ಬ್ರೇಕಿಂಗ್ ನ್ಯೂಸ್
19-05-21 11:34 am Headline Karnataka News Network ಕರ್ನಾಟಕ
ಬೆಂಗಳೂರು, ಮೇ 19: ಕೋವಿಡ್ ಸೋಂಕಿನ ನಿಯಂತ್ರಣಕ್ಕಾಗಿ ರಾಜ್ಯದಲ್ಲಿ ಮತ್ತೆ ಲಾಕ್ಡೌನ್ ವಿಸ್ತರಣೆ ಮಾಡಬೇಕು. ಸರಕಾರ ಬಡವರಿಗೆ ವಿಶೇಷ ಪ್ಯಾಕೇಜ್ ಘೋಷಿಸಿ ಒಂದು ತಿಂಗಳ ಕಾಲ ಲಾಕ್ಡೌನ್ ವಿಸ್ತರಣೆ ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಪ್ರತಿದಿನ ಹೆಚ್ಚಳವಾಗುತ್ತಿವೆ. ಆದುದರಿಂದ, ಮೇ 24ರ ಬಳಿಕವೂ ಸರಕಾರ ಲಾಕ್ಡೌನ್ ವಿಸ್ತರಣೆ ಮಾಡುವುದು ಅನಿವಾರ್ಯ ಎಂದರು.
ಒಂದು ವೇಳೆ ಸರಕಾರ ಲಾಕ್ಡೌನ್ ವಿಸ್ತರಣೆ ಮಾಡದೇ ಇದ್ದರೆ ದೊಡ್ಡ ಅನಾಹುತಗಳು ಸಂಭವಿಸಬಹುದು. ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ಕಡಿಮೆಯಾಗಿಲ್ಲ. ಪರೀಕ್ಷೆಗಳು ಕಡಿಮೆ ಸಂಖ್ಯೆಯಲ್ಲಿ ಆಗುತ್ತಿರುವುದರಿಂದ ಪ್ರಕರಣಗಳ ಸಂಖ್ಯೆ ಕಡಿಮೆ ಕಾಣಿಸುತ್ತಿದೆ. ಪರೀಕ್ಷೆಗಳ ಪ್ರಮಾಣ ಕಡಿಮೆ ಆಗುತ್ತಿರುವುದು ಆತಂಕಕಾರಿ ಎಂದು ಅವರು ಹೇಳಿದರು.
ರಾಜ್ಯ ಸರಕಾರ ತನ್ನ ವೈಫಲ್ಯಗಳನ್ನು ಮುಚ್ಚಿಕೊಳ್ಳಲು ಜನರ ಜೀವದ ಜೊತೆ ಆಟವಾಡುತ್ತಿರುವುದು ಸರಿಯಲ್ಲ. ಈಗಾಗಲೇ ಈ ವಿಚಾರದಲ್ಲಿ ಸರಕಾರ ಸಾಕಷ್ಟು ಎಡವಿದೆ. ಇನ್ನು ಮುಂದೆಯೂ ಅದೇ ತಪ್ಪುಗಳನ್ನು ಪುನರಾವರ್ತನೆ ಮಾಡುವುದು ಸರಿಯಲ್ಲ. ತಾತ್ಕಾಲಿಕವಾಗಿ ಈಗ ಜನರ ದಿಕ್ಕು ತಪ್ಪಿಸಲು ಹೋಗಿ ಮುಂದೆ ದೊಡ್ಡ ಅನಾಹುತಕ್ಕೆ ದಾರಿ ಮಾಡಿಕೊಡಬೇಡಿ ಎಂದು ಕುಮಾರಸ್ವಾಮಿ ಎಚ್ಚರಿಕೆ ನೀಡಿದರು.

ಕೊರೊನಾ ವಿಚಾರದಲ್ಲಿ ಕಾಂಗ್ರೆಸ್ ರಾಜಕೀಯ
ಕೋವಿಡ್ ವಿಚಾರದಲ್ಲಿ ಕಾಂಗ್ರೆಸ್ ಪಕ್ಷ ರಾಜಕೀಯ ಮಾಡುತ್ತಿದೆ. ಸೋಂಕಿಗೆ ಲಸಿಕೆ ಬಂದ ಆರಂಭದ ದಿನಗಳಲ್ಲಿ ಅದನ್ನು ಯಾರು ತೆಗೆದುಕೊಳ್ಳಬೇಡಿ ಎಂದು ಅಪಪ್ರಚಾರ ಮಾಡಿ, ಈಗ ಲಸಿಕೆಯನ್ನು ಅವರದೇ ಪಕ್ಷದ ವತಿಯಿಂದ ಕೊಡಲು ಮುಂದಾಗಿದ್ದು ಅದರ ದ್ವಂದ್ವ ನೀತಿಯನ್ನು ತೋರಿಸುತ್ತದೆ. ಈ ಮೂಲಕ ಸಣ್ಣತನದ ರಾಜಕೀಯ ಮಾಡುತ್ತಿದೆ ಎಂದು ಕುಮಾರಸ್ವಾಮಿ ಟೀಕಿಸಿದರು.
HD Kumaraswamy says extend lockdown for a Month and provide a good package for the poor people in Karnataka.
01-03-26 09:20 pm
HK News Staffer
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
ಖಮೇನಿ ಹತ್ಯೆ ಖಂಡನೀಯ, ಇರಾನ್ ಮೇಲಿನ ಅಮೆರಿಕ ಯುದ್ಧ...
01-03-26 04:51 pm
01-03-26 09:52 am
HK News Staffer
ದುಬೈ, ಅಬುಧಾಬಿ ಮೇಲೆ ಇರಾನ್ ಮಿಸೈಲ್ ದಾಳಿ ; ಜಗತ್ತಿ...
28-02-26 10:54 pm
ಗಲ್ಫ್ ರಾಷ್ಟ್ರಗಳಿಗೆ ವಿಮಾನ ಸಂಚಾರ ವ್ಯತ್ಯಯ ; ಏರ್...
28-02-26 07:17 pm
ಇರಾನ್ ಮೇಲೆ ಮುಗಿಬಿದ್ದ ಅಮೆರಿಕ-ಇಸ್ರೇಲ್ ಪಡೆಗಳು ;...
28-02-26 05:28 pm
ತ್ರಿಷಾ ಬಿರುಗಾಳಿ ; ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ್...
28-02-26 01:08 pm
01-03-26 08:37 pm
HK News Staffer
PSI Nasir Hussain: ಉಡುಪಿ ; ಮ್ಯಾರಥಾನಲ್ಲಿ ಪಾಲ್ಗ...
01-03-26 04:07 pm
ಹುಲಿಕಲ್ ಘಾಟಿಯಲ್ಲಿ ದುರ್ಗಾಂಬಾ ಬಸ್ ಗೆ ಬೆಂಕಿ ; ಕು...
28-02-26 08:53 pm
Mangaluru Muscat Flight: ಮಂಗಳೂರು- ಮಸ್ಕತ್ ನಡುವ...
27-02-26 08:59 pm
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm