ಬ್ರೇಕಿಂಗ್ ನ್ಯೂಸ್
05-06-21 11:14 am Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 05: ರಾಜ್ಯಕ್ಕೆ ಮುಂಗಾರು ಪ್ರವೇಶವಾವಾಗಿದ್ದು, ಮೂರು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.
ಶುಕ್ರವಾರ ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡನ್ನು ಪ್ರವೇಶಿಸಿರುವ ನೈಋತ್ಯ ಮುಂಗಾರು ಜೂನ್ 05ರಂದು ಉತ್ತರ ಒಳನಾಡಿನ ಪ್ರದೇಶ ತಲುಪಲಿದೆ.ಆ ಮೂಲಕ ರಾಜ್ಯದಲ್ಲಿ ಮುಂಗಾರು ಆರಂಭವಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾತ್ರಿ 10ಗಂಟೆಯವರೆಗೆ ನಗರದ ಮಾರಪ್ಪನಪಾಳ್ಯದಲ್ಲಿ ಅಧಿಕ ಮಳೆ ಸುರಿದಿದೆ, 72 ಮಿ.ಮೀನಷ್ಟು ಮಳೆಯಾಗಿದೆ. ಸಾರಕ್ಕಿಯಲ್ಲಿ 63, ಬಸವನಗುಡಿ, ಅಟ್ಟೂರಿನಲ್ಲಿ 49, ವಿದ್ಯಾರಣ್ಯಪುರದಲ್ಲಿ 41, ಎಚ್ಎಸ್ಆರ್ ಲೇಔಟ್ನಲ್ಲಿ 38.5 ಮಿ.ಮೀನಷ್ಟು ಮಳೆಯಾಗಿದೆ.
ನಾಲ್ಕು ದಿನ ತಡವಾಗಿ ಮುಂಗಾರು;
ವಾಡಿಕೆಯಂತೆ ಜೂನ್ 1ರಂದೇ ರಾಜ್ಯ ಪ್ರವೇಶಿಸಬೇಕಿದ್ದ, ಮುಂಗಾರು ಮಾರುತಗಳು ನಾಲ್ಕು ದಿನ ತಡವಾಗಿ ಕರಾವಳಿ ಮತ್ತು ದಕ್ಷಿಣ ಒಳನಾಡು ಭಾಗವನ್ನು ಪ್ರವೇಶಿಸಿದೆ. ಶನಿವಾರ ಉತ್ತರ ಒಳನಾಡನ್ನು ಹಾದು ಹೋಗುವ ಮೂಲಕ ಈ ಮಾರುಗಳು ಇಡೀ ರಾಜ್ಯವನ್ನು ಆವರಿಸಲಿವೆ.
ಮುಂಗಾರು ಅರಂಭವಾದ ಮೊದಲ ದಿನವೇ ಕರಾವಳಿ ಭಾಗದಲ್ಲಿ ವ್ಯಾಪಕ ಮಳೆ ದಾಖಲಾಗಿದೆ.ಇದೇ ರೀತಿ ಜೂನ್ 6ರವರೆಗೆ ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಎಲ್ಲಾ ಕಡೆಗಳಲ್ಲಿ ಗುಡುಗು ಮತ್ತು ಗಾಳಿ ಸಹಿತ ಮಳೆ ಮುಂದುವರೆಯಲಿದೆ.
ಯಾವ ಜಿಲ್ಲೆಗಳಿಗೆ ರೆಡ್ ಅಲರ್ಟ್
ಜೂನ್ 5ರಂದು ಅತ್ಯಧಿಕ ಮಳೆ ಬೀಳುವುದರಿಂದ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಮಲೆನಾಡಿನ ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಮತ್ತು ಹಾಸನ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್, ದಕ್ಷಿಣ ಒಳನಾಡಿನ ಬಹುತೇಕ ಎಲ್ಲಾ ಜಿಲ್ಲೆಗಳು, ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಹಾವೇರಿ, ಧಾರವಾಡ, ವಿಜಯಪುರ, ಕಲಬುರಗಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಬೆಂಗಳೂರಲ್ಲಿ ಅಧಿಕ ಮಳೆ
ನಗರದಲ್ಲಿ ಶುಕ್ರವಾರ ಗುಡುಗು ಸಹಿತ ಧಾರಾಕಾರ ಮಳೆ ಸುರಿದಿದೆ, ಬೆಳಗ್ಗೆಯಿಂದಲೇ ಮೋಡಕವಿದ ವಾತಾವರಣ ನಿರ್ಮಾಣವಾಗಿತ್ತು. ಮಧ್ಯಾಹ್ನದ ನಂತರ ಶುರುವಾದ ಮಳೆ ಕೆಲ ಕಾಲ ಜೋರಾಗಿ ಅಬ್ಬರಿಸಿತು. ಇದರಿಂದ ಜೆಪಿನಗರ 6ನೇ ಹಂತ, ಜಯನಗರ 5ನೇ ಬ್ಲಾಕ್ನ ರಸ್ತೆಗಳಲ್ಲಿ ನಾಲ್ಕು ಕಡೆ ರದ ರೆಂಬೆಗಳು ಮುರಿದು ಬಿದ್ದಿವೆ. ರಾಜ್ಯದಲ್ಲಿ ಮುಂಗಾರು ಪ್ರವೇಶವಾದ ಹಿನ್ನೆಲೆಯಲ್ಲಿ ಬೆಂಗಳೂರಲ್ಲಿ ಜೂನ್ 7ರವರೆಗೂ ಮಳೆ ಮುಂದುವರೆಯಲಿದೆ.
Monsoon has entered the state as per the usual time of June first week. The monsoon clouds that arrived in Kerala on Thursday have entered Karwar of Uttara Kannada district. Many districts including Bengaluru received copious amounts of rain on June 4.
02-04-25 10:48 pm
HK News Desk
Accident in Chitradurga: ಚಿತ್ರದುರ್ಗ ; 15ಕ್ಕೂ...
02-04-25 09:54 pm
CM Siddaramaiah, Police Medal 2025: ರಾಜ್ಯದ ಅಭ...
02-04-25 07:14 pm
Lokayukta Raid, Police Inspector Kumar, Annap...
02-04-25 03:07 pm
Cobra Shocks, Chikkamagaluru: ಹೊಟೇಲ್ಗೆ ನುಗ್ಗ...
01-04-25 10:45 pm
02-04-25 07:35 pm
HK News Desk
ಇತಿಹಾಸವನ್ನು ಚರಿತ್ರೆ ಪುಸ್ತಕಗಳಿಂದ ತಿಳಿಯಬೇಕೇ ವಿನ...
31-03-25 09:34 pm
Munambam Waqf Row: ಮುನಾಂಬಮ್ ವಕ್ಫ್ ಆಸ್ತಿ ವಿವಾದ...
31-03-25 04:07 pm
BR Ambedkar birth anniversary, Holiday: ಏ.14ರ...
29-03-25 04:40 pm
ಥೈಲ್ಯಾಂಡ್ ಬೆನ್ನಲ್ಲೇ ಅಫ್ಘಾನಿಸ್ತಾನದಲ್ಲೂ ಭಾರೀ ಭ...
29-03-25 01:27 pm
02-04-25 11:02 pm
Mangalore Correspondent
Kora Kannada Movie, Release, P Murthy, Sunami...
02-04-25 04:11 pm
Nandi Rath Yatra, Mangalore: 95 ದಿನಗಳ ನಂದಿ ರಥ...
01-04-25 09:38 pm
Mangalore, MLA Vedavyas Kamath: ಜೈಲಿನ ಅಧಿಕಾರಿ...
01-04-25 09:12 pm
ರಾಜ್ಯದಲ್ಲಿ ಬೆಲೆ ಏರಿಕೆ ಗಗನಕ್ಕೆ ; ರೇಷನ್ ಅಂಗಡಿಗಳ...
01-04-25 07:12 pm
02-04-25 05:49 pm
Mangalore Correspondent
Chikkamagaluru murder, Three Killed: ಪತ್ನಿ ಬಿ...
02-04-25 01:11 pm
Bajpe Robbery, Mangalore crime, Mangalore: ಮನ...
01-04-25 11:07 pm
Bangalore Honeytrap, Businessman, Sridevi: ಒಂ...
01-04-25 10:42 pm
Davangere Bank Robbery, Police; ಉದ್ಯಮ ವಿಸ್ತರಣ...
01-04-25 05:32 pm