ಬ್ರೇಕಿಂಗ್ ನ್ಯೂಸ್
29-08-20 05:31 pm Dhruthi Anchan - Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 29: ಚಂದನವನದ ಕೆಲವು ನಟ-ನಟಿಯರಿಗೆ ಡ್ರಗ್ಸ್ ನ ವ್ಯಸನ ಇದೆ ಎಂದು ಖ್ಯಾತ ನಿರ್ದೇಶಕ ಇಂದ್ರಜಿತ್ ಲಂಕೇಶ್ ಹೇಳಿದ್ದಾರೆ. ಮಾಧ್ಯಮವೊಂದರ ಜೊತೆ ಮಾತನಾಡಿರುವ ಇಂದ್ರಜಿತ್, ಚಂದನವನದಲ್ಲಿ ಡ್ರಗ್ ಮಾಫಿಯಾ ಇರುವುದು ನಿಜ ನಾನೇ ಕಣ್ಣಾರೆ ನೋಡಿದ್ದೇನೆ' ಎಂದಿದ್ದಾರೆ.
ಹಲವು ಯುವ ನಟ-ನಟಿಯರು ಡ್ರಗ್ಸ್ನ ಹಿಂದೆ ಬಿದ್ದಿದ್ದು, ಸ್ಯಾಂಡಲ್ವುಡ್ನಲ್ಲಿ ರೇವ್ ಪಾರ್ಟಿ, ನೈಟ್ ಪಾರ್ಟಿಗಳು ನಡೆಯುವ ಸಂದರ್ಭಗಳಲ್ಲಿ ಡ್ರಗ್ಸ್ ಹರಿದಾಡುತ್ತದೆ ಹಾಗೂ ಹಲವು ಯುವ ನಟರು ಈ ಡ್ರಗ್ಸ್ನ ಚಟಕ್ಕೆ ಬಿದ್ದಿದ್ದಾರೆ ಎಂದು ನೇರವಾಗಿ ಹೇಳಿದ್ದಾರೆ.
ದೊಡ್ಡ ಸ್ಟಾರ್ ನಟರುಗಳು ಇಂಥಹುದರಲ್ಲಿ ಇಲ್ಲ. ಆದರೆ ಒಂದೆರಡು ಸಿನಿಮಾ ಮಾಡಿದ ಯುವ ನಟರು ಕೆಲವರು ಡ್ರಗ್ಸ್ಗೆ ದಾಸರಾಗಿದ್ದಾರೆ. ದುಡ್ಡಿನ ವ್ಯಾಮೋಹ, ಹಣದ ಆಸೆಗೆ ಬಿದ್ದು ಕೆಲವರು ಮಾಫಿಯಾದ ಒಳಕ್ಕೆ ಸೇರಿದ್ದಾರೆ. ಕೊಕೇನ್ ರೀತಿಯ ಅಪಾಯಕಾರಿ ಮಾದಕ ವಸ್ತು ಸಹ ಚಂದನವನ ನಟ-ನಟಿಯರ ಕೈಗೆ ಎಟುಕುತ್ತಿದೆ ಎಂದು ಶಾಕಿಂಗ್ ಅಂಶ ಬಹಿರಂಗಪಡಿಸಿದ್ದಾರೆ ಇಂದ್ರಜಿತ್.

ಇಷ್ಟೇ ಅಲ್ಲದೆ ಯಾರೆಲ್ಲಾ ಈ ಮಾಫಿಯಾದಲ್ಲಿದ್ದಾರೆ, ಯಾರೆಲ್ಲಾ ದಾಸರಾಗಿದ್ದಾರೆ ಎಂಬುದನ್ನು ನಾನು ಬೇಕಾದರೆ ಬಹಿರಂಗಪಡಿಸುತ್ತೇನೆ. ಆದರೆ ಪೊಲೀಸರು ನನಗೆ ಸೂಕ್ತ ರಕ್ಷಣೆ ಕೊಡುಬೇಕು ಎಂದಿದ್ದಾರೆ ಇಂದ್ರಜಿತ್ ಲಂಕೇಶ್.
ಇತ್ತೀಚಿಗೆ ನಿಧನರಾದ 35 ವರ್ಷ ವಯಸ್ಸಿನ ನಟನ ಸಾವಿನ ಬಗ್ಗೆ ಕೂಡ ಅನುಮಾನ ವ್ಯಕ್ತಪಡಿಸಿದ ಇಂದ್ರಜಿತ್, ಚಿಕ್ಕ ವಯಸ್ಸಿನಲ್ಲಿಯೇ ಸಾವನ್ನಪ್ಪುತ್ತಾರೆ ಎಂದರೆ ಏನು ಕಾರಣ?, ಆ ನಟನ ಸಾವಿನ ಬಳಿಕ ಮರಣೋತ್ತರ ಪರೀಕ್ಷೆ ಯಾಕೆ ಮಾಡಿಸಿಲ್ಲ? ಪರೀಕ್ಷೆ ಮಾಡಿಸಿದ್ದರೆ ಎಲ್ಲಾ ಬಯಲಾಗುತ್ತಿತ್ತು. ಮರಣೋತ್ತರ ಪರೀಕ್ಷೆ ನಡೆಸದಂತೆ ಪೊಲೀಸರಿಗೆ ರಾಜಕೀಯ ಒತ್ತಡವಿತ್ತು. ಯಾವ ರಾಜಕೀಯ ವ್ಯಕ್ತಿ ಒತ್ತಡ ಹಾಕಿದ್ದಾರೆ ಎನ್ನುವುದು ಗೊತ್ತಿದೆ" ಎಂದು ಇಂದ್ರಜಿತ್ ಲಂಕೇಶ್ ಹೇಳಿದ್ದಾರೆ.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 02:31 pm
HK News Staffer
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm