಸಡ್ಡೆಯೋ ಗ್ರಾಮೀಣ ಭಾಗದಲ್ಲಿ ಕೊರೊನಾ ಸೋಂಕು ಮರಣ ಮೃದಂಗ ಬಾರಿಸುತ್ತಿರುವುದು ಈ ಭಾಗದ ಜನರ ಆತಂಕಕ್ಕೆ ಕಾರಣವಾಗಿದೆ.
Chamrajnagara reports 11 death of Covid-19 Patients in the last 24 hours resulting in major failure of administration. Recently 24 patients had died of oxygen shortage at the government hospital.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 10:24 pm
Mangalore Correspondent
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
ಜ.18ರಂದು ಮಂಗಳೂರಿನಲ್ಲಿ ಪ್ರಪ್ರಥಮ ಜಾಗತಿಕ ಬಿಲ್ಲವರ...
15-01-26 04:01 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm