ಬ್ರೇಕಿಂಗ್ ನ್ಯೂಸ್
28-05-21 01:23 pm Headline Karnataka News Network ಕರ್ನಾಟಕ
ಶಿವಮೊಗ್ಗ, ಮೇ 28: ಕೊರೊನಾ ಪರಿಸ್ಥಿತಿ ನಿರ್ವಹಣೆಗೆ ಕುವೈತ್ ದೇಶದಿಂದ ಶಿವಮೊಗ್ಗಕ್ಕೆ 20 ಟನ್ ಆಕ್ಸಿಜನ್ ಸರಬರಾಜಾಗಿದೆ. ಮಂಗಳೂರಿನಿಂದ ಬಂದಿದ್ದ ಆಕ್ಸಿಜನ್ ಟ್ಯಾಂಕರನ್ನು ಶಿವಮೊಗ್ಗದ ಖಾಸಗಿ ಸಂಸ್ಥೆಯಲ್ಲಿ ಸಂಗ್ರಹಿಸಿಡಲಾಗಿದೆ.
ಕುವೈತ್ ದೇಶದಿಂದ ಹಡಗು ಮೂಲಕ ಆಕ್ಸಿಜನ್ ಕಂಟೈನರ್ಗಳು ಮಂಗಳೂರು ಬಂದರಿಗೆ ತಲುಪಿದ್ದವು. ಈ ಪೈಕಿ 20 ಟನ್ ಕಂಟೈನರ್ ಒಂದು ಶಿವಮೊಗ್ಗಕ್ಕೆ ಬಂದಿದೆ. ಕೇಂದ್ರ ಸರ್ಕಾರದ ಹಂಚಿಕೆಯಂತೆ ಮೆಡಿಕಲ್ ಆಕ್ಸಿಜನ್ ಪೂರೈಕೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕುವೈತ್ ದೇಶದಿಂದ ಬಂದಿರುವ ಆಕ್ಸಿಜನ್ನ್ನು ಶಿವಮೊಗ್ಗದ ಮಾಚೇನಹಳ್ಳಿಯಲ್ಲಿ ಇರುವ ಖಾಸಗಿ ಸಂಸ್ಥೆಯಲ್ಲಿ ಸಂಗ್ರಹಿಸಿ ಇಡಲಾಗಿದೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಅಪರ ಜಿಲ್ಲಾಧಿಕಾರಿ ಹಾಗೂ ಆಕ್ಸಿಜನ್ ನಿರ್ವಹಣೆ ವ್ಯವಸ್ಥೆಯ ನೋಡಲ್ ಅಧಿಕಾರಿ ಜಿ.ಅನುರಾಧ, "ಸದ್ಯ ಜಿಲ್ಲೆಯಲ್ಲಿ ಆಕ್ಸಿಜನ್ ಕೊರತೆ ಇಲ್ಲ. ಸರ್ಕಾರಿ ವ್ಯವಸ್ಥೆಯಲ್ಲಿ ಆಕ್ಸಿಜನ್ ಸಂಗ್ರಹಕ್ಕೆ ವ್ಯವಸ್ಥೆ ಇರದ ಕಾರಣ, ಜಿಲ್ಲೆಯಲ್ಲಿ ಎರಡು ಖಾಸಗಿ ಸಂಸ್ಥೆಗಳಲ್ಲಿ ಆಕ್ಸಿಜನ್ ಸಂಗ್ರಹ ಮಾಡಲಾಗುತ್ತಿದೆ. ಕುವೈತ್ನಿಂದ ಬಂದ ಆಕ್ಸಿಜನ್ನ್ನು ಖಾಸಗಿ ಸಂಸ್ಥೆಯಲ್ಲಿ ಸದ್ಯಕ್ಕೆ ಸಂಗ್ರಹಿಸಲಾಗಿದೆ'' ಎಂದರು.

ಸರ್ಕಾರಿ ಆಸ್ಪತ್ರೆಗೆ ಉಚಿತ ಆಕ್ಸಿಜನ್;
ಮೆಗ್ಗಾನ್ ಆಸ್ಪತ್ರೆಯಲ್ಲಿ 19 ಕೆಎಲ್ ಆಕ್ಸಿಜನ್ ಉತ್ಪಾದನೆಯಾಗುತ್ತಿದ್ದು, ಇದನ್ನು ಮೆಗ್ಗಾನ್ ಆಸ್ಪತ್ರೆಗೆ ಬಳಕೆ ಮಾಡಲಾಗುತ್ತಿದೆ. ಇನ್ನು, ವಿಐಎಸ್ಎಲ್ನಲ್ಲಿ ಉತ್ಪಾದನೆ ಆಗುತ್ತಿರುವುದನ್ನು ಜಂಬೋ ಸಿಲಿಂಡರ್ಗಳಲ್ಲಿ ಫಿಲ್ಲಿಂಗ್ ಮಾಡಿ, ಜಿಲ್ಲೆಯ ವಿವಿಧ ಆಸ್ಪತ್ರೆಗೆ ರವಾನಿಸಲಾಗುತ್ತಿದೆ ಎಂದರು.
ಈಗ ಬಂದಿರುವ ಆಕ್ಸಿಜನ್ ಸರ್ಕಾರಿ ಆಸ್ಪತ್ರೆಗೆ ಉಚಿತವಾಗಿ ನೀಡಲಾಗುತ್ತದೆ. ಖಾಸಗಿ ಆಸ್ಪತ್ರೆಗಳು ಬೇಡಿಕೆ ಸಲ್ಲಿಸಿದರೆ ನಿಗದಿತ ಹಣ ಪಡೆದು ಅವುಗಳಿಗೆ ಆಕ್ಸಿಜನ್ ಪೂರೈಕೆ ಮಾಡಲಾಗುತ್ತದೆ.
ಕೊರೊನಾ ಸೋಂಕು ಪ್ರಕರಣಗಳು ತಗ್ಗುತ್ತಿವೆ;
ಸದ್ಯ ಶಿವಮೊಗ್ಗ ಜಿಲ್ಲೆಯಲ್ಲಿ ಕೊರೊನಾ ಸೋಂಕು ಪ್ರಕರಣಗಳು ತಗ್ಗುತ್ತಿವೆ. ಅಕ್ಸಿಜನ್ ಬಳಕೆ ಪ್ರಮಾಣವೂ ಇಳಿಕೆಯಾಗುತ್ತಿದೆ. ಆದರೆ ಮುನ್ನೆಚ್ಚರಿಕಾ ಕ್ರಮವಾಗಿ ಹೆಚ್ಚುವರಿ ಆಕ್ಸಿಜನ್ ಸಂಗ್ರಹ ಮಾಡಿಟ್ಟುಕೊಳ್ಳುವುದು ಆಡಳಿತಕ್ಕೆ ಅನಿವಾರ್ಯವಾಗಿದೆ ಎಂದು ಶಿವಮೊಗ್ಗ ಅಪರ ಜಿಲ್ಲಾಧಿಕಾರಿ ಜಿ.ಅನುರಾಧ ಹೇಳಿದ್ದಾರೆ.
Read: ಕುವೈಟ್ ಭಾರತೀಯ ನಿವಾಸಿಗಳಿಂದ ಭಾರೀ ಪ್ರಮಾಣದ ನೆರವು ; 252 ಮೆಟ್ರಿಕ್ ಟನ್ ಆಕ್ಸಿಜನ್ ಮಂಗಳೂರಿಗೆ
The truck carrying an oxygen cryogenic container from Mangaluru reaches Shivamogga. The medical oxygen was donated by the government of the Kingdom of Kuwait to India.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 06:36 pm
HK News Staffer
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am
ಬಾಂಬ್ ಮಾದರಿಯ ವಸ್ತು ಸ್ಫೋಟಿಸಿ ರೀಲ್ಸ್ ಶೂಟಿಂಗ್ ;...
01-05-26 10:30 am
ಗುದದ್ವಾರದಲ್ಲಿ ಮೊಬೈಲ್ ಬಚ್ಚಿಟ್ಟು ಜೈಲು ಎಂಟ್ರಿಯಾದ...
01-05-26 09:39 am