ಬ್ರೇಕಿಂಗ್ ನ್ಯೂಸ್
26-05-21 12:28 pm Headline Karnataka News Network ಕರ್ನಾಟಕ
ಬೆಂಗಳೂರು, ಮೇ 26: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಕಡಿಮೆಯಾಗುತ್ತಿದ್ದರೂ ಕೂಡ ಸಾವಿನ ಸಂಖ್ಯೆಯಲ್ಲಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಜೂನ್ 7ರ ಬಳಿಕವೂ ಕೂಡ ಲಾಕ್ಡೌನ್ ಮುಂದುವರೆಸಲು ಸರ್ಕಾರ ಚಿಂತನೆ ನಡೆಸಿದೆ ಎನ್ನಲಾಗಿದೆ.
ಈಗಾಗಲೇ ಮೇ 10ರಿಂದ 24ರವರೆಗಿದ್ದ ಲಾಕ್ಡೌನ್ ಅನ್ನು ಮತ್ತೆ 14 ದಿನಗಳ ಕಾಲ ಅಂದರೆ ಜೂನ್ 7ರವರೆಗೆ ವಿಸ್ತರಿಸಲಾಗಿತ್ತು, ಬೆಳಗ್ಗೆ 6 ರಿಂದ 10ರವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ಮಾಡಿಕೊಡಲಾಗಿದೆ.
ರಾಜ್ಯದಲ್ಲಿ ಕೊರೊನಾ ನಿಯಂತ್ರಣಕ್ಕೆ ನಿಧಾನಗತಿಯಲ್ಲಿ ಬರುತ್ತಿದ್ದರೂ ಕೂಡ ಸಾವಿನ ಪ್ರಮಾಣ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಲಾಕ್ಡೌನ್ ವಿಸ್ತರಿಸುವುದು ಬಹುತೇಕ ಖಚಿತ ಎಂದೇ ಹೇಳಬಹುದು.
ಜೂನ್ 5ರಂದು ಸಭೆ:
ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಜೂನ್ 5 ರಂದು ಅಧಿಕಾರಿಗಳ ಜತೆ ಸಭೆ ನಡೆಸಲಿದ್ದಾರೆ. ಲಾಕ್ಡೌನ್ ಮುಂದುವರೆಸಲೇಬೇಕು ಇಲ್ಲವಾದರೆ ಕೊರೊನಾ ಕೊಂಡಿಯನ್ನು ತಪ್ಪಿಸಲು ಸಾಧ್ಯವಿಲ್ಲ ಎಂದು ಹಲವು ತಜ್ಞರು ತಮ್ಮ ಅಭಿಪ್ರಾಯವನ್ನು ಸರ್ಕಾರದ ಮುಂದಿರಿಸಿದ್ದಾರೆ. ಜೂನ್ 5ರಂದು ಅಂತಿಮ ನಿರ್ಧಾರ ಹೊರಬೀಳಲಿದೆ.
ಸಾರಿಗೆ ಸಂಚಾರಕ್ಕೆ ಅನುಮತಿ:
ಬಿಎಂಟಿಸಿ, ಕೆಎಸ್ಆರ್ಟಿಸಿ, ಓಲಾ, ಆಟೋ ಸಂಚಾರಕ್ಕೆ ಅವಕಾಶ ನೀಡುವ ಸಾದ್ಯತೆ ಇದೆ, ಏ.50ರಷ್ಟು ಪ್ರಯಾಣಿಕರು ಮಾತ್ರ ಸಂಚಾರ ಮಾಡಲು ಅವಕಾಶ ನೀಡುವ ಸಾಧ್ಯತೆ ಇದೆ. ಮದುವೆಯಲ್ಲಿ 40 ಮಂದಿ, ಅಂತ್ಯ ಸಂಸ್ಕಾರದಲ್ಲಿ 10 ಮಂದಿಗೆ ಅವಕಾಶ ನೀಡುವ ಚಿಂತನೆಯೂ ಸರ್ಕಾರದಲ್ಲಿದೆ ಎಂದು ಹೇಳಲಾಗುತ್ತಿದೆ.
ಹೋಂ ಐಸೊಲೇಷನ್ ರದ್ದು ಮಾಡಲು ಚಿಂತನೆ:
ಹೋಂ ಐಸೊಲೇಷನ್ನಲ್ಲಿದ್ದರೆ ಮನೆಯವರೆಲ್ಲರಿಗೂ ಕೊರೊನಾ ಸೋಂಕು ಹರಡುವ ಸಾಧ್ಯತೆ ಇದೆ, ಮತ್ತೊಂದು ವಿಷಯವೇನೆಂದರೆ ಯಾವ ಪ್ರಮಾಣದಲ್ಲಿ ಸೋಂಕು ತಗುಲಿದೆ ಎನ್ನುವ ಕುರಿತು ವೈದ್ಯರಿಗೂ ತಿಳಿಯುವುದಿಲ್ಲ, ರೋಗಿಗಳು ಕಣ್ಮುಂದೆ ಇದ್ದಾಗ ಮಾತ್ರ ಚಿಕಿತ್ಸೆ ನೀಡಲು ಸಹಾಯವಾಗುತ್ತದೆ, ಒಂದೊಮ್ಮೆ ಅನ್ಲಾಕ್ ಮಾಡಿದರೂ ಕೂಡ ವಾಣಿಜ್ಯ ಚಟುವಟಿಕೆಗಳಿಗೆ ಅನುಮತಿ ನೀಡಬಾರದು ಎನ್ನುವ ಒತ್ತಾಯವೂ ಕೇಳಿಬಂದಿದೆ.
If the number of coronavirus cases continues to drop further, the BS Yediyurappa-led Karnataka government may allow some relaxations in the statewide lockdown after June 7. If reports are to be believed, CM Yediyurappad has asked government officials and experts to prepare a plan for the lifting restrictions in a phased manner. The state is expected to witness unlocking in more than 3 phases.
25-06-25 02:56 pm
Bangalore Correspondent
Assault Case, Anant Kumar Hegde, Accident: ಹಲ...
25-06-25 01:09 pm
Bangalore, Reels, Death: 12 ವರ್ಷದ ಪ್ರೀತಿ ಜಗಳದ...
24-06-25 10:42 pm
Chikkamagaluru Student Suicide, Uniform: ಚಿಕ್...
24-06-25 10:15 pm
Tumakuru Suicide, Instagram Reels: ರೀಲ್ಸ್ ವಿಚ...
24-06-25 08:16 pm
25-06-25 11:10 am
HK News Desk
ಇರಾನ್ –ಇಸ್ರೇಲ್ ಕದನ ವಿರಾಮ ಘೋಷಿಸಿದ ಡೊನಾಲ್ಡ್ ಟ್ರ...
24-06-25 12:03 pm
ಅಮೆರಿಕದ ಮೇಲೆ ತಿರುಗಿಬಿದ್ದ ಇರಾನ್ ! ಕತಾರ್ನಲ್ಲಿರ...
24-06-25 01:02 am
NEET ಪರೀಕ್ಷೆಯಲ್ಲಿ ಮಗಳಿಗೆ ಕಡಿಮೆ ಅಂಕ ; ಕೂಲಿನಿಂದ...
23-06-25 08:54 pm
Rapper Tommy Genesis, Controversy: ಹಿಂದು ದೇವತ...
23-06-25 04:37 pm
24-06-25 09:49 pm
Mangalore Correspondent
Mangalore, College Student Suicide: ಕಲಿಕೆಯಲ್ಲ...
24-06-25 01:36 pm
Iran Qatar, War, Mangalore Flight: ಗಲ್ಫ್ ರಾಷ್...
24-06-25 11:19 am
Zakariya Jokatte, Mangalore: ಮಂಗಳೂರಿನಲ್ಲಿ ಸ್ಕ...
23-06-25 11:01 pm
Udupi BJP, Kishore Kumar: ಉಡುಪಿ ಬಿಜೆಪಿಯಲ್ಲಿ ಬ...
23-06-25 10:28 pm
25-06-25 04:06 pm
HK News Desk
ಸ್ನೇಹಿತನಿಂದ 8 ಲಕ್ಷ ರೂ. ಸಾಲ ; ಕೊಟ್ಟ ಸಾಲ ತೀರಿಸಲ...
24-06-25 09:51 pm
Bangalore Chit Fund Scam, 10 Crore: ಚೀಟಿ ಹೆಸ್...
24-06-25 07:39 pm
Davanagere Rape: ಮನೆಯ ಮುಂದೆ ಆಟವಾಡುತ್ತಿದ್ದ 7 ವ...
23-06-25 08:51 pm
Manipal, Udupi Murder: ಮಣಿಪಾಲ ; ಹೆತ್ತ ತಾಯಿಯನ್...
23-06-25 11:47 am