ಬ್ರೇಕಿಂಗ್ ನ್ಯೂಸ್
26-05-21 12:28 pm Headline Karnataka News Network ಕರ್ನಾಟಕ
ಬೆಂಗಳೂರು, ಮೇ 26: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಕಡಿಮೆಯಾಗುತ್ತಿದ್ದರೂ ಕೂಡ ಸಾವಿನ ಸಂಖ್ಯೆಯಲ್ಲಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಜೂನ್ 7ರ ಬಳಿಕವೂ ಕೂಡ ಲಾಕ್ಡೌನ್ ಮುಂದುವರೆಸಲು ಸರ್ಕಾರ ಚಿಂತನೆ ನಡೆಸಿದೆ ಎನ್ನಲಾಗಿದೆ.
ಈಗಾಗಲೇ ಮೇ 10ರಿಂದ 24ರವರೆಗಿದ್ದ ಲಾಕ್ಡೌನ್ ಅನ್ನು ಮತ್ತೆ 14 ದಿನಗಳ ಕಾಲ ಅಂದರೆ ಜೂನ್ 7ರವರೆಗೆ ವಿಸ್ತರಿಸಲಾಗಿತ್ತು, ಬೆಳಗ್ಗೆ 6 ರಿಂದ 10ರವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ಮಾಡಿಕೊಡಲಾಗಿದೆ.
ರಾಜ್ಯದಲ್ಲಿ ಕೊರೊನಾ ನಿಯಂತ್ರಣಕ್ಕೆ ನಿಧಾನಗತಿಯಲ್ಲಿ ಬರುತ್ತಿದ್ದರೂ ಕೂಡ ಸಾವಿನ ಪ್ರಮಾಣ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಲಾಕ್ಡೌನ್ ವಿಸ್ತರಿಸುವುದು ಬಹುತೇಕ ಖಚಿತ ಎಂದೇ ಹೇಳಬಹುದು.


ಜೂನ್ 5ರಂದು ಸಭೆ:
ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಜೂನ್ 5 ರಂದು ಅಧಿಕಾರಿಗಳ ಜತೆ ಸಭೆ ನಡೆಸಲಿದ್ದಾರೆ. ಲಾಕ್ಡೌನ್ ಮುಂದುವರೆಸಲೇಬೇಕು ಇಲ್ಲವಾದರೆ ಕೊರೊನಾ ಕೊಂಡಿಯನ್ನು ತಪ್ಪಿಸಲು ಸಾಧ್ಯವಿಲ್ಲ ಎಂದು ಹಲವು ತಜ್ಞರು ತಮ್ಮ ಅಭಿಪ್ರಾಯವನ್ನು ಸರ್ಕಾರದ ಮುಂದಿರಿಸಿದ್ದಾರೆ. ಜೂನ್ 5ರಂದು ಅಂತಿಮ ನಿರ್ಧಾರ ಹೊರಬೀಳಲಿದೆ.

ಸಾರಿಗೆ ಸಂಚಾರಕ್ಕೆ ಅನುಮತಿ:
ಬಿಎಂಟಿಸಿ, ಕೆಎಸ್ಆರ್ಟಿಸಿ, ಓಲಾ, ಆಟೋ ಸಂಚಾರಕ್ಕೆ ಅವಕಾಶ ನೀಡುವ ಸಾದ್ಯತೆ ಇದೆ, ಏ.50ರಷ್ಟು ಪ್ರಯಾಣಿಕರು ಮಾತ್ರ ಸಂಚಾರ ಮಾಡಲು ಅವಕಾಶ ನೀಡುವ ಸಾಧ್ಯತೆ ಇದೆ. ಮದುವೆಯಲ್ಲಿ 40 ಮಂದಿ, ಅಂತ್ಯ ಸಂಸ್ಕಾರದಲ್ಲಿ 10 ಮಂದಿಗೆ ಅವಕಾಶ ನೀಡುವ ಚಿಂತನೆಯೂ ಸರ್ಕಾರದಲ್ಲಿದೆ ಎಂದು ಹೇಳಲಾಗುತ್ತಿದೆ.

ಹೋಂ ಐಸೊಲೇಷನ್ ರದ್ದು ಮಾಡಲು ಚಿಂತನೆ:
ಹೋಂ ಐಸೊಲೇಷನ್ನಲ್ಲಿದ್ದರೆ ಮನೆಯವರೆಲ್ಲರಿಗೂ ಕೊರೊನಾ ಸೋಂಕು ಹರಡುವ ಸಾಧ್ಯತೆ ಇದೆ, ಮತ್ತೊಂದು ವಿಷಯವೇನೆಂದರೆ ಯಾವ ಪ್ರಮಾಣದಲ್ಲಿ ಸೋಂಕು ತಗುಲಿದೆ ಎನ್ನುವ ಕುರಿತು ವೈದ್ಯರಿಗೂ ತಿಳಿಯುವುದಿಲ್ಲ, ರೋಗಿಗಳು ಕಣ್ಮುಂದೆ ಇದ್ದಾಗ ಮಾತ್ರ ಚಿಕಿತ್ಸೆ ನೀಡಲು ಸಹಾಯವಾಗುತ್ತದೆ, ಒಂದೊಮ್ಮೆ ಅನ್ಲಾಕ್ ಮಾಡಿದರೂ ಕೂಡ ವಾಣಿಜ್ಯ ಚಟುವಟಿಕೆಗಳಿಗೆ ಅನುಮತಿ ನೀಡಬಾರದು ಎನ್ನುವ ಒತ್ತಾಯವೂ ಕೇಳಿಬಂದಿದೆ.
If the number of coronavirus cases continues to drop further, the BS Yediyurappa-led Karnataka government may allow some relaxations in the statewide lockdown after June 7. If reports are to be believed, CM Yediyurappad has asked government officials and experts to prepare a plan for the lifting restrictions in a phased manner. The state is expected to witness unlocking in more than 3 phases.
01-03-26 09:20 pm
HK News Staffer
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
ಖಮೇನಿ ಹತ್ಯೆ ಖಂಡನೀಯ, ಇರಾನ್ ಮೇಲಿನ ಅಮೆರಿಕ ಯುದ್ಧ...
01-03-26 04:51 pm
02-03-26 01:34 pm
HK News Staffer
ಖಮೇನಿ ಯುಗಾಂತ್ಯ; ಹಂಗಾಮಿ ಸುಪ್ರೀಂ ಲೀಡರ್ ಸ್ಥಾನಕ್ಕ...
02-03-26 01:30 pm
Ayatollah Khamenei Killed: ಇರಾನ್ ಪರಮೋಚ್ಚ ನಾಯಕ...
01-03-26 09:52 am
ದುಬೈ, ಅಬುಧಾಬಿ ಮೇಲೆ ಇರಾನ್ ಮಿಸೈಲ್ ದಾಳಿ ; ಜಗತ್ತಿ...
28-02-26 10:54 pm
ಗಲ್ಫ್ ರಾಷ್ಟ್ರಗಳಿಗೆ ವಿಮಾನ ಸಂಚಾರ ವ್ಯತ್ಯಯ ; ಏರ್...
28-02-26 07:17 pm
01-03-26 08:37 pm
HK News Staffer
PSI Nasir Hussain: ಉಡುಪಿ ; ಮ್ಯಾರಥಾನಲ್ಲಿ ಪಾಲ್ಗ...
01-03-26 04:07 pm
ಹುಲಿಕಲ್ ಘಾಟಿಯಲ್ಲಿ ದುರ್ಗಾಂಬಾ ಬಸ್ ಗೆ ಬೆಂಕಿ ; ಕು...
28-02-26 08:53 pm
Mangaluru Muscat Flight: ಮಂಗಳೂರು- ಮಸ್ಕತ್ ನಡುವ...
27-02-26 08:59 pm
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm