ಬ್ರೇಕಿಂಗ್ ನ್ಯೂಸ್
07-06-21 05:07 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 07; ಕೊರೋನಾ ಎರಡನೇ ಅಲೆಯಿಂದ ಸಾರಿಗೆ ನಿಗಮಗಳು ಸಂಕಷ್ಟಕ್ಕೆ ಸಿಲುಕಿದ್ದು, ಲಾಕ್ ಡೌನ್ ನಿಂದ ಇಲ್ಲಿಯವರೆಗೂ ಸಾರಿಗೆ ನಿಗಮಗಳಿಗೆ ಒಟ್ಟು 560 ಕೋಟಿ ರೂ. ನಷ್ಟವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಸಾರಿಗೆ ಇಲಾಖೆಯಿಂದ ಈ ಬಗ್ಗೆ ಸೋಮವಾರ ಮಾಹಿತಿ ಲಭ್ಯವಾಗಿದ್ದು, ನೌಕರರಿಗೆ ಸಂಬಳ ಕೊಡಲು ಸಾರಿಗೆ ಸಂಸ್ಥೆಯ ನಾಲ್ಕು ನಿಗಮಗಳು ಹೆಣಗಾಡುವಂತಾಗಿದೆ.
ಕೋರೋನಾ ಹಿನ್ನಲೆ ಸರ್ಕಾರ ಲಾಕ್ಡೌನ್ ಘೋಷಣೆ ಮಾಡಿದ್ದರಿಂದ ಬಸ್ಗಳು ರಸ್ತೆಗಿಳಿದಿಲ್ಲ. ಬಸ್ಗಳು ಕಾರ್ಯಚರಣೆ ಆಗದ ಹಿನ್ನಲೆ ನಾಲ್ಕು ನಿಗಮಗಳಿಗೆ 560 ಕೋಟಿ ರೂ. ನಷ್ಟವಾಗಿದೆ. ಅಲ್ಲದೇ ಈ ಹಿಂದೆ ನೌಕರರು ಮುಷ್ಕರ ನಡೆಸಿದ್ದರ ಪರಿಣಾಮ ಕೋಟ್ಯಾಂತರ ರೂಪಾಯಿ ನಷ್ಟ ಅನುಭವಿಸುವಂತಾಗಿದೆ. ಇದನ್ನು ಚೇತರಿಸಿಕೊಳ್ಳುವಷ್ಟರಲ್ಲಿ ಲಾಕ್ಡೌನ್ ಘೋಷಣೆಯಿಂದ ಈಗ ಮತ್ತಷ್ಟು ಸಾರಿಗೆ ಸಂಸ್ಥೆಗೆ ನಷ್ಟವಾಗಿದೆ.

ಕೊರೋನಾ ಎರಡನೇ ಅಲೆಯಿಂದ ಯಾವ ಯಾವ ನಿಗಮಗಳಿಗೆ ಎಷ್ಟು ನಷ್ಟ? ಸಾರಿಗೆ ನೌಕರರು ಮುಷ್ಕರದಿಂದ ದಿನದ ನಷ್ಟವೆಷ್ಟು? ಒಂದು ದಿನ ಬಸ್ ನಿಂತರೆ ನಾಲ್ಕು ನಿಗಮಗಳಿಗೆ ನಷ್ಟ ಎಷ್ಟು? ಎನ್ನುವುದನ್ನು ನೋಡುವುದಾದರೆ ಒಂದು ದಿನ ಬಸ್ ಕಾರ್ಯಾಚರಣೆ ಸ್ಥಗಿತವಾದರೆ ನಾಲ್ಕು ನಿಗಮಗಳಿಗೆ ಸುಮಾರು 14 ಕೋಟಿ ರೂ. ನಷ್ಟವಾಗುತ್ತದೆ.
ಪ್ರಸ್ತುತ ಬಿಎಂಟಿಸಿಯ ದಿನದ ಆದಾಯ ಸುಮಾರು 2.5 ರಿಂದ 3 ಕೋಟಿ ಇದೆ. ಲಾಕ್ಡೌನ್ ಘೋಷಣೆಯಾಗಿ 40 ದಿನ ಕಳೆದಿದೆ. ಇದರಿಂದ ಇಲ್ಲಿವರೆಗೆ ಬಿಎಂಟಿಸಿಗೆ 120 ಕೋಟಿ ರೂ. ನಷ್ಟವಾಗಿದೆ. ಕೆಎಸ್ಆರ್ಟಿಸಿ ನಿತ್ಯದ ಆದಾಯ 7 ಕೋಟಿ ರೂ. ಇದ್ದು, 40 ದಿನಕ್ಕೆ ಕೆಎಸ್ಆರ್ಟಿಸಿ ಗೆ ಒಟ್ಟು 280 ಕೋಟಿ ರೂ. ನಷ್ಟವಾಗಿದೆ.
ವಾಯುವ್ಯ ಸಾರಿಗೆ ನಿಮಗದ ಪ್ರಸ್ತುತ ಆದಾಯ 2 ಕೋಟಿ ರೂ. ಆಗಿದ್ದು, 40 ದಿನಕ್ಕೆ ವಾಯುವ್ಯ ಸಾರಿಗೆಗೆ ಒಟ್ಟು 80 ಕೋಟಿ ರೂ. ನಷ್ಟವಾಗಿದೆ. ಈಶಾನ್ಯ ಸಾರಿಗೆ ನಿಗಮದ ಪ್ರಸ್ತುತ ನಿತ್ಯ ಆದಾಯ 2 ಕೋಟಿ ರೂ. ಆಗಿದ್ದು, 40 ದಿನಕ್ಕೆ ಈಶಾನ್ಯ ಸಾರಿಗೆಗೆ ಒಟ್ಟು 80 ಕೋಟಿ ರೂ. ನಷ್ಟವಾಗಿದೆ.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
16-07-26 02:29 pm
HK News Staffer
ಬೃಹತ್ ಖೋಟಾ ನೋಟು ಜಾಲ ಬಯಲಿಗೆ ; ಉಪ್ಪಿನಂಗಡಿ ಬಳಿ ಫ...
16-07-26 02:02 pm
ಧರ್ಮಸ್ಥಳ ಶವ ಹೂತಿಟ್ಟ ಪ್ರಕರಣ ; ಒಂದು ವರ್ಷದ ಬಳಿಕ...
15-07-26 07:40 pm
ಉಡುಪಿ ; ಹೆದ್ದಾರಿ ಮಧ್ಯದಲ್ಲೇ ಟೇಬಲ್ ಹಾಕಿ ಟಿವಿ, ಮ...
15-07-26 07:02 pm
ಮುಕ್ಕ ಶ್ರೀನಿವಾಸ್ ಕಾಲೇಜು ಎಂಬಿಬಿಎಸ್ ವಿದ್ಯಾರ್ಥಿನ...
15-07-26 01:17 pm