ಬ್ರೇಕಿಂಗ್ ನ್ಯೂಸ್
17-05-21 12:03 pm Headline Karnataka News Network ಕರ್ನಾಟಕ
ಕಳಸ, ಮೇ 17 : ಕೊರೊನಾ ಸೋಂಕಿತನಾಗಿ, ಮನೆಯ ಜಗುಲಿಯಲ್ಲಿ ಮಲಗಿದ್ದ ಅಣ್ಣನನ್ನು ತಮ್ಮನೇ ಕೊಡಲಿಯಿಂದ ಕೊಚ್ಚಿ ಕೊಲೆಗೈದ ಭೀಕರ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಮರಸಣಿಗೆಯ ಕಂಬಳಗದ್ದೆಯಲ್ಲಿ ನಡೆದಿದೆ.
ಕೊಲೆಯಾದ ವ್ಯಕ್ತಿ ಮಹಾವೀರ (45) ಎಂಬಾತನಾಗಿದ್ದು ಆರೋಪಿಯನ್ನು ಪಾರ್ಶ್ವನಾಥ್ ಎಂದು ಗುರುತಿಸಲಾಗಿದೆ. ಮಹಾವೀರನಿಗೆ ಮೂರು ದಿನಗಳ ಹಿಂದೆ ಕೊರೊನಾ ಸೋಂಕು ತಗುಲಿದ್ದು ಮೂಡಿಗೆರೆಯ ಎಂಜಿಎಂ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಶುಕ್ರವಾರ ಸಂಜೆ ಆಸ್ಪತ್ರೆಯಲ್ಲಿ ನರ್ಸ್ ಮತ್ತು ವೈದ್ಯರೊಂದಿಗೆ ಜಗಳ ಮಾಡಿಕೊಂಡು ಬಂದಿದ್ದ ಮಹಾವೀರ ಮನೆಗೆ ಬಂದು ಹೊರಗಡೆ ಜಗಲಿಯಲ್ಲಿ ಮಲಗಿದ್ದ. ತಮ್ಮ ಮನೆಗೆ ಬಂದಾಗ ಮನೆಯಲ್ಲಿ ಮಹಾವೀರ್ ಇರುವುದನ್ನು ಕಂಡು ಕೊರೊನಾ ಗುಣವಾಗದೆ ಯಾಕೆ ಮನೆಗೆ ಬಂದೆ ಎಂದು ಪಾರ್ಶ್ವನಾಥ್ ಪ್ರಶ್ನೆ ಮಾಡಿದ್ದಾನೆ.




ಕೊರೊನಾ ಗುಣವಾಗದೆ ಮನೆಗೆ ಬಂದಿದ್ದ ವಿಚಾರಕ್ಕೆ ಜಗಳ ನಡೆದು ಆಸ್ತಿ ವಿಚಾರದಲ್ಲಿ ಮಾತಿಗೆ ಮಾತು ಬೆಳೆದು ಅಣ್ಣನನ್ನು ಸ್ವತಃ ತಮ್ಮನೇ ಹಲ್ಲೆ ನಡೆಸಿದ್ದಾನೆ. ಕುತ್ತಿಗೆಯನ್ನು ಕಾಲಿನಿಂದ ಒತ್ತಿ ತಲೆ ಮತ್ತು ಮುಖವನ್ನು ಕತ್ತಿಯಿಂದ ಕೊಚ್ಚಿದ್ದಾನೆ. ಮನೆ ಮಂದಿ ಕತ್ತಿಯನ್ನು ಕಸಿದುಕೊಂಡಿದ್ದು ಅಲ್ಲಿಗೇ ಬಿಡದ ಪಾರ್ಶ್ವನಾಥ ಸೌದೆ ಕೊಟ್ಟಿಗೆಯಲ್ಲಿದ್ದ ಕೊಡಲಿಯನ್ನು ತಂದು ಅಣ್ಣನನ್ನೇ ಒಂದೇ ಏಟಿಗೆ ಕೊಚ್ಚಿ ಕೊಲೆ ಮಾಡುವ ಮೂಲಕ ಕೌರ್ಯ ಮೆರೆದಿದ್ದಾನೆ.
ತೀವ್ರವಾಗಿ ಗಾಯಗೊಂಡ ಮಹಾವೀರ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಕಳಸ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಆರೋಪಿಯನ್ನು ಬಂಧಿಸಿದ್ದಾರೆ.
Younger Brother kills own Eleder Brother who was covid positive for getting discharged from hospital without complete healing form Covid in Kalasa.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
15-07-26 07:40 pm
HK News Staffer
ಉಡುಪಿ ; ಹೆದ್ದಾರಿ ಮಧ್ಯದಲ್ಲೇ ಟೇಬಲ್ ಹಾಕಿ ಟಿವಿ, ಮ...
15-07-26 07:02 pm
ಮುಕ್ಕ ಶ್ರೀನಿವಾಸ್ ಕಾಲೇಜು ಎಂಬಿಬಿಎಸ್ ವಿದ್ಯಾರ್ಥಿನ...
15-07-26 01:17 pm
Kasaragod car Accident: ಕಾಸರಗೋಡಿನಲ್ಲಿ ಡೆಡ್ಲಿ...
15-07-26 12:40 pm
ಟ್ರಾಫಿಕ್ ದಂಡ ಕಟ್ಟಲು ಎಪಿಕೆ ಫೈಲ್ ಡೌನ್ಲೋಡ್ ಮಾಡಲು...
14-07-26 09:13 pm