ಬ್ರೇಕಿಂಗ್ ನ್ಯೂಸ್
22-05-21 11:46 am Bangalore Correspondent ಕರ್ನಾಟಕ
Photo credits : Representative Image
ಬೆಂಗಳೂರು, ಮೇ 21: ಕೊರೊನಾ ವೈರಸ್ನ ಎರಡನೇ ಅಲೆಯಲ್ಲಿ ನಲುಗಿರುವ ಸಂದರ್ಭದಲ್ಲಿ ಕೆಲ ಖಾಸಗೀ ಆ್ಯಂಬುಲೆನ್ಸ್ಗಳು ಅಕ್ಷರಶಃ ಸುಲಿಗೆಗೆ ಇಳಿದಿವೆ. ಇದಕ್ಕೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಖಾಸಗೀ ಆ್ಯಂಬುಲೆನ್ಸ್ಗಳಿಗೆ ರಾಜ್ಯಸರ್ಕಾರ ದರವನ್ನು ನಿಗದಿಪಡಿಸಿ ಆದೇಶವನ್ನು ಹೊರಡಿಸಿದೆ.
ಎರಡು ವಿಭಾಗದಲ್ಲಿ ಆ್ಯಂಬುಲೆನ್ಸ್ಗಳಿಗೆ ದರವನ್ನು ನಿಗದಿ ಪಡಿಸಲಾಗಿದೆ. ಸಾಮಾನ್ಯ ಆ್ಯಂಬುಲೆನ್ಸ್ಗಳಿಗೆ (ಪೇಶೆಂಟ್ ಟ್ರಾನ್ಸ್ಪೋರ್ಟ್ ಆ್ಯಂಬುಲೆನ್ಸ್)ಮೊದಲ 10 ಕಿ.ಮೀಟರ್ಗಳಿಗೆ 1500 ರೂಪಾಯಿ ಗರಿಷ್ಟದರವನ್ನು ನಿಗದಿಗೊಳಿಸಲಾಗಿದೆ. 10 ನಂತರದ ಪ್ರಯಾಣಕ್ಕೆ ಪ್ರತಿ ಕಿ.ಮೀಗೆ 120 ರೂಪಾಯಿ ನಿಗದಿಗೊಳಿಸಲಾಗಿದೆ. ಇದು ಆಮ್ಲಜನಕ, ಪಿಪಿಇ ಕಿಟ್, ಗ್ಲೌಸ್, ಮಾಸ್ಕ್, ಶೀಲ್ಡ್, ಸ್ಯಾನಿಟೈಸರ್, ಡ್ರೈವರ್ ಈ ಎಲ್ಲವನ್ನೂ ಒಳಗೊಂಡಿರುತ್ತದೆ. ಗಂಟೆಗೆ 200 ರೂಪಾಯಿ ವೈಟಿಂಗ್ ಚಾರ್ಜ್ ಎಂದು ನಿಗದಿಗೊಳಿಸಲಾಗಿದೆ.



ಇನ್ನು ಬೇಸಿಕ್ ಲೈಫ್ ಸಪೋರ್ಟ್ ಆ್ಯಂಬುಲೆನ್ಸ್(ಬಿಎಲ್ಎಸ್)ಗಳಿಗೆ ಮೊದಲ 10 ಕಿಮೀಗಳಿಗೆ 2000 ರೂಪಾಯಿ ನಿಗದಿಗೊಳಿಸಿದ್ದು 10 ಕಿಮೀ ನಂತರದ ಪ್ರಯಾಣಕ್ಕೆ ಪ್ರತಿ ಕಿಮೀಗೆ ಗರಿಷ್ಟ 120 ರೂಪಾಯಿ ವಿಧಿಸಲು ಅವಕಾಶ ನೀಡಲಾಗಿದೆ. ಇದು ಕೂಡ ದು ಆಮ್ಲಜನಕ, ಪಿಪಿಇ ಕಿಟ್, ಗ್ಲೌಸ್, ಮಾಸ್ಕ್, ಶೀಲ್ಡ್, ಸ್ಯಾನಿಟೈಸರ್, ಡ್ರೈವರ್ ಈ ಎಲ್ಲವನ್ನೂ ಒಳಗೊಂಡಿರುತ್ತದೆ. ವೈಟಿಂಗ್ ಚಾರ್ಚ್ ಗಂಟೆಗೆ 250 ರೂ ನಿಗದಿಗೊಳಿಸಿದೆ.

ಈ ದರ ನಿಗದಿಪಡಿಸಲು ನೋಂದಣಿ ವೆಚ್ಚ, ವಿಮಾ ವೆಚ್ಚ, ಸಿಬ್ಬಂದಿಗಳ ವೆಚ್ಚ, ಟೈರ್ಗಳ ವೆಚ್ಚ ಹಾಗೂ ಇತರೆ ವೆಚ್ಚಗಳನ್ನು ಗಣನೆಗೆ ತೆಗೆದುಕೊಳ್ಳಲಾಗಿದೆ ಎಂದು ಆದೇಶ ಪ್ರತಿಯಲ್ಲಿ ವಿವರಿಸಲಾಗಿದೆ. ಉಪಮುಖ್ಯಮಂತ್ರಿ, ಸಾರಿಗೆ ಸಚಿವರು, ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರ ಅಧ್ಯಕ್ಷತೆಯಲ್ಲಿ ಸಭೆ ನಡೆಸಿ ಈ ಬಗ್ಗೆ ನಿರ್ಧಾರವನ್ನು ತೆಗೆದುಕೊಳ್ಳಲಾಗಿತ್ತು. ಈಗ ಅಧಿಕೃತವಾಗಿ ಆದೇಶ ಹೊರಬಿದ್ದಿದೆ.
In the wake of private ambulances fleecing COVID-19 patients by charging exorbitant rates, the state government has fixed a maximum fare that can be charged by the ambulance service provider.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 10:24 pm
Mangalore Correspondent
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
ಜ.18ರಂದು ಮಂಗಳೂರಿನಲ್ಲಿ ಪ್ರಪ್ರಥಮ ಜಾಗತಿಕ ಬಿಲ್ಲವರ...
15-01-26 04:01 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm