ಬ್ರೇಕಿಂಗ್ ನ್ಯೂಸ್
04-06-21 12:14 pm Headline Karnataka News Network ಕರ್ನಾಟಕ
ಬೆಂಗಳೂರು, ಜೂನ್ 4: ಉಡುಪಿ ಜಿಲ್ಲೆಯ ಮಣಿಪಾಲ ಮೂಲದ ಮಣಿಪಾಲ್ ಗ್ರೂಪ್ ಸಮೂಹ ತನ್ನ ಉದ್ಯಮ ಜಾಲವನ್ನು ವಿಸ್ತರಿಸುತ್ತಲೇ ಇದ್ದು ಕೊರೊನಾ ಬಿಕ್ಕಟ್ಟಿನ ನಡುವೆಯೇ ಬೆಂಗಳೂರು ಮೂಲದ ವಿಕ್ರಮ್ ಆಸ್ಪತ್ರೆಯನ್ನು ಬರೋಬ್ಬರಿ 350 ಕೋಟಿ ರೂಪಾಯಿಗೆ ಖರೀದಿಸಿದೆ.
ಉದ್ಯಮಿ ರಂಜನ್ ಪೈ ಮಾಲೀಕತ್ವದ ಮಣಿಪಾಲ್ ಗ್ರೂಪ್ ಕಳೆದ ಏಪ್ರಿಲ್ನಲ್ಲಿ ಕೊಲಂಬಿಯಾ ಏಷ್ಯಾದ ಭಾರತೀಯ ವಿಭಾಗವನ್ನು 2,100 ಕೋಟಿ ರೂ.ಗೆ ಖರೀದಿಸಿ ಹುಬ್ಬೇರಿಸಿತ್ತು. ಇದೀಗ ಬೆಂಗಳೂರಿನಲ್ಲಿ ಮತ್ತೊಂದು ಆಸ್ಪತ್ರೆಯನ್ನು ಖರೀದಿಸಿದ್ದು ಒಂದೇ ವರ್ಷದಲ್ಲಿ ಮಣಿಪಾಲ್ ಆಸ್ಪತ್ರೆಯಿಂದ ಎರಡನೇ ಡೀಲ್ ನಡೆದಿದೆ. ಇದರೊಂದಿಗೆ ಅಪೊಲೊ ನಂತರ ದೇಶದ ಎರಡನೇ ಅತಿ ದೊಡ್ಡ ಆಸ್ಪತ್ರೆ ಸಮೂಹವಾಗಿ ಮಣಿಪಾಲ್ ಗ್ರೂಪ್ ಸಮೂಹ ಹೊರಹೊಮ್ಮಿದೆ.
ಈ ಡೀಲ್ ಬಳಿಕ ವಿಕ್ರಮ್ ಆಸ್ಪತ್ರೆಯ ಹೆಸರು ಮಣಿಪಾಲ್ ಹಾಸ್ಪಿಟಲ್ ಎಂದು ಬದಲಾಗಲಿದೆ. ಇದರೊಂದಿಗೆ ರಾಜಧಾನಿ ಬೆಂಗಳೂರು ಒಂದರಲ್ಲೇ ಮಣಿಪಾಲ್ ಗ್ರೂಪ್ನ ಆಸ್ಪತ್ರೆಗಳ ಸಂಖ್ಯೆ 10ಕ್ಕೆ ಏರಿಕೆಯಾಗಲಿದೆ. (4 ಮಣಿಪಾಲ್ ಹಾಸ್ಪಿಟಲ್ಸ್, 5 ಕೊಲಂಬಿಯಾ ಏಷ್ಯಾ ಹಾಸ್ಪಿಟಲ್, ಒಂದು ವಿಕ್ರಮ್ ಆಸ್ಪತ್ರೆ).

ಇದೇ ವೇಳೆ, ಮಣಿಪಾಲ್ ಗ್ರೂಪ್ ಎರಡು ಕಡೆ ಗ್ರೀನ್ಫೀಲ್ಡ್ ಆಸ್ಪತ್ರೆಗಳನ್ನು ನಿರ್ಮಿಸುತ್ತಿದ್ದು, ಮುಂದಿನ 24 ತಿಂಗಳುಗಳಲ್ಲಿ ಮುಕ್ತಾಯವಾಗುವ ನಿರೀಕ್ಷೆಯಿದೆ. ಇದರಿಂದ ನಮ್ಮ ನೆಟ್ವರ್ಕ್ 12 ಆಸ್ಪತ್ರೆಗಳಿಗೆ ವಿಸ್ತರಣೆಯಾಗಲಿದ್ದು, 2,300 ಬೆಡ್ ಲಭ್ಯವಾಗಲಿದೆ ಎಂದು ಎಂದು ಮಣಿಪಾಲ್ ಎಜ್ಯುಕೇಶನ್ ಆ್ಯಂಡ್ ಮೆಡಿಕಲ್ ಗ್ರೂಪ್ನ ಅಧ್ಯಕ್ಷ ರಂಜನ್ ಪೈ ತಿಳಿಸಿದ್ದಾರೆ.
ವಿಕ್ರಮ್ ಮತ್ತು ಕೊಲಂಬಿಯಾ ಏಷ್ಯಾ ಹಾಸ್ಪಿಟಲ್ ಖರೀದಿಯ ನಂತರ ದೇಶದಲ್ಲಿ ಮಣಿಪಾಲ್ ಗ್ರೂಪ್ನ ಆಸ್ಪತ್ರೆಗಳ ಸಂಖ್ಯೆ 27ಕ್ಕೆ ಏರಿಕೆಯಾಗಲಿದೆ. 14 ನಗರಗಳಲ್ಲಿ ಮಣಿಪಾಲ್ ಆಸ್ಪತ್ರೆಗಳಿದ್ದು, 7,300 ಬೆಡ್ಗಳನ್ನು ಹೊಂದಿವೆ. 4,000 ವೈದ್ಯರು ಹಾಗೂ 11,000 ಸಿಬ್ಬಂದಿಗಳು ಆಸ್ಪತ್ರೆಗಳ ವಿಭಾಗದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ದೇಶದ ಅತೀ ದೊಡ್ಡ ಆಸ್ಪತ್ರೆ ಸಮೂಹ ಅಪೋಲೊ ಬಳಿಯಲ್ಲಿ 70 ಆಸ್ಪತ್ರೆಗಳಿವೆ.
Manipal Hospitals, the second-largest hospital chain in India, entered into a definitive agreement with private equity firm Multiples to acquire a 100% stake in Bengaluru-based multi-specialty hospital Vikram Hospital for consideration of ₹350 crores.
01-03-26 09:20 pm
HK News Staffer
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
ಖಮೇನಿ ಹತ್ಯೆ ಖಂಡನೀಯ, ಇರಾನ್ ಮೇಲಿನ ಅಮೆರಿಕ ಯುದ್ಧ...
01-03-26 04:51 pm
02-03-26 03:10 pm
HK News Staffer
ಇರಾನ್ ಸಂಘರ್ಷ; ಭಾರತದಲ್ಲಿ ಹಿಂಸಾಚಾರ ಸಾಧ್ಯತೆ, ತುರ...
02-03-26 02:26 pm
ಮಧ್ಯಪ್ರಾಚ್ಯ ಯುದ್ಧ ಎಫೆಕ್ಟ್ ; ಸೆನ್ಸೆಕ್ಸ್ 1,000...
02-03-26 01:34 pm
ಖಮೇನಿ ಯುಗಾಂತ್ಯ; ಹಂಗಾಮಿ ಸುಪ್ರೀಂ ಲೀಡರ್ ಸ್ಥಾನಕ್ಕ...
02-03-26 01:30 pm
Ayatollah Khamenei Killed: ಇರಾನ್ ಪರಮೋಚ್ಚ ನಾಯಕ...
01-03-26 09:52 am
01-03-26 08:37 pm
HK News Staffer
PSI Nasir Hussain: ಉಡುಪಿ ; ಮ್ಯಾರಥಾನಲ್ಲಿ ಪಾಲ್ಗ...
01-03-26 04:07 pm
ಹುಲಿಕಲ್ ಘಾಟಿಯಲ್ಲಿ ದುರ್ಗಾಂಬಾ ಬಸ್ ಗೆ ಬೆಂಕಿ ; ಕು...
28-02-26 08:53 pm
Mangaluru Muscat Flight: ಮಂಗಳೂರು- ಮಸ್ಕತ್ ನಡುವ...
27-02-26 08:59 pm
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm