ಬ್ರೇಕಿಂಗ್ ನ್ಯೂಸ್
19-05-21 12:42 pm Headline Karnataka News Network ಕರ್ನಾಟಕ
ಬೆಂಗಳೂರು, ಮೇ 19: ಲಾಕ್ಡೌನ್ ಸಂಕಷ್ಟಕ್ಕೆ ಸಿಲುಕಿರುವ ಶ್ರಮಿಕ ವರ್ಗಕ್ಕೆ ಸರಕಾರ ಘೋಷಣೆ ಮಾಡಿರುವ ನೆರವಿನ ಪ್ಯಾಕೇಜ್ ಬಗ್ಗೆ ಕಾಂಗ್ರೆಸ್ ಮತ್ತು ಜೆಡಿಎಸ್ ತೀವ್ರ ವಾಗ್ದಾಳಿ ನಡೆಸಿವೆ.
ಯಾವುದೇ ಪೂರ್ವ ಯೋಜನೆ ಇಲ್ಲದೆ ತರಾತುರಿಯಲ್ಲಿ ಪರಿಹಾರ ಘೋಷಣೆ ಮಾಡಿದ್ದಾರೆ. ರಾಜ್ಯದಲ್ಲಿ ಎಷ್ಟು ಮಂದಿಗೆ ಎಷ್ಟೆಲ್ಲಾ ನಷ್ಟ ಆಗಿದೆ ಎನ್ನುವ ಬಗ್ಗೆ ಮಾಹಿತಿಯನ್ನೇ ಪಡೆಯದೆ ಜುಜುಬಿ ಪರಿಹಾರ ಘೋಷಣೆ ಮಾಡಿದ್ದಾರೆ. ಆರ್ಥಿಕ ಪ್ಯಾಕೇಜ್ ಘೋಷಣೆ ಮಾಡೋಕೂ ಮುನ್ನ ಅಧ್ಯಯನ ನಡೆಸಬೇಕಿತ್ತು. ತೋರಿಕೆಗೆ ಪ್ಯಾಕೇಜ್ ಘೋಷಣೆ ಮಾಡಬಾರದು. ಸರಕಾರ ಭಿಕ್ಷೆ ನೀಡುವುದಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಟೀಕಿಸಿದ್ದಾರೆ. ಕಳೆದ ಬಾರಿ ಮಾಡಿದ್ದ ಘೋಷಣೆಯೇ ಜನರಿಗೆ ತಲುಪಿಲ್ಲ. ಯಾರಿಗೆ ಎಷ್ಟು ಕೊಟ್ಟಿದ್ದೀರಿ ಎಂದು ಲೆಕ್ಕ ಕೊಡಿ. ಹೂವು ಬೆಳಗಾರರಿಗೆ ಕಳೆದ ಬಾರಿ ಹೆಕ್ಟೇರ್ ಗೆ 25 ಸಾವಿರ ರೂ.ನಂತೆ ಕೊಡುವುದಾಗಿ ಹೇಳಿದ್ದಿರಿ. ಎಷ್ಟು ಮಂದಿಗೆ ಸಿಕ್ಕಿದೆ, ಲೆಕ್ಕ ಕೊಡಿ. ಸರಕಾರದ ಆರ್ಥಿಕ ಪ್ಯಾಕೇಜ್ ಬರೀಯ ಬೋಗಸ್ ಎಂದು ಡಿಕೆಶಿ ಟೀಕಿಸಿದ್ದಾರೆ.


ಬಡವನ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆ !
ಸರಕಾರದ ಆರ್ಥಿಕ ಪ್ಯಾಕೇಜ್ ಬಡವರ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆ ಅಷ್ಟೇ ಎಂದು ಜೆಡಿಎಸ್ ನಾಯಕ ಕುಮಾರಸ್ವಾಮಿ ಟೀಕಿಸಿದ್ದಾರೆ. ಇವರಿಗೆ ಬಡವರ ಬಗ್ಗೆ ಕಾಳಜಿ ಇರುತ್ತಿದ್ದರೆ ಈ ರೀತಿ ಜುಜುಬಿ ಪರಿಹಾರ ಘೋಷಣೆ ಮಾಡುತ್ತಿರಲಿಲ್ಲ. ಎರಡು ಸಾವಿರ, ಮೂರು ಸಾವಿರದಲ್ಲಿ ಜೀವನ ನಡೆಯುತ್ತಾ.. ಇವರಿಗೆ ಕನಿಷ್ಠ ಮಾಹಿತಿ ಇದ್ಯಾ.. ದಿನಕೂಲಿ ಮಾಡೋ ಮಂದಿಯ ಬಗ್ಗೆ ಇವರಿಗೆ ಮಾಹಿತಿಯೇ ಇಲ್ಲ.. ರಾಜ್ಯದ ಜನರ ಬಗ್ಗೆ ಸರಿಯಾದ ಮಾಹಿತಿಯೇ ಇವರ ಬಳಿ ಇಲ್ಲ. ಏನೋ ಪ್ಯಾಕೇಜ್ ಘೋಷಣೆ ಮಾಡಬೇಕೆಂದು ಒಂದಷ್ಟು ಘೋಷಣೆ ಮಾಡಿದ್ದಾರೆ. ಸರಕಾರದ ಆರ್ಥಿಕ ಪರಿಸ್ಥಿತಿ ಹೇಗಿದೆ ಎನ್ನೋದು ಗೊತ್ತು. ನಾನು ಕೂಡ ಸರಕಾರ ನಡೆಸಿದವನು. ಹಾಗೆ ನೋಡಿದರೆ ಕಳೆದ ಬಾರಿ ದೊಡ್ಡ ಕಷ್ಟವಾಗಿತ್ತು. ಈ ಬಾರಿ ಅಂಥ ಸ್ಥಿತಿ ಇಲ್ಲ. ಸರಕಾರ ಹೇಗೆ ನಡೆಸಬೇಕು, ಆರ್ಥಿಕ ಪರಿಸ್ಥಿತಿ ಹೇಗಿದೆ ಎನ್ನೋದು ಗೊತ್ತು. ಇವರು ಜುಜುಬಿ ಪರಿಹಾರ ನೀಡಿ ದುಡಿಯುವ ಜನರನ್ನು ಅಣಕಿಸಿದ್ದಾರೆ ಎಂದು ಕಟುವಾಗಿ ಟೀಕೆ ಮಾಡಿದ್ದಾರೆ.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 10:24 pm
Mangalore Correspondent
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
ಜ.18ರಂದು ಮಂಗಳೂರಿನಲ್ಲಿ ಪ್ರಪ್ರಥಮ ಜಾಗತಿಕ ಬಿಲ್ಲವರ...
15-01-26 04:01 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm