ಬ್ರೇಕಿಂಗ್ ನ್ಯೂಸ್
24-05-21 11:27 am Headline Karnataka News Network ಕರ್ನಾಟಕ
ಬಾಗಲಕೋಟೆ, ಮೇ 24 : ಕೊರೊನಾ ಎರಡನೇ ಅಲೆ ರಾಜ್ಯದಲ್ಲಿ ಅಟ್ಟಹಾಸದ ಭೀತಿ ಮೂಡಿಸುತ್ತಿದ್ದರೆ, ಲಸಿಕೆಗೆ ಒಂದೇ ಬಾರಿಗೆ ಬೇಡಿಕೆ ಕಾಣಿಸಿಕೊಂಡು ಲಸಿಕೆಯೇ ಇಲ್ಲದಾಗಿದೆ. ಇಂಥ ಸಂದರ್ಭದಲ್ಲೇ ಈಗಾಗ್ಲೇ ಲಸಿಕೆ ತೆಗೆದುಕೊಂಡವರಲ್ಲಿ ಸೋಂಕಿನ ಪ್ರಮಾಣ ಮತ್ತು ಸಾವು ಸಂಭವಿಸುತ್ತಿರುವ ಪ್ರಮಾಣದ ವಿಚಾರದಲ್ಲಿ ತಜ್ಞರು ಅಧ್ಯಯನ ನಡೆಸಿದ್ದಾರೆ.
ಬಾಗಲಕೋಟೆ ಜಿಲ್ಲೆಯ ಸಿಟಿ ಸ್ಕ್ಯಾನ್ ವೈದ್ಯರು ಸೇರಿ ನಡೆಸಿದ ಅಧ್ಯಯನದಲ್ಲಿ ಲಸಿಕೆ ಪಡೆದವರಲ್ಲಿ ಸಾವಿನ ಪ್ರಮಾಣ ಅತ್ಯಂತ ಕಡಿಮೆ. ಅಷ್ಟೇ ಅಲ್ಲ, ಲಸಿಕೆ ಪಡೆದವರ ಜೀವ ಬಹುತೇಕ ಸೇಫ್ ಎನ್ನುವ ವಿಚಾರವನ್ನು ವೈದ್ಯರು ಕಂಡುಕೊಂಡಿದ್ದಾರೆ.
ಎರಡನೇ ಅಲೆಯಲ್ಲಿ ಕೊರೊನಾ ಪತ್ತೆಗಾಗಿ ಸಿಟಿ ಸ್ಕ್ಯಾನ್ ಮಾಡಿಸಿದ ಸೋಂಕಿತರ ಮಾಹಿತಿ ಸಂಗ್ರಹಿಸಿ, ತಾಳೆಹಾಕಿ ನೋಡಿದಾಗ ಈ ವಿಚಾರ ಕಂಡುಬಂದಿದೆ.

ಸಿಟಿ ಸ್ಕ್ಯಾನ್ ಮಾಡಿಸಿದ ಒಂದು ಸಾವಿರ ಜನರ ಮಾಹಿತಿ ಪಡೆದು, ಅವರಲ್ಲಿ ಸೋಂಕಿನ ತೀವ್ರತೆಯ ಬಗ್ಗೆ ಅಧ್ಯಯನ ನಡೆಸಿದ್ದಾರೆ. ಒಂದು ಸಾವಿರ ಜನರಲ್ಲಿ ಸೋಂಕು ಕಾಣಿಸಿದ್ದ ಶೇ. 75 ಜನರು ವ್ಯಾಕ್ಸಿನ್ ಹಾಕಿಸಿಕೊಂಡಿರಲಿಲ್ಲ. ಅಲ್ಲದೆ, ಸೋಂಕು ಕಾಣಿಸಿದ ಶೇ.25 ಜನರು ಸಿಂಗಲ್ ಡೋಸ್ ಪಡೆದಿದ್ದರು. ಎರಡು ಡೋಸ್ ಪಡೆದವರ ಪೈಕಿ ಶೇ.5ರಷ್ಟು ಜನರಲ್ಲಿ ಮಾತ್ರ ಸೋಂಕು ಬಂದಿರುವುದು ಕಂಡುಬಂದಿದೆ.
ಇದಲ್ಲದೆ, ಎರಡು ಡೋಸ್ ಪಡೆದ ಸೋಂಕಿತರಲ್ಲಿ ಲಂಗ್ಸ್ ಡ್ಯಾಮೇಜ್ ತೀರಾ ಕಡಿಮೆ ಇರುವುದು ಕಂಡುಬಂದಿದೆ. ಎರಡು ಡೋಜ್ ಲಸಿಕೆ ಪಡೆದವರಲ್ಲಿ ಕೆಲವರಲ್ಲಿ ಸೋಂಕು ಕಾಣಿಸಿದರೂ ಸಾವು ತಡೆದಿದೆ ಎನ್ನುವ ಅಂಶ ಅಧ್ಯಯನದಲ್ಲಿ ಹೊರಬಿದ್ದಿದೆ.

ಹಾಗಾಗಿ, ವ್ಯಾಕ್ಸಿನ್ ಪಡೆದವರ ಜೀವ ಸೇಫ್ ಎನ್ನುವುದು ಅಧ್ಯಯನದಲ್ಲಿ ಸಾಬೀತಾಗಿದೆ. ಯಾವುದೇ ಅಪಪ್ರಚಾರಕ್ಕೆ ಕಿವಿಗೊಡದೆ ಜನರು ಲಸಿಕೆ ಪಡೆಯಬೇಕು ಎಂದು ಹೇಳಿದ್ದಾರೆ ತಜ್ಞರು.
ಈ ಬಾರಿ ಫ್ರಂಟ್ ಲೈನ್ ವಾರಿಯರ್ ಗಳು ಎರಡು ಡೋಜ್ ಪಡೆದ ಪರಿಣಾಮವೇ ಎರಡನೇ ಅಲೆಯ ಸಾವಿನ ಡಂಗುರದ ನಡುವೆಯೂ ಸೇಫ್ ಆಗಿದ್ದಾರೆ. ಕೊರೊನಾಗೆ ಬಲಿಯಾದ ಬಹುತೇಕರು ಲಸಿಕೆ ಪಡೆದಿಲ್ಲ ಎನ್ನುವುದು ಅನೇಕ ಕೋವಿಡ್ ರೋಗಿಗಳಿಗೆ ಚಿಕಿತ್ಸೆ ನೀಡಿರುವ ವೈದ್ಯರು ಅಭಿಪ್ರಾಯ ಪಟ್ಟಿದ್ದಾರೆ. ಹೀಗಾಗಿ ಲಸಿಕೆ ಪಡೆದು ಜೀವ ಉಳಿಸಿಕೊಳ್ಳಿ ಎಂದು ವೈದ್ಯರು ಕರೆ ನೀಡಿದ್ದಾರೆ.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
15-07-26 07:40 pm
HK News Staffer
ಉಡುಪಿ ; ಹೆದ್ದಾರಿ ಮಧ್ಯದಲ್ಲೇ ಟೇಬಲ್ ಹಾಕಿ ಟಿವಿ, ಮ...
15-07-26 07:02 pm
ಮುಕ್ಕ ಶ್ರೀನಿವಾಸ್ ಕಾಲೇಜು ಎಂಬಿಬಿಎಸ್ ವಿದ್ಯಾರ್ಥಿನ...
15-07-26 01:17 pm
Kasaragod car Accident: ಕಾಸರಗೋಡಿನಲ್ಲಿ ಡೆಡ್ಲಿ...
15-07-26 12:40 pm
ಟ್ರಾಫಿಕ್ ದಂಡ ಕಟ್ಟಲು ಎಪಿಕೆ ಫೈಲ್ ಡೌನ್ಲೋಡ್ ಮಾಡಲು...
14-07-26 09:13 pm