ಬ್ರೇಕಿಂಗ್ ನ್ಯೂಸ್
05-06-21 11:14 am Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 05: ರಾಜ್ಯಕ್ಕೆ ಮುಂಗಾರು ಪ್ರವೇಶವಾವಾಗಿದ್ದು, ಮೂರು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.
ಶುಕ್ರವಾರ ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡನ್ನು ಪ್ರವೇಶಿಸಿರುವ ನೈಋತ್ಯ ಮುಂಗಾರು ಜೂನ್ 05ರಂದು ಉತ್ತರ ಒಳನಾಡಿನ ಪ್ರದೇಶ ತಲುಪಲಿದೆ.ಆ ಮೂಲಕ ರಾಜ್ಯದಲ್ಲಿ ಮುಂಗಾರು ಆರಂಭವಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾತ್ರಿ 10ಗಂಟೆಯವರೆಗೆ ನಗರದ ಮಾರಪ್ಪನಪಾಳ್ಯದಲ್ಲಿ ಅಧಿಕ ಮಳೆ ಸುರಿದಿದೆ, 72 ಮಿ.ಮೀನಷ್ಟು ಮಳೆಯಾಗಿದೆ. ಸಾರಕ್ಕಿಯಲ್ಲಿ 63, ಬಸವನಗುಡಿ, ಅಟ್ಟೂರಿನಲ್ಲಿ 49, ವಿದ್ಯಾರಣ್ಯಪುರದಲ್ಲಿ 41, ಎಚ್ಎಸ್ಆರ್ ಲೇಔಟ್ನಲ್ಲಿ 38.5 ಮಿ.ಮೀನಷ್ಟು ಮಳೆಯಾಗಿದೆ.

ನಾಲ್ಕು ದಿನ ತಡವಾಗಿ ಮುಂಗಾರು;
ವಾಡಿಕೆಯಂತೆ ಜೂನ್ 1ರಂದೇ ರಾಜ್ಯ ಪ್ರವೇಶಿಸಬೇಕಿದ್ದ, ಮುಂಗಾರು ಮಾರುತಗಳು ನಾಲ್ಕು ದಿನ ತಡವಾಗಿ ಕರಾವಳಿ ಮತ್ತು ದಕ್ಷಿಣ ಒಳನಾಡು ಭಾಗವನ್ನು ಪ್ರವೇಶಿಸಿದೆ. ಶನಿವಾರ ಉತ್ತರ ಒಳನಾಡನ್ನು ಹಾದು ಹೋಗುವ ಮೂಲಕ ಈ ಮಾರುಗಳು ಇಡೀ ರಾಜ್ಯವನ್ನು ಆವರಿಸಲಿವೆ.
ಮುಂಗಾರು ಅರಂಭವಾದ ಮೊದಲ ದಿನವೇ ಕರಾವಳಿ ಭಾಗದಲ್ಲಿ ವ್ಯಾಪಕ ಮಳೆ ದಾಖಲಾಗಿದೆ.ಇದೇ ರೀತಿ ಜೂನ್ 6ರವರೆಗೆ ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಎಲ್ಲಾ ಕಡೆಗಳಲ್ಲಿ ಗುಡುಗು ಮತ್ತು ಗಾಳಿ ಸಹಿತ ಮಳೆ ಮುಂದುವರೆಯಲಿದೆ.


ಯಾವ ಜಿಲ್ಲೆಗಳಿಗೆ ರೆಡ್ ಅಲರ್ಟ್
ಜೂನ್ 5ರಂದು ಅತ್ಯಧಿಕ ಮಳೆ ಬೀಳುವುದರಿಂದ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಮಲೆನಾಡಿನ ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಮತ್ತು ಹಾಸನ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್, ದಕ್ಷಿಣ ಒಳನಾಡಿನ ಬಹುತೇಕ ಎಲ್ಲಾ ಜಿಲ್ಲೆಗಳು, ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಹಾವೇರಿ, ಧಾರವಾಡ, ವಿಜಯಪುರ, ಕಲಬುರಗಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.


ಬೆಂಗಳೂರಲ್ಲಿ ಅಧಿಕ ಮಳೆ
ನಗರದಲ್ಲಿ ಶುಕ್ರವಾರ ಗುಡುಗು ಸಹಿತ ಧಾರಾಕಾರ ಮಳೆ ಸುರಿದಿದೆ, ಬೆಳಗ್ಗೆಯಿಂದಲೇ ಮೋಡಕವಿದ ವಾತಾವರಣ ನಿರ್ಮಾಣವಾಗಿತ್ತು. ಮಧ್ಯಾಹ್ನದ ನಂತರ ಶುರುವಾದ ಮಳೆ ಕೆಲ ಕಾಲ ಜೋರಾಗಿ ಅಬ್ಬರಿಸಿತು. ಇದರಿಂದ ಜೆಪಿನಗರ 6ನೇ ಹಂತ, ಜಯನಗರ 5ನೇ ಬ್ಲಾಕ್ನ ರಸ್ತೆಗಳಲ್ಲಿ ನಾಲ್ಕು ಕಡೆ ರದ ರೆಂಬೆಗಳು ಮುರಿದು ಬಿದ್ದಿವೆ. ರಾಜ್ಯದಲ್ಲಿ ಮುಂಗಾರು ಪ್ರವೇಶವಾದ ಹಿನ್ನೆಲೆಯಲ್ಲಿ ಬೆಂಗಳೂರಲ್ಲಿ ಜೂನ್ 7ರವರೆಗೂ ಮಳೆ ಮುಂದುವರೆಯಲಿದೆ.
Monsoon has entered the state as per the usual time of June first week. The monsoon clouds that arrived in Kerala on Thursday have entered Karwar of Uttara Kannada district. Many districts including Bengaluru received copious amounts of rain on June 4.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 10:24 pm
Mangalore Correspondent
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
ಜ.18ರಂದು ಮಂಗಳೂರಿನಲ್ಲಿ ಪ್ರಪ್ರಥಮ ಜಾಗತಿಕ ಬಿಲ್ಲವರ...
15-01-26 04:01 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm