ಬ್ರೇಕಿಂಗ್ ನ್ಯೂಸ್
26-05-21 01:30 pm Headline Karnataka News Network ಕರ್ನಾಟಕ
ಚಿತ್ರದುರ್ಗ, ಮೇ 26 : ಇತ್ತೀಚೆಗೆ ಕಾಡು ಪ್ರಾಣಿಗಳು ನಾಡಿನತ್ತ ಧಾವಿಸುತ್ತಿದ್ದು, ಅವುಗಳು ಪ್ರಾಣಾಪಾಯಕ್ಕೆ ಸಿಲುಕಿದ ಅದಷ್ಟೋ ಸನ್ನಿವೇಶವನ್ನು ನಾವು ಓದಿದ್ದೇವೆ. ಆದರೆ ಸಾಮಾನ್ಯವಾಗಿ ಹಾವುಗಳು ನಾಡಿನಲ್ಲಿಯೂ ಆಗಾಗ ಕಾಣಸಿಗುತ್ತಿರುತ್ತದೆ. ಇದೇ ರೀತಿ ಸನ್ನಿವೇಶ ಇಂದು ಕೂಡ ನಡೆದಿದ್ದು, ಜಮೀನು ಸ್ವಚ್ಛಗೊಳಿಸುವ ವೇಳೆ ನಾಗರಹಾವಿನ ಮರಿಗಳು ಮತ್ತು ಮೊಟ್ಟೆಗಳು ಪತ್ತೆಯಾದ ಘಟನೆ ಚಿತ್ರದುರ್ಗ ಜಿಲ್ಲೆಯ ಓಬಳಾಪುರದಲ್ಲಿ ನಡೆದಿದೆ.
ಆರ್.ಕೆ.ಸ್ವಾಮಿ ಎಂಬುವರು ಜೆಸಿಬಿಯಿಂದ ಜಮೀನು ಸ್ವಚ್ಛಗೊಳಿಸುತ್ತಿದ್ದು, ಭೂಮಿಯನ್ನು ಸಮತಟ್ಟು ಮಾಡುವ ಸಂದರ್ಭದಲ್ಲಿ ಮಣ್ಣಿನಡಿ ಹಾವಿನ ಮರಿ ಮತ್ತು ಮೊಟ್ಟೆಗಳು ಕಂಡು ಬಂದಿವೆ.
ಕೂಡಲೇ ಈ ವಿಷಯದ ಬಗ್ಗೆ ಸ್ಥಳೀಯರು ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಉರಗ ತಜ್ಞರಿಗೆ ಮಾಹಿತಿ ನೀಡಿದ್ದಾರೆ. ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಇನ್ನು ಉರಗ ತಜ್ಞ ಶಿವು ಸ್ಥಳಕ್ಕೆ ಆಗಮಿಸಿದ್ದು, ನಾಗರಹಾವಿನ 21ಮರಿಗಳು ಮತ್ತು 25ಕ್ಕೂ ಹೆಚ್ಚು ಮೊಟ್ಟೆಗಳನ್ನು ಸಂರಕ್ಷಿಸಿದ್ದಾರೆ. ಬಳಿಕ ಅದೇ ಜಮೀನಿನಲ್ಲಿದ್ದ ಎರಡು ನಾಗರಹಾವುಗಳನ್ನು ಸಹ ಸೆರೆ ಹಿಡಿದಿದ್ದಾರೆ.
ಸದ್ಯ ಹಾವುಗಳು ಮತ್ತು ಮೊಟ್ಟೆಗಳನ್ನು ಸಂರಕ್ಷಿಸಿಡಲಾಗಿದೆ. ಅರಣ್ಯ ಇಲಾಖೆ ಅಧಿಕಾರಿಗಳು ಈ ಬಗ್ಗೆ ಪರಿಶೀಲನೆ ನಡೆಸಿ ನಾಗರಹಾವು, ಮರಿ ಮತ್ತು ಮೊಟ್ಟೆ ಕಾಡಿಗೆ ಸ್ಥಳಾಂತರಿಸುವ ಬಗ್ಗೆ ನಿರ್ಧರಿಸಿದ್ದಾರೆ. ಚಿತ್ರದುರ್ಗ ಬಳಿಯ ಜೋಗಿಮಟ್ಟಿ ಅರಣ್ಯದ ಒಂದು ಭಾಗದಲ್ಲಿ ಹಾವುಗಳು ಮತ್ತು ಮೊಟ್ಟೆಗಳನ್ನು ಒಟ್ಟಿಗೆ ಬಿಡುವ ಬಗ್ಗೆ ಚಿಂತನೆ ನಡೆದಿದ್ದು, ಈ ಬಗ್ಗೆ ಅಧಿಕಾರಿಗಳು ಖಚಿತ ತೀರ್ಮಾನ ಕೈಗೊಳ್ಳಲಿದ್ದಾರೆ.
Chitradurga 25 Snake Cobra eggs and 21 little snakes rescued. The forest officials are now planning to place them back to forest.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 10:24 pm
Mangalore Correspondent
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
ಜ.18ರಂದು ಮಂಗಳೂರಿನಲ್ಲಿ ಪ್ರಪ್ರಥಮ ಜಾಗತಿಕ ಬಿಲ್ಲವರ...
15-01-26 04:01 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm