ಬ್ರೇಕಿಂಗ್ ನ್ಯೂಸ್
22-05-21 11:12 am Headline Karnataka News Network ಕರ್ನಾಟಕ
Photo credits : motorindiaonline
ರಾಮನಗರ, ಮೇ 22: ದೇಶದ ಸಾರಿಗೆ ಉದ್ಯಮಕ್ಕೆ ಅಪಾರ ಕೊಡುಗೆ ನೀಡಿದ್ದ ಎಸ್ಆರ್ಎಸ್ ಟ್ರಾವೆಲ್ಸ್ ಮತ್ತು ಲಾಜಿಸ್ಟಿಕ್ಸ್ ಸಂಸ್ಥಾಪಕ ಮತ್ತು ವ್ಯವಸ್ಥಾಪಕ ನಿರ್ದೇಶಕ ಕೆ.ಟಿ ರಾಜಶೇಖರ್ (78) ಶುಕ್ರವಾರ ನಿಧನರಾದರು.
ರಾಮನಗರ ಜಿಲ್ಲೆ ಮಾಗಡಿ ಮೂಲದ ಕೆ.ಟಿ ರಾಜಶೇಖರ್, 1943ರ ಸೆ.17ರಂದು ಜನಿಸಿದ್ದರು. ಡಿಪ್ಲೊಮಾ ಇನ್ ಆಟೋಮೊಬೈಲ್ ವ್ಯಾಸಂಗ ಮಾಡಿದ ಅವರು, ಹಲವು ಉದ್ಯೋಗದ ನಂತರ ದೇಶದ ಪ್ರಮುಖ ಸಾರಿಗೆ ಸಂಸ್ಥೆಗಳಲ್ಲಿ ಒಂದಾಗಿರುವ ಎಸ್ಎಆರ್ಸ್ ಟ್ರಾವೆಲ್ಸ್ ಮತ್ತು ಲಾಜಿಸ್ಟಿಕ್ಸ್ ಸಂಸ್ಥೆಯನ್ನು 1971ರಲ್ಲಿ ಸ್ಥಾಪಿಸಿದರು.
ಕೊರೊನಾ ಸೋಂಕಿನಿಂದ ಬಳಲುತ್ತಿದ್ದ ಕೆ.ಟಿ.ರಾಜಶೇಖರ್ ಇಳಿವಯಸ್ಸಿನಲ್ಲೂ ಚಟುವಟಿಕೆಯಿಂದ ಇರುತ್ತಿದ್ದರು. ಕಳೆದ 10 ದಿನಗಳ ಹಿಂದೆ ಕೊರೊನಾ ಸೋಂಕಿಗೆ ತುತ್ತಾಗಿದ್ದರು. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು, ಶುಕ್ರವಾರ (ಮೇ 21) ಬೆಳಿಗ್ಗೆ ಮೃತರಾದರು.
ಕೃಷಿ ಕುಟುಂಬದ ಹಿನ್ನೆಲೆಯಿಂದ ಬಂದಿದ್ದ ಕೆ.ಟಿ ರಾಜಶೇಖರ್, ಆರಂಭದಲ್ಲಿ ಟೂರಿಸ್ಟ್ ಬುಕ್ಕಿಂಗ್ ಏಜೆಂಟ್, ಟ್ರಾವೆಲ್ ಏಜೆಂಟ್ ಹೀಗೆ ಹಲವು ರೀತಿಯ ಕೆಲಸಗಳನ್ನು ಮಾಡಿದ್ದರು.
ಕೇವಲ ಒಂದು ಬಸ್ ಮೂಲಕ ಆರಂಭಿಸಿದ್ದ ಎಸ್ಎಆರ್ಸ್ ಸಂಸ್ಥೆ ಇದೀಗ 5500 ಬಸ್ಗಳನ್ನು ಹೊಂದಿದೆ. ನಾಲ್ಕು ಸಾವಿರಕ್ಕೂ ಹೆಚ್ಚಿನ ಸಿಬ್ಬಂದಿ, ನೂರಾರು ಕೋಟಿ ರೂಪಾಯಿಗೂ ಅಧಿಕ ವಹಿವಾಟು ನಡೆಸುತ್ತಿದೆ.
ಬೆಂಗಳೂರು ಎಸ್ಎಆರ್ಸ್ನ ಕೇಂದ್ರ ಕಚೇರಿಯಾಗಿದ್ದರೂ ತಮಿಳುನಾಡಿನ ಚೆನ್ನೈ, ಮಹಾರಾಷ್ಟ್ರದ ಮುಂಬೈ, ಆಂಧ್ರಪ್ರದೇಶದ ವಿಜಯವಾಡ ಸೇರಿ ದೇಶದ ಇನ್ನಿತರ ನಗರಗಳಲ್ಲಿ ಶಾಖೆಗಳನ್ನು ಹೊಂದಿದೆ. ಇದೀಗ ಎಸ್ಎಆರ್ಎಸ್ ಸಂಸ್ಥೆ 50ನೇ ವರ್ಷಕ್ಕೆ ಕಾಲಿಟ್ಟಿದ್ದು ಇದೇ ವೇಳೆ ತನ್ನ ಮಾಲೀಕನನ್ನು ಕಳೆದುಕೊಂಡಿದೆ.
ಕೆ.ಟಿ.ರಾಜಶೇಖರ್ ಮಗಳು ಮೇಘ ಮತ್ತು ಅಳಿಯ ದೀಪಕ್ ಅವರನ್ನು ಅಗಲಿದ್ದಾರೆ. ಎಸ್ಆರ್ಎಸ್ ಟ್ರಾವೆಲ್ಸ್ ಸಂಸ್ಥೆ ಮುನ್ನಡೆಸಲು ಮಗಳು ಮತ್ತು ಅಳಿಯ, ರಾಜಶೇಖರ್ ಅವರಿಗೆ ನೆರವಾಗುತ್ತಿದ್ದರು. ಎಸ್ಎಆರ್ಎಸ್ ಟ್ರಾವೆಲ್ಸ್ ಮತ್ತು ಲಾಜಿಸ್ಟಿಕ್ಸ್ ಸಂಸ್ಥೆಗೆ ಹಲವು ಪ್ರಶಸ್ತಿಗಳು ಲಭಿಸಿದ್ದವು. ಇನ್ಫೋಸಿಸ್, ಅಪೋಲೋ, ಐಬಿಎಂ, ಡೆಲ್ ಸೇರಿ ಇನ್ನಿತರ ಸಂಸ್ಥೆಗಳು ನೀಡುವ ಪ್ರತಿಷ್ಠಿತ ಪ್ರಶಸ್ತಿಗಳಿಗೆ ಎಸ್ಆರ್ಎಸ್ ಸಂಸ್ಥೆ ಭಾಜನವಾಗಿದೆ.
Indias travel gaint SRS travles owner Rajshekar dies through COVID-19. SRS, with a fleet of close to 5,500 vehicles hovering across various locations in the country, is not just another transport company. With a broad vision backed by hard work, the company has been built from scratch by Mr. K. T. Rajashekera, the current CEO of the firm. K.T.R, as he is fondly called by his close associates, is a humble, down-to-earth person and a leader by himself.
24-06-25 10:42 pm
Bangalore Correspondent
Chikkamagaluru Student Suicide, Uniform: ಚಿಕ್...
24-06-25 10:15 pm
Tumakuru Suicide, Instagram Reels: ರೀಲ್ಸ್ ವಿಚ...
24-06-25 08:16 pm
FIR Ex MP Anantkumar Hegde: ಕಾರು ಓವರ್ ಟೇಕ್ ಮಾ...
24-06-25 05:23 pm
Lokayukta Raid, Karnataka: ಬೆಂಗಳೂರು, ಶಿವಮೊಗ್ಗ...
24-06-25 01:53 pm
25-06-25 11:10 am
HK News Desk
ಇರಾನ್ –ಇಸ್ರೇಲ್ ಕದನ ವಿರಾಮ ಘೋಷಿಸಿದ ಡೊನಾಲ್ಡ್ ಟ್ರ...
24-06-25 12:03 pm
ಅಮೆರಿಕದ ಮೇಲೆ ತಿರುಗಿಬಿದ್ದ ಇರಾನ್ ! ಕತಾರ್ನಲ್ಲಿರ...
24-06-25 01:02 am
NEET ಪರೀಕ್ಷೆಯಲ್ಲಿ ಮಗಳಿಗೆ ಕಡಿಮೆ ಅಂಕ ; ಕೂಲಿನಿಂದ...
23-06-25 08:54 pm
Rapper Tommy Genesis, Controversy: ಹಿಂದು ದೇವತ...
23-06-25 04:37 pm
24-06-25 09:49 pm
Mangalore Correspondent
Mangalore, College Student Suicide: ಕಲಿಕೆಯಲ್ಲ...
24-06-25 01:36 pm
Iran Qatar, War, Mangalore Flight: ಗಲ್ಫ್ ರಾಷ್...
24-06-25 11:19 am
Zakariya Jokatte, Mangalore: ಮಂಗಳೂರಿನಲ್ಲಿ ಸ್ಕ...
23-06-25 11:01 pm
Udupi BJP, Kishore Kumar: ಉಡುಪಿ ಬಿಜೆಪಿಯಲ್ಲಿ ಬ...
23-06-25 10:28 pm
24-06-25 09:51 pm
HK News Desk
Bangalore Chit Fund Scam, 10 Crore: ಚೀಟಿ ಹೆಸ್...
24-06-25 07:39 pm
Davanagere Rape: ಮನೆಯ ಮುಂದೆ ಆಟವಾಡುತ್ತಿದ್ದ 7 ವ...
23-06-25 08:51 pm
Manipal, Udupi Murder: ಮಣಿಪಾಲ ; ಹೆತ್ತ ತಾಯಿಯನ್...
23-06-25 11:47 am
Sandhya Pavithra Nagaraj Fraud; ಸೌಜನ್ಯಾ ಹೆಸರಿ...
21-06-25 08:58 pm