ಬ್ರೇಕಿಂಗ್ ನ್ಯೂಸ್
26-05-21 03:29 pm Headline Karnataka News Network ಕರ್ನಾಟಕ
ಬೆಂಗಳೂರು, ಮೇ 26: ಶತಾಯುಷಿ, ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್. ದೊರೆಸ್ವಾಮಿ (104) ಹೃದಯಾಘಾತಕ್ಕೊಳಗಾಗಿ ಜಯದೇವ ಹೃದ್ರೋಗ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಇತ್ತೀಚೆಗೆ ಕೊರೊನಾ ಸೋಂಕಿತರಾಗಿ ಗುಣಮುಖರಾಗಿದ್ದ ಅವರನ್ನು ಹೃದಯ ಸಮಸ್ಯೆ ಹಿನ್ನೆಲೆಯಲ್ಲಿ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಅಧಿಕ ರಕ್ತದೊತ್ತಡ, ಬ್ರಾಂಕೈಟಿಸ್ ಸೇರಿದಂತೆ ಹೃದಯ ಕಾಯಿಲೆಗಳಿದ್ದವು. ವಯೋಸಹಜ ಕಾಯಿಲೆಗಳಿದ್ದರೂ, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು. ಇಂದು ಮಧ್ನಾಹ್ನ ಅವರು ಹೃದಯಾಘಾತದಿಂದ ನಿಧನರಾದರು ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
ಹದಿನೈದು ದಿನಗಳ ಹಿಂದೆ ಆಸ್ಪತ್ರೆಗೆ ದಾಖಲಾಗಿದ್ದ ಅವರಿಗೆ ಕೊರೊನಾ ಸೋಂಕು ಇರುವುದು ಕಂಡುಬಂದಿತ್ತು. ಬಳಿಕ ಚೇತರಿಕೆ ಕಂಡಿದ್ದ ಅವರನ್ನು ಜಯನಗರದದಲ್ಲಿರುವ ನಿವಾಸಕ್ಕೆ ಸ್ಥಳಾಂತರ ಮಾಡಲಾಗಿತ್ತು. ಆದರೆ, ಮನೆಗೆ ತೆರಳಿದ ಒಂದು ದಿವಸದಲ್ಲಿ ಮತ್ತೆ ದೇಹಸ್ಥಿತಿ ದುರ್ಬಲಗೊಂಡಿದ್ದರಿಂದ ಮರಳಿ ಮೇ 14ರಂದು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.
ಹಾರೋಹಳ್ಳಿ ಶ್ರೀನಿವಾಸಯ್ಯ ದೊರೆಸ್ವಾಮಿ ಎಂಬ ಪೂರ್ಣನಾಮ ಹೊಂದಿದ್ದ ಅವರು, ಆರಂಭದಲ್ಲಿ ಉಪನ್ಯಾಸಕರಾಗಿದ್ದು 1942ರ ಕ್ವಿಟ್ ಇಂಡಿಯಾ ಚಳವಳಿಯ ಸಂದರ್ಭ ಸ್ವಾತಂತ್ರ್ಯ ಹೋರಾಟಕ್ಕೆ ಧುಮುಕಿದ್ದಲ್ಲದೆ, 14 ತಿಂಗಳ ಕಾಲ ಸೆರೆವಾಸ ಅನುಭವಿಸಿದ್ದರು. ಆಬಳಿಕ ಗಾಂಧಿ ಮಾರ್ಗದಲ್ಲಿ ನಡೆಯುತ್ತಾ ಹಲವು ಜನಪರ ಚಳವಳಿಗಳಲ್ಲಿ ಭಾಗವಹಿಸಿ ಗಮನ ಸೆಳೆದಿದ್ದರು. ಈ ಮಧ್ಯೆ ಪತ್ರಕರ್ತರಾಗಿಯೂ ಕೆಲಸ ಮಾಡಿದ್ದ ಅವರು ಹಲವು ಪತ್ರಿಕೆಗಳಿಗೆ ಬರೆದಿದ್ದರು. ಇಳಿವಯಸ್ಸಿನಲ್ಲಿಯೂ ಜನಪರ ವಿಚಾರಗಳಲ್ಲಿ ಭಾಗವಹಿಸುತ್ತಿದ್ದುದು, ನಾಡಿನ ಜ್ವಲಂತ ಸಮಸ್ಯೆಗಳ ಬಗ್ಗೆ ಪ್ರತಿಕ್ರಿಯಿಸುತ್ತಿದ್ದುದು ಇಂದಿನ ಜನಾಂಗಕ್ಕೆ ಮಾದರಿ ಅನ್ನುವಂತಿದ್ದರು. ಬದುಕಿದ್ದ ಸ್ವಾತಂತ್ರ್ಯ ಹೋರಾಟಗಾರರಲ್ಲಿ ಅವರೊಬ್ಬರೇ ಸಮಾಜದಲ್ಲಿ ಧ್ವನಿಯಾಗಿದ್ದವರು.
ದೊರೆಸ್ವಾಮಿ ನಿಧನಕ್ಕೆ ಸಿಎಂ ಯಡಿಯೂರಪ್ಪ , ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಕಂಬನಿ ಮಿಡಿದಿದ್ದಾರೆ. ನಾಡಿನ ಸಾಕ್ಷಿಪ್ರಜ್ಞೆಯಂತಿದ್ದ , ಇಳಿವಯಸ್ಸಿನಲ್ಲೂ ದಣಿವರಿಯದೆ ಸಮಾಜದ ಪರ ಧ್ವನಿಯಾಗುತ್ತಿದ್ದ ದೊರೆಸ್ವಾಮಿ ಅವರ ನಿಧನ ನಾಡಿಗೆ ತುಂಬಲಾರದ ನಷ್ಟ ಎಂದು ಡಿಕೆಶಿ ಹೇಳಿದ್ದಾರೆ.
103-year-old HS Doreswamy had remained active, participating in various agitations over the years including the CAA protest in 2020. Over the decades, Doreswamy has been a constant figure at various civil rights struggles in Karnataka.
25-06-25 02:56 pm
Bangalore Correspondent
Assault Case, Anant Kumar Hegde, Accident: ಹಲ...
25-06-25 01:09 pm
Bangalore, Reels, Death: 12 ವರ್ಷದ ಪ್ರೀತಿ ಜಗಳದ...
24-06-25 10:42 pm
Chikkamagaluru Student Suicide, Uniform: ಚಿಕ್...
24-06-25 10:15 pm
Tumakuru Suicide, Instagram Reels: ರೀಲ್ಸ್ ವಿಚ...
24-06-25 08:16 pm
25-06-25 11:10 am
HK News Desk
ಇರಾನ್ –ಇಸ್ರೇಲ್ ಕದನ ವಿರಾಮ ಘೋಷಿಸಿದ ಡೊನಾಲ್ಡ್ ಟ್ರ...
24-06-25 12:03 pm
ಅಮೆರಿಕದ ಮೇಲೆ ತಿರುಗಿಬಿದ್ದ ಇರಾನ್ ! ಕತಾರ್ನಲ್ಲಿರ...
24-06-25 01:02 am
NEET ಪರೀಕ್ಷೆಯಲ್ಲಿ ಮಗಳಿಗೆ ಕಡಿಮೆ ಅಂಕ ; ಕೂಲಿನಿಂದ...
23-06-25 08:54 pm
Rapper Tommy Genesis, Controversy: ಹಿಂದು ದೇವತ...
23-06-25 04:37 pm
24-06-25 09:49 pm
Mangalore Correspondent
Mangalore, College Student Suicide: ಕಲಿಕೆಯಲ್ಲ...
24-06-25 01:36 pm
Iran Qatar, War, Mangalore Flight: ಗಲ್ಫ್ ರಾಷ್...
24-06-25 11:19 am
Zakariya Jokatte, Mangalore: ಮಂಗಳೂರಿನಲ್ಲಿ ಸ್ಕ...
23-06-25 11:01 pm
Udupi BJP, Kishore Kumar: ಉಡುಪಿ ಬಿಜೆಪಿಯಲ್ಲಿ ಬ...
23-06-25 10:28 pm
25-06-25 04:06 pm
HK News Desk
ಸ್ನೇಹಿತನಿಂದ 8 ಲಕ್ಷ ರೂ. ಸಾಲ ; ಕೊಟ್ಟ ಸಾಲ ತೀರಿಸಲ...
24-06-25 09:51 pm
Bangalore Chit Fund Scam, 10 Crore: ಚೀಟಿ ಹೆಸ್...
24-06-25 07:39 pm
Davanagere Rape: ಮನೆಯ ಮುಂದೆ ಆಟವಾಡುತ್ತಿದ್ದ 7 ವ...
23-06-25 08:51 pm
Manipal, Udupi Murder: ಮಣಿಪಾಲ ; ಹೆತ್ತ ತಾಯಿಯನ್...
23-06-25 11:47 am