ಬ್ರೇಕಿಂಗ್ ನ್ಯೂಸ್
24-05-21 11:27 am Headline Karnataka News Network ಕರ್ನಾಟಕ
ಬಾಗಲಕೋಟೆ, ಮೇ 24 : ಕೊರೊನಾ ಎರಡನೇ ಅಲೆ ರಾಜ್ಯದಲ್ಲಿ ಅಟ್ಟಹಾಸದ ಭೀತಿ ಮೂಡಿಸುತ್ತಿದ್ದರೆ, ಲಸಿಕೆಗೆ ಒಂದೇ ಬಾರಿಗೆ ಬೇಡಿಕೆ ಕಾಣಿಸಿಕೊಂಡು ಲಸಿಕೆಯೇ ಇಲ್ಲದಾಗಿದೆ. ಇಂಥ ಸಂದರ್ಭದಲ್ಲೇ ಈಗಾಗ್ಲೇ ಲಸಿಕೆ ತೆಗೆದುಕೊಂಡವರಲ್ಲಿ ಸೋಂಕಿನ ಪ್ರಮಾಣ ಮತ್ತು ಸಾವು ಸಂಭವಿಸುತ್ತಿರುವ ಪ್ರಮಾಣದ ವಿಚಾರದಲ್ಲಿ ತಜ್ಞರು ಅಧ್ಯಯನ ನಡೆಸಿದ್ದಾರೆ.
ಬಾಗಲಕೋಟೆ ಜಿಲ್ಲೆಯ ಸಿಟಿ ಸ್ಕ್ಯಾನ್ ವೈದ್ಯರು ಸೇರಿ ನಡೆಸಿದ ಅಧ್ಯಯನದಲ್ಲಿ ಲಸಿಕೆ ಪಡೆದವರಲ್ಲಿ ಸಾವಿನ ಪ್ರಮಾಣ ಅತ್ಯಂತ ಕಡಿಮೆ. ಅಷ್ಟೇ ಅಲ್ಲ, ಲಸಿಕೆ ಪಡೆದವರ ಜೀವ ಬಹುತೇಕ ಸೇಫ್ ಎನ್ನುವ ವಿಚಾರವನ್ನು ವೈದ್ಯರು ಕಂಡುಕೊಂಡಿದ್ದಾರೆ.
ಎರಡನೇ ಅಲೆಯಲ್ಲಿ ಕೊರೊನಾ ಪತ್ತೆಗಾಗಿ ಸಿಟಿ ಸ್ಕ್ಯಾನ್ ಮಾಡಿಸಿದ ಸೋಂಕಿತರ ಮಾಹಿತಿ ಸಂಗ್ರಹಿಸಿ, ತಾಳೆಹಾಕಿ ನೋಡಿದಾಗ ಈ ವಿಚಾರ ಕಂಡುಬಂದಿದೆ.

ಸಿಟಿ ಸ್ಕ್ಯಾನ್ ಮಾಡಿಸಿದ ಒಂದು ಸಾವಿರ ಜನರ ಮಾಹಿತಿ ಪಡೆದು, ಅವರಲ್ಲಿ ಸೋಂಕಿನ ತೀವ್ರತೆಯ ಬಗ್ಗೆ ಅಧ್ಯಯನ ನಡೆಸಿದ್ದಾರೆ. ಒಂದು ಸಾವಿರ ಜನರಲ್ಲಿ ಸೋಂಕು ಕಾಣಿಸಿದ್ದ ಶೇ. 75 ಜನರು ವ್ಯಾಕ್ಸಿನ್ ಹಾಕಿಸಿಕೊಂಡಿರಲಿಲ್ಲ. ಅಲ್ಲದೆ, ಸೋಂಕು ಕಾಣಿಸಿದ ಶೇ.25 ಜನರು ಸಿಂಗಲ್ ಡೋಸ್ ಪಡೆದಿದ್ದರು. ಎರಡು ಡೋಸ್ ಪಡೆದವರ ಪೈಕಿ ಶೇ.5ರಷ್ಟು ಜನರಲ್ಲಿ ಮಾತ್ರ ಸೋಂಕು ಬಂದಿರುವುದು ಕಂಡುಬಂದಿದೆ.
ಇದಲ್ಲದೆ, ಎರಡು ಡೋಸ್ ಪಡೆದ ಸೋಂಕಿತರಲ್ಲಿ ಲಂಗ್ಸ್ ಡ್ಯಾಮೇಜ್ ತೀರಾ ಕಡಿಮೆ ಇರುವುದು ಕಂಡುಬಂದಿದೆ. ಎರಡು ಡೋಜ್ ಲಸಿಕೆ ಪಡೆದವರಲ್ಲಿ ಕೆಲವರಲ್ಲಿ ಸೋಂಕು ಕಾಣಿಸಿದರೂ ಸಾವು ತಡೆದಿದೆ ಎನ್ನುವ ಅಂಶ ಅಧ್ಯಯನದಲ್ಲಿ ಹೊರಬಿದ್ದಿದೆ.

ಹಾಗಾಗಿ, ವ್ಯಾಕ್ಸಿನ್ ಪಡೆದವರ ಜೀವ ಸೇಫ್ ಎನ್ನುವುದು ಅಧ್ಯಯನದಲ್ಲಿ ಸಾಬೀತಾಗಿದೆ. ಯಾವುದೇ ಅಪಪ್ರಚಾರಕ್ಕೆ ಕಿವಿಗೊಡದೆ ಜನರು ಲಸಿಕೆ ಪಡೆಯಬೇಕು ಎಂದು ಹೇಳಿದ್ದಾರೆ ತಜ್ಞರು.
ಈ ಬಾರಿ ಫ್ರಂಟ್ ಲೈನ್ ವಾರಿಯರ್ ಗಳು ಎರಡು ಡೋಜ್ ಪಡೆದ ಪರಿಣಾಮವೇ ಎರಡನೇ ಅಲೆಯ ಸಾವಿನ ಡಂಗುರದ ನಡುವೆಯೂ ಸೇಫ್ ಆಗಿದ್ದಾರೆ. ಕೊರೊನಾಗೆ ಬಲಿಯಾದ ಬಹುತೇಕರು ಲಸಿಕೆ ಪಡೆದಿಲ್ಲ ಎನ್ನುವುದು ಅನೇಕ ಕೋವಿಡ್ ರೋಗಿಗಳಿಗೆ ಚಿಕಿತ್ಸೆ ನೀಡಿರುವ ವೈದ್ಯರು ಅಭಿಪ್ರಾಯ ಪಟ್ಟಿದ್ದಾರೆ. ಹೀಗಾಗಿ ಲಸಿಕೆ ಪಡೆದು ಜೀವ ಉಳಿಸಿಕೊಳ್ಳಿ ಎಂದು ವೈದ್ಯರು ಕರೆ ನೀಡಿದ್ದಾರೆ.
01-03-26 09:20 pm
HK News Staffer
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
ಖಮೇನಿ ಹತ್ಯೆ ಖಂಡನೀಯ, ಇರಾನ್ ಮೇಲಿನ ಅಮೆರಿಕ ಯುದ್ಧ...
01-03-26 04:51 pm
02-03-26 01:34 pm
HK News Staffer
ಖಮೇನಿ ಯುಗಾಂತ್ಯ; ಹಂಗಾಮಿ ಸುಪ್ರೀಂ ಲೀಡರ್ ಸ್ಥಾನಕ್ಕ...
02-03-26 01:30 pm
Ayatollah Khamenei Killed: ಇರಾನ್ ಪರಮೋಚ್ಚ ನಾಯಕ...
01-03-26 09:52 am
ದುಬೈ, ಅಬುಧಾಬಿ ಮೇಲೆ ಇರಾನ್ ಮಿಸೈಲ್ ದಾಳಿ ; ಜಗತ್ತಿ...
28-02-26 10:54 pm
ಗಲ್ಫ್ ರಾಷ್ಟ್ರಗಳಿಗೆ ವಿಮಾನ ಸಂಚಾರ ವ್ಯತ್ಯಯ ; ಏರ್...
28-02-26 07:17 pm
01-03-26 08:37 pm
HK News Staffer
PSI Nasir Hussain: ಉಡುಪಿ ; ಮ್ಯಾರಥಾನಲ್ಲಿ ಪಾಲ್ಗ...
01-03-26 04:07 pm
ಹುಲಿಕಲ್ ಘಾಟಿಯಲ್ಲಿ ದುರ್ಗಾಂಬಾ ಬಸ್ ಗೆ ಬೆಂಕಿ ; ಕು...
28-02-26 08:53 pm
Mangaluru Muscat Flight: ಮಂಗಳೂರು- ಮಸ್ಕತ್ ನಡುವ...
27-02-26 08:59 pm
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm