ಬ್ರೇಕಿಂಗ್ ನ್ಯೂಸ್
01-06-21 09:22 pm Satish, Bengaluru Correspondent ಕರ್ನಾಟಕ
ಬೆಂಗಳೂರು, ಜೂನ್ 01; ಸಿಬಿಎಸ್ಇ 12ನೇ ತರಗತಿ ಪರೀಕ್ಷೆಗಳನ್ನು ರದ್ದುಗೊಳಿಸಲಾಗಿದೆ. ಕರ್ನಾಟಕದಲ್ಲಿಯೂ ದ್ವಿತೀಯ ಪಿಯು ಪರೀಕ್ಷೆ ರದ್ದಾಗಲಿದೆಯೇ? ಎಂಬ ಪ್ರಶ್ನೆ ಎದ್ದಿದೆ.
ಮಂಗಳವಾರ ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಕೋವಿಡ್ ಸಂದರ್ಭದಲ್ಲಿ ವಿದ್ಯಾರ್ಥಿಗಳ ಸುರಕ್ಷತೆ ದೃಷ್ಟಿಯಿಂದ ಸಿಬಿಎಸ್ಇ 12ನೇ ತರಗತಿ ಪರೀಕ್ಷೆಗಳನ್ನು ರದ್ದುಗೊಳಿಸಲು ತೀರ್ಮಾನ ಕೈಗೊಳ್ಳಲಾಗಿದೆ.

ಕರ್ನಾಟಕದ ಶಿಕ್ಷಣ ಸಚಿವ ಸುರೇಶ್ ಕುಮಾರ್ ದ್ವಿತೀಯ ಪಿಯುಸಿ ಪರೀಕ್ಷೆಗಳ ಬಗ್ಗೆ ಮಾತನಾಡಿದ್ದು, "ಸಿಬಿಎಸ್ಇ 12ನೇ ತರಗತಿಯ ಪರೀಕ್ಷೆಗಳನ್ನು ರದ್ದು ಮಾಡಿರುವುದಾಗಿ ಮಾಧ್ಯಮಗಳಲ್ಲಿ ವರದಿಯಾಗಿದೆ. ಈ ಕುರಿತಂತೆ ರಾಜ್ಯದ ಪರಿಸ್ಥಿತಿಯನ್ನು ಅವಲೋಕಿಸಿ ಶೀಘ್ರ ತೀರ್ಮಾನ ಪ್ರಕಟಿಸಲಾಗುತ್ತದೆ" ಎಂದರು.
"ಕೇಂದ್ರೀಯ ಮಂಡಳಿಯು ಪರೀಕ್ಷೆ ರದ್ದು ಮಾಡಿದೆ. ರಾಜ್ಯ ಪಠ್ಯಕ್ರಮ ಅನುಸರಿಸಿ ಓದುತ್ತಿರುವ ವಿದ್ಯಾರ್ಥಿಗಳ ಶೈಕ್ಷಣಿಕ ಮೌಲ್ಯಮಾಪನದ ಕುರಿತು ತೀರ್ಮಾನ ಮಾಡಲಾಗುತ್ತದೆ" ಎಂದು ತಿಳಿಸಿದರು.
"ವಿದ್ಯಾರ್ಥಿಗಳ ಆರೋಗ್ಯ ಹಾಗೂ ಭವಿಷ್ಯದ ಹಿತದೃಷ್ಟಿಯಿಂದ ಶೀಘ್ರದಲ್ಲಿ ಸೂಕ್ತ ತೀರ್ಮಾನ ತೆಗೆದುಕೊಳ್ಳಲಾಗುತ್ತದೆ" ಎಂದು ಸಚಿವ ಸುರೇಶ್ ಕುಮಾರ್ ವಿದ್ಯಾರ್ಥಿಗಳಿಗೆ ಭರವಸೆ ನೀಡಿದರು. ಕರ್ನಾಟಕದಲ್ಲಿ ಮೇ 24ರಿಂದ ಜೂನ್ 10ರ ತನಕ ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ನಡೆಸಲು ದಿನಾಂಕ ಪ್ರಕಟಿಸಲಾಗಿತ್ತು. ಆದರೆ ಕೋವಿಡ್ ಪರಿಸ್ಥಿತಿ ಹಿನ್ನಲೆಯಲ್ಲಿ ಪರೀಕ್ಷೆಗಳನ್ನು ಮುಂದೂಡಲಾಗಿದೆ.
10ನೇ ತರಗತಿ ಪರೀಕ್ಷೆ?:
ದ್ವಿತೀಯ ಪಿಯುಸಿ ಪರೀಕ್ಷೆ ಮಾತ್ರವಲ್ಲ 10ನೇ ತರಗತಿ ಪರೀಕ್ಷೆ ಸಹ ಮುಂದೂಡಲಾಗಿದೆ. ಪರೀಕ್ಷೆ ನಡೆಸುವ ಕುರಿತು ಇನ್ನು ಶಿಕ್ಷಣ ಇಲಾಖೆ ಅಂತಿಮ ತೀರ್ಮಾನ ಕೈಗೊಂಡಿಲ್ಲ.
Karnataka Education Minister Suresh Kumar to Soon Determine if CBSE 2nd PUC Class 12 board exams in Karnataka will be cancelled or not. Class 12 board exams will not take place this year for CBSE and CISCE students, the decision came after a meeting between high-profile ministers of the Narendra Modi government. The meeting was chaired by PM and attended by the Union Minister of Information and Broadcasting Prakash Javadekar and Union Minister of Defence Rajnath Singh.
01-03-26 09:20 pm
HK News Staffer
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
ಖಮೇನಿ ಹತ್ಯೆ ಖಂಡನೀಯ, ಇರಾನ್ ಮೇಲಿನ ಅಮೆರಿಕ ಯುದ್ಧ...
01-03-26 04:51 pm
02-03-26 03:10 pm
HK News Staffer
ಇರಾನ್ ಸಂಘರ್ಷ; ಭಾರತದಲ್ಲಿ ಹಿಂಸಾಚಾರ ಸಾಧ್ಯತೆ, ತುರ...
02-03-26 02:26 pm
ಮಧ್ಯಪ್ರಾಚ್ಯ ಯುದ್ಧ ಎಫೆಕ್ಟ್ ; ಸೆನ್ಸೆಕ್ಸ್ 1,000...
02-03-26 01:34 pm
ಖಮೇನಿ ಯುಗಾಂತ್ಯ; ಹಂಗಾಮಿ ಸುಪ್ರೀಂ ಲೀಡರ್ ಸ್ಥಾನಕ್ಕ...
02-03-26 01:30 pm
Ayatollah Khamenei Killed: ಇರಾನ್ ಪರಮೋಚ್ಚ ನಾಯಕ...
01-03-26 09:52 am
01-03-26 08:37 pm
HK News Staffer
PSI Nasir Hussain: ಉಡುಪಿ ; ಮ್ಯಾರಥಾನಲ್ಲಿ ಪಾಲ್ಗ...
01-03-26 04:07 pm
ಹುಲಿಕಲ್ ಘಾಟಿಯಲ್ಲಿ ದುರ್ಗಾಂಬಾ ಬಸ್ ಗೆ ಬೆಂಕಿ ; ಕು...
28-02-26 08:53 pm
Mangaluru Muscat Flight: ಮಂಗಳೂರು- ಮಸ್ಕತ್ ನಡುವ...
27-02-26 08:59 pm
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm