ಬ್ರೇಕಿಂಗ್ ನ್ಯೂಸ್
19-05-21 12:42 pm Headline Karnataka News Network ಕರ್ನಾಟಕ
ಬೆಂಗಳೂರು, ಮೇ 19: ಲಾಕ್ಡೌನ್ ಸಂಕಷ್ಟಕ್ಕೆ ಸಿಲುಕಿರುವ ಶ್ರಮಿಕ ವರ್ಗಕ್ಕೆ ಸರಕಾರ ಘೋಷಣೆ ಮಾಡಿರುವ ನೆರವಿನ ಪ್ಯಾಕೇಜ್ ಬಗ್ಗೆ ಕಾಂಗ್ರೆಸ್ ಮತ್ತು ಜೆಡಿಎಸ್ ತೀವ್ರ ವಾಗ್ದಾಳಿ ನಡೆಸಿವೆ.
ಯಾವುದೇ ಪೂರ್ವ ಯೋಜನೆ ಇಲ್ಲದೆ ತರಾತುರಿಯಲ್ಲಿ ಪರಿಹಾರ ಘೋಷಣೆ ಮಾಡಿದ್ದಾರೆ. ರಾಜ್ಯದಲ್ಲಿ ಎಷ್ಟು ಮಂದಿಗೆ ಎಷ್ಟೆಲ್ಲಾ ನಷ್ಟ ಆಗಿದೆ ಎನ್ನುವ ಬಗ್ಗೆ ಮಾಹಿತಿಯನ್ನೇ ಪಡೆಯದೆ ಜುಜುಬಿ ಪರಿಹಾರ ಘೋಷಣೆ ಮಾಡಿದ್ದಾರೆ. ಆರ್ಥಿಕ ಪ್ಯಾಕೇಜ್ ಘೋಷಣೆ ಮಾಡೋಕೂ ಮುನ್ನ ಅಧ್ಯಯನ ನಡೆಸಬೇಕಿತ್ತು. ತೋರಿಕೆಗೆ ಪ್ಯಾಕೇಜ್ ಘೋಷಣೆ ಮಾಡಬಾರದು. ಸರಕಾರ ಭಿಕ್ಷೆ ನೀಡುವುದಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಟೀಕಿಸಿದ್ದಾರೆ. ಕಳೆದ ಬಾರಿ ಮಾಡಿದ್ದ ಘೋಷಣೆಯೇ ಜನರಿಗೆ ತಲುಪಿಲ್ಲ. ಯಾರಿಗೆ ಎಷ್ಟು ಕೊಟ್ಟಿದ್ದೀರಿ ಎಂದು ಲೆಕ್ಕ ಕೊಡಿ. ಹೂವು ಬೆಳಗಾರರಿಗೆ ಕಳೆದ ಬಾರಿ ಹೆಕ್ಟೇರ್ ಗೆ 25 ಸಾವಿರ ರೂ.ನಂತೆ ಕೊಡುವುದಾಗಿ ಹೇಳಿದ್ದಿರಿ. ಎಷ್ಟು ಮಂದಿಗೆ ಸಿಕ್ಕಿದೆ, ಲೆಕ್ಕ ಕೊಡಿ. ಸರಕಾರದ ಆರ್ಥಿಕ ಪ್ಯಾಕೇಜ್ ಬರೀಯ ಬೋಗಸ್ ಎಂದು ಡಿಕೆಶಿ ಟೀಕಿಸಿದ್ದಾರೆ.


ಬಡವನ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆ !
ಸರಕಾರದ ಆರ್ಥಿಕ ಪ್ಯಾಕೇಜ್ ಬಡವರ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆ ಅಷ್ಟೇ ಎಂದು ಜೆಡಿಎಸ್ ನಾಯಕ ಕುಮಾರಸ್ವಾಮಿ ಟೀಕಿಸಿದ್ದಾರೆ. ಇವರಿಗೆ ಬಡವರ ಬಗ್ಗೆ ಕಾಳಜಿ ಇರುತ್ತಿದ್ದರೆ ಈ ರೀತಿ ಜುಜುಬಿ ಪರಿಹಾರ ಘೋಷಣೆ ಮಾಡುತ್ತಿರಲಿಲ್ಲ. ಎರಡು ಸಾವಿರ, ಮೂರು ಸಾವಿರದಲ್ಲಿ ಜೀವನ ನಡೆಯುತ್ತಾ.. ಇವರಿಗೆ ಕನಿಷ್ಠ ಮಾಹಿತಿ ಇದ್ಯಾ.. ದಿನಕೂಲಿ ಮಾಡೋ ಮಂದಿಯ ಬಗ್ಗೆ ಇವರಿಗೆ ಮಾಹಿತಿಯೇ ಇಲ್ಲ.. ರಾಜ್ಯದ ಜನರ ಬಗ್ಗೆ ಸರಿಯಾದ ಮಾಹಿತಿಯೇ ಇವರ ಬಳಿ ಇಲ್ಲ. ಏನೋ ಪ್ಯಾಕೇಜ್ ಘೋಷಣೆ ಮಾಡಬೇಕೆಂದು ಒಂದಷ್ಟು ಘೋಷಣೆ ಮಾಡಿದ್ದಾರೆ. ಸರಕಾರದ ಆರ್ಥಿಕ ಪರಿಸ್ಥಿತಿ ಹೇಗಿದೆ ಎನ್ನೋದು ಗೊತ್ತು. ನಾನು ಕೂಡ ಸರಕಾರ ನಡೆಸಿದವನು. ಹಾಗೆ ನೋಡಿದರೆ ಕಳೆದ ಬಾರಿ ದೊಡ್ಡ ಕಷ್ಟವಾಗಿತ್ತು. ಈ ಬಾರಿ ಅಂಥ ಸ್ಥಿತಿ ಇಲ್ಲ. ಸರಕಾರ ಹೇಗೆ ನಡೆಸಬೇಕು, ಆರ್ಥಿಕ ಪರಿಸ್ಥಿತಿ ಹೇಗಿದೆ ಎನ್ನೋದು ಗೊತ್ತು. ಇವರು ಜುಜುಬಿ ಪರಿಹಾರ ನೀಡಿ ದುಡಿಯುವ ಜನರನ್ನು ಅಣಕಿಸಿದ್ದಾರೆ ಎಂದು ಕಟುವಾಗಿ ಟೀಕೆ ಮಾಡಿದ್ದಾರೆ.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
15-07-26 07:40 pm
HK News Staffer
ಉಡುಪಿ ; ಹೆದ್ದಾರಿ ಮಧ್ಯದಲ್ಲೇ ಟೇಬಲ್ ಹಾಕಿ ಟಿವಿ, ಮ...
15-07-26 07:02 pm
ಮುಕ್ಕ ಶ್ರೀನಿವಾಸ್ ಕಾಲೇಜು ಎಂಬಿಬಿಎಸ್ ವಿದ್ಯಾರ್ಥಿನ...
15-07-26 01:17 pm
Kasaragod car Accident: ಕಾಸರಗೋಡಿನಲ್ಲಿ ಡೆಡ್ಲಿ...
15-07-26 12:40 pm
ಟ್ರಾಫಿಕ್ ದಂಡ ಕಟ್ಟಲು ಎಪಿಕೆ ಫೈಲ್ ಡೌನ್ಲೋಡ್ ಮಾಡಲು...
14-07-26 09:13 pm