ಬ್ರೇಕಿಂಗ್ ನ್ಯೂಸ್
03-06-21 10:28 pm Satish, Bengaluru ಕರ್ನಾಟಕ
ಬೆಂಗಳೂರು, ಜೂನ್ 3: ಏಳು ವರ್ಷಗಳ ಸುದೀರ್ಘ ಕಾನೂನು ಹೋರಾಟದ ಬಳಿಕ ಕೆಎಸ್ಆರ್ಟಿಸಿ ಬ್ರ್ಯಾಂಡ್ ಹೆಸರು ಕೇರಳದ ಪಾಲಾಗಿದೆ. ಕೆಎಸ್ಆರ್ಟಿಸಿ ಹೆಸರನ್ನು ಕರ್ನಾಟಕ ಸರಕಾರ ತನ್ನ ಸಾರಿಗೆ ಪ್ರಾಧಿಕಾರಕ್ಕೆ ಬಳಕೆ ಮಾಡುವಂತಿಲ್ಲ ಎಂದು ಟ್ರೇಡ್ ಮಾರ್ಕ್ ಪ್ರಾಧಿಕಾರ ಆದೇಶ ಮಾಡಿದೆ.
ಟ್ರೇಡ್ ಮಾರ್ಕ್ ರಿಜಿಸ್ಟರಿ ಬೌದ್ಧಿಕ ಆಸ್ತಿ ಹಕ್ಕುಗಳ (ಐಪಿಆರ್) ಆಧಾರದ ಮೇಲೆ ತೀರ್ಪು ನೀಡಿದ್ದು, Karnataka State Road Transport Corporation (KSRTC) ಎನ್ನುವ ವಿಸ್ತೃತ ರೂಪವನ್ನು ಕರ್ನಾಟಕ ಸರಕಾರ ಬಳಕೆ ಮಾಡುವಂತಿಲ್ಲ ಎಂದು ಆದೇಶಿಸಿದೆ. ಈ ಬೆಳವಣಿಗೆ ಕುರಿತು ಸಾಮಾಜಿಕ ಜಾಲತಾಣದಲ್ಲಿ ಭಾರೀ ವಿರೋಧ ವ್ಯಕ್ತವಾಗಿದೆ. ಟ್ವಿಟ್ಟರ್ನಲ್ಲಿ ಕರ್ನಾಟಕ ಸಾರಿಗೆ ಸಮರ್ಥಿಸಿಕೊಂಡು ನೆಟ್ಟಿಗರು ಸರಣಿ ಟ್ವೀಟ್ಗಳನ್ನು ಮಾಡುತ್ತಿದ್ದಾರೆ.
KSRTC ಎನ್ನುವ ಹೆಸರನ್ನು ಕೇರಳದವರು ಗೆದ್ದುಕೊಳ್ಳಬಹುದು. ಆದರೆ ಕ.ರಾ.ರ.ಸಾ.ನಿ ಸೇವೆ ಮತ್ತು ಗುಣಮಟ್ಟವನ್ನು ಹಿಂದಿಕ್ಕುವುದು ದಕ್ಷಿಣ ಭಾರತದ ಯಾವ ರಾಜ್ಯದ ಸಾರಿಗೆ ನಿಗಮಕ್ಕೂ ಆಗಲಿಕ್ಕಿಲ್ಲ. ದಕ್ಷಿಣದ ನಾಲ್ಕು ರಾಜ್ಯಗಳ ಸಾರಿಗೆ ಬಳಸಿದ ಅನುಭವದ ಮೇಲೆ ಇದು ನನ್ನ ಅನಿಸಿಕೆ ಎಂದು ವಸಂತ್ ಶೆಟ್ಟಿ ಎಂಬವರು ಟ್ವೀಟ್ ಮಾಡಿದ್ದಾರೆ.
ಗಂಡಭೇರುಂಡ ಲೋಗೊ ಜೊತೆಗೆ ಕೇರಳ ಸರಕಾರ ಕೆಎಸ್ಸಾರ್ಟಿಸಿ ಹೆಸರನ್ನು ತನ್ನ ಸಾರಿಗೆ ಬಸ್ ಗಳಲ್ಲಿ ನಮೂದಿಸಿತ್ತು. ಆದರೆ, ಕರ್ನಾಟಕ ಸರಕಾರವೂ ಸಾರಿಗೆ ಪ್ರಾಧಿಕಾರಕ್ಕೆ ಅದೇ ಹೆಸರಿಟ್ಟು ಲೋಗೊ ಬದಲು ಮಾಡಿತ್ತು. ಈ ವಿಚಾರ ಜಟಾಪಟಿಗೆ ಕಾರಣವಾಗಿತ್ತಲ್ಲದೆ, ಕೇರಳ ಸರಕಾರ ಹೆಸರನ್ನು ತನ್ನದಾಗಿಸಿಕೊಳ್ಳಲು ಟ್ರೇಡ್ ಮಾರ್ಕ್ ಪ್ರಾಧಿಕಾರಕ್ಕೆ ದೂರು ನೀಡಿತ್ತು. ಕೆಎಸ್ಆರ್ಟಿಸಿ ಎಂಬ ಹೆಸರನ್ನು ಕೇರಳ 1962ರಲ್ಲೇ ನೋಂದಣಿ ಮಾಡಿಸಿದೆ. ಕರ್ನಾಟಕ 1972ರಲ್ಲಿ ನೋಂದಣಿ ಮಾಡಿಸಿದ್ದು ಎಂಬ ಅಂಶವನ್ನು ತೀರ್ಪು ನೀಡುವಾಗ ಪರಿಗಣಿಸಿದೆ.
ಆದರೆ ಈ ಕುರಿತು ಪ್ರತಿಕ್ರಿಯೆ ನೀಡಿರುವ ಕರ್ನಾಟಕದ ಸಾರಿಗೆ ಸಚಿವ ಲಕ್ಷ್ಮಣ ಸವದಿ, ಈ ಬಗ್ಗೆ ಅಧಿಕೃತ ಘೋಷಣೆ ಬಂದಿಲ್ಲ. ಆದೇಶ ಬಂದ ಮೇಲೆ ಕಾನೂನು ಹೋರಾಟದ ಕುರಿತು ನಿರ್ಧಾರ ಕೈಗೊಳ್ಳುವುದಾಗಿ ಸಾರಿಗೆ ಸಚಿವ ಲಕ್ಷ್ಮಣ ಸವದಿ ತಿಳಿಸಿದ್ದಾರೆ.
After a seven-year-long dispute with neighboring state Karnataka, the Kerala State Road Transport Corporation says it has got the legal rights to the trademarked-acronym KSRTC- with the logo of two elephants and the name Ana Vandi- associated with the state-run transport corporation.
02-04-25 10:48 pm
HK News Desk
Accident in Chitradurga: ಚಿತ್ರದುರ್ಗ ; 15ಕ್ಕೂ...
02-04-25 09:54 pm
CM Siddaramaiah, Police Medal 2025: ರಾಜ್ಯದ ಅಭ...
02-04-25 07:14 pm
Lokayukta Raid, Police Inspector Kumar, Annap...
02-04-25 03:07 pm
Cobra Shocks, Chikkamagaluru: ಹೊಟೇಲ್ಗೆ ನುಗ್ಗ...
01-04-25 10:45 pm
02-04-25 07:35 pm
HK News Desk
ಇತಿಹಾಸವನ್ನು ಚರಿತ್ರೆ ಪುಸ್ತಕಗಳಿಂದ ತಿಳಿಯಬೇಕೇ ವಿನ...
31-03-25 09:34 pm
Munambam Waqf Row: ಮುನಾಂಬಮ್ ವಕ್ಫ್ ಆಸ್ತಿ ವಿವಾದ...
31-03-25 04:07 pm
BR Ambedkar birth anniversary, Holiday: ಏ.14ರ...
29-03-25 04:40 pm
ಥೈಲ್ಯಾಂಡ್ ಬೆನ್ನಲ್ಲೇ ಅಫ್ಘಾನಿಸ್ತಾನದಲ್ಲೂ ಭಾರೀ ಭ...
29-03-25 01:27 pm
02-04-25 11:02 pm
Mangalore Correspondent
Kora Kannada Movie, Release, P Murthy, Sunami...
02-04-25 04:11 pm
Nandi Rath Yatra, Mangalore: 95 ದಿನಗಳ ನಂದಿ ರಥ...
01-04-25 09:38 pm
Mangalore, MLA Vedavyas Kamath: ಜೈಲಿನ ಅಧಿಕಾರಿ...
01-04-25 09:12 pm
ರಾಜ್ಯದಲ್ಲಿ ಬೆಲೆ ಏರಿಕೆ ಗಗನಕ್ಕೆ ; ರೇಷನ್ ಅಂಗಡಿಗಳ...
01-04-25 07:12 pm
02-04-25 05:49 pm
Mangalore Correspondent
Chikkamagaluru murder, Three Killed: ಪತ್ನಿ ಬಿ...
02-04-25 01:11 pm
Bajpe Robbery, Mangalore crime, Mangalore: ಮನ...
01-04-25 11:07 pm
Bangalore Honeytrap, Businessman, Sridevi: ಒಂ...
01-04-25 10:42 pm
Davangere Bank Robbery, Police; ಉದ್ಯಮ ವಿಸ್ತರಣ...
01-04-25 05:32 pm