ಬ್ರೇಕಿಂಗ್ ನ್ಯೂಸ್
27-05-21 04:21 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 27: ಬಿಜೆಪಿ ಶಾಸಕರಿಂದಲೇ ಭಾರೀ ವಿರೋಧಕ್ಕೆ ಕಾರಣವಾಗಿದ್ದ ಜಿಂದಾಲ್ ಸಂಸ್ಥೆಗೆ ಬಳ್ಳಾರಿಯಲ್ಲಿ 3667 ಎಕ್ರೆ ಭೂಮಿ ನೀಡುವ ನಿರ್ಧಾರಕ್ಕೆ ಸಂಪುಟ ಸಭೆಯಲ್ಲಿ ಬ್ರೇಕ್ ಹಾಕಲಾಗಿದೆ. ಈ ಹಿಂದಿನ ಸಂಪುಟ ಸಭೆಯಲ್ಲಿ ಸಿಎಂ ಯಡಿಯೂರಪ್ಪ ಜಿಂದಾಲ್ ಸಂಸ್ಥೆಗೆ ಭೂಮಿ ನೀಡಲು ಒಪ್ಪಿಗೆ ನೀಡಿದ್ದು ವಿರೋಧಕ್ಕೆ ಕಾರಣವಾಗಿತ್ತು.



ಬಿಜೆಪಿ ಶಾಸಕರೇ ಈ ಬಗ್ಗೆ ವಿರೋಧ ವ್ಯಕ್ತಪಡಿಸಿದ್ದರಿಂದ ಸಿಎಂ ನಿರ್ಧಾರದ ಬಗ್ಗೆ ಆಕ್ಷೇಪ ಕೇಳಿಬಂದಿತ್ತು. ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿಯಂತೂ, ಜಿಂದಾಲ್ ಸಂಸ್ಥೆಗೆ ಭೂಮಿ ನೀಡುವ ವಿಚಾರದಲ್ಲಿ ಬಿಜೆಪಿಯಿಂದ ಹೋರಾಟ ಹಮ್ಮಿಕೊಳ್ಳಲಾಗಿತ್ತು. ಇದೀಗ ನಾವೇ ಅಧಿಕಾರದಲ್ಲಿರುವಾಗ 3500 ಕೋಟಿ ಬೆಲೆಯ ಭೂಮಿಯನ್ನು ಚಿಲ್ಲರೆ ಹಣಕ್ಕೆ ನೀಡುವುದು ಎಷ್ಟು ಸರಿ. ಈ ಬಗ್ಗೆ ಸ್ವತಃ ಯಡಿಯೂರಪ್ಪ ಅವರೇ ಸ್ಪಷ್ಟನೆ ನೀಡಬೇಕು ಎಂದು ಹೇಳಿದ್ದರು. ಬಳ್ಳಾರಿ ಮೂಲದ ಬಿಜೆಪಿ ಶಾಸಕ ಆನಂದ್ ಸಿಂಗ್ ಕೂಡ ಇದೇ ಮಾತು ಹೇಳಿದ್ದರು. ಈ ಹಿನ್ನೆಲೆಯಲ್ಲಿ ಗುರುವಾರ (ಇಂದು) ನಡೆಯುವ ಸಂಪುಟ ಸಭೆಗೆ ಮಹತ್ವ ಲಭಿಸಿತ್ತು.

ಸಂಪುಟ ಸಭೆಯ ಬಳಿಕ ಸುದ್ದಿಗಾರರಿಗೆ ಮಾಹಿತಿ ನೀಡಿದ ಗೃಹ ಸಚಿವ ಬಸವರಾಜ್ ಬೊಮ್ಮಾಯಿ, ಜಿಂದಾಲ್ ಸಂಸ್ಥೆಗೆ ಭೂಮಿ ನೀಡುವ ವಿಚಾರಕ್ಕೆ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿಲ್ಲ. ಈ ವಿಚಾರದಲ್ಲಿ ಹೈಕೋರ್ಟಿಗೆ ಪಿಐಎಲ್ ಸಲ್ಲಿಕೆಯಾಗಿದ್ದರಿಂದ ಸದ್ಯಕ್ಕೆ ತಡೆಹಿಡಿಯಲಾಗಿದೆ. ಆದರೆ, ಭವಿಷ್ಯದಲ್ಲಿ ಈ ಬಗ್ಗೆ ಏನಾಗಲಿದೆ ಎಂಬುದನ್ನು ಹೇಳುವಂತಿಲ್ಲ ಎಂದು ಅಡ್ಡಗೋಡೆ ಮೇಲೆ ದೀಪವಿಟ್ಟ ರೀತಿ ಹೇಳಿಕೆ ನೀಡಿದ್ದಾರೆ.
ಮೇಕೆದಾಟು ಯೋಜನೆ ಸಂಬಂಧ ಎನ್ ಜಿಟಿ ನೀಡಿರುವ ಆದೇಶವನ್ನು ಪ್ರಶ್ನಿಸಿ ಅದೇ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಲು ನಿರ್ಧರಿಸಲಾಗಿದೆ. ಈ ಬಗ್ಗೆ ಜಲಸಂಪನ್ಮೂಲ ಖಾತೆಯ ಅಧಿಕಾರಿಗಳು ಮತ್ತು ಕಾನೂನು ತಜ್ಞರ ಜೊತೆ ಸಭೆ ನಡೆಸಲಾಗಿದೆ. ಮಾಧ್ಯಮಗಳ ವರದಿ ನೋಡಿ ಎನ್ ಜಿಟಿ ಈ ಆದೇಶ ನೀಡಿದ್ದು ಅದನ್ನು ವಾಪಸ್ ಪಡೆಯಲು ಕೋರಲಿದ್ದೇವೆ ಎಂದು ಬೊಮ್ಮಾಯಿ ತಿಳಿಸಿದ್ದಾರೆ.
BS Yediyurappa-led Karnataka Cabinet agreed to sell 3,667 acres of land to the Sajjan Jindal-led JSW Steel Ltd in Ballari has now come to hold after a cabinet meeting held today.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
15-07-26 07:40 pm
HK News Staffer
ಉಡುಪಿ ; ಹೆದ್ದಾರಿ ಮಧ್ಯದಲ್ಲೇ ಟೇಬಲ್ ಹಾಕಿ ಟಿವಿ, ಮ...
15-07-26 07:02 pm
ಮುಕ್ಕ ಶ್ರೀನಿವಾಸ್ ಕಾಲೇಜು ಎಂಬಿಬಿಎಸ್ ವಿದ್ಯಾರ್ಥಿನ...
15-07-26 01:17 pm
Kasaragod car Accident: ಕಾಸರಗೋಡಿನಲ್ಲಿ ಡೆಡ್ಲಿ...
15-07-26 12:40 pm
ಟ್ರಾಫಿಕ್ ದಂಡ ಕಟ್ಟಲು ಎಪಿಕೆ ಫೈಲ್ ಡೌನ್ಲೋಡ್ ಮಾಡಲು...
14-07-26 09:13 pm