ಬ್ರೇಕಿಂಗ್ ನ್ಯೂಸ್
07-06-21 10:05 pm Mangaluru Correspondent ಕರ್ನಾಟಕ
ಮೈಸೂರು, ಜೂನ್ 7: ವರ್ಗಾವಣೆ ಮತ್ತು ಮೈಸೂರಿನ ಭೂ ಮಾಫಿಯಾದ ಬಗ್ಗೆ ನಿರ್ಗಮಿತ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ.
ನನಗೆ ಕೆಲಸ ಮಾಡಲು ಬಿಡಲಿಲ್ಲ. ಕೆಲವರು ಅನಗತ್ಯವಾಗಿ ತೊಂದರೆ ಕೊಟ್ಟರು. ಭೂಮಿ ಒತ್ತುವರಿ ತೆರವು ಮಾಡಲು ನಾನು ಪ್ರಯತ್ನ ಮಾಡಿದ್ದೆ. ಕೆರೆಗಳನ್ನು ಉಳಿಸೋದು, ಸರ್ಕಾರಿ ಭೂಮಿ ರಕ್ಷಣೆ ಮಾಡೋದು ನನ್ನ ಆದ್ಯತೆ ಆಗಿತ್ತು. ಆ ನಿಟ್ಟಿನಲ್ಲಿ ಮೊದಲ ದಿನದಿಂದಲೂ ಕಾರ್ಯ ನಿರ್ವಹಿಸುತ್ತಿದ್ದೆ. ಆದರೆ ನನ್ನ ಕೆಲಸಕ್ಕೆ ಕೆಲವರು ಆಕ್ಷೇಪ ತೆಗೆದರು ಎಂದು ರೋಹಿಣಿ ಹೇಳಿದ್ದಾರೆ.
ಕೇರ್ಗಳ್ಳಿ ಕೆರೆಯ ಒತ್ತುವರಿ ತೆರವು ಮಾಡಿ ನೀರು ತುಂಬಿಸಲು ಪ್ರಯತ್ನಿಸಿದ್ದೆ. ಅದರ ಜತೆಗೆ ಸರ್ವೇ ನಂ. 4ರ 1500 ಎಕರೆ ಜಾಗ ಉಳಿಸಿಕೊಳ್ಳುವ ನಿಟ್ಟಿನಲ್ಲಿ ಸುಪ್ರೀಂಕೋರ್ಟ್ನಲ್ಲಿ ಒಳ್ಳೆಯ ಲಾಯರ್ ಇಟ್ಟು ಹೋರಾಟ ಮಾಡುತ್ತಿದ್ದೇವೆ. ಇದರ ಮಧ್ಯೆ ಕೋವಿಡ್ ನಿಯಂತ್ರಣಕ್ಕೂ ಪ್ರಾಮುಖ್ಯತೆ ಕೊಟ್ಟು ಕೆಲಸ ಮಾಡಿದ್ದೇನೆ. ವ್ಯಾಕ್ಸಿನೇಷನ್ನಲ್ಲಿ ಮೈಸೂರು ರಾಜ್ಯದಲ್ಲೇ ಮೊದಲ ಸ್ಥಾನದಲ್ಲಿದೆ. ಜುಲೈ ವೇಳೆಗೆ ಮೈಸೂರನ್ನು ಕರೊನಾ ಮುಕ್ತ ಎಂದು ಘೋಷಣೆ ಮಾಡಬೇಕು ಅನ್ನುವ ನಿಟ್ಟಿನಲ್ಲಿ ಕೆಲಸ ಮಾಡಿದ್ದೇನೆ ಎಂದು ಹೆಮ್ಮೆ ವ್ಯಕ್ತಪಡಿಸಿದರು.

ಮೈಸೂರಿನ ಜನ ನನ್ನನ್ನು ಮನೆ ಮಗಳಂತೆ ಕಂಡಿದ್ದಾರೆ. ಇಲ್ಲಿಂದ ಬಿಟ್ಟು ಹೋಗುವಾಗ ತವರು ಮನೆ ಬಿಟ್ಟು ಹೋಗುವ ಭಾವನೆ ನನಗೆ ಆಗುತ್ತಿದೆ. ಮೈಸೂರಿಗೆ ಜನತೆಗೆ ನನ್ನ ಧನ್ಯವಾದಗಳು ಎಂದು ಮೈಸೂರಿನಿಂದ ವರ್ಗಗೊಂಡು ತೆರಳುತ್ತಿರುವ ನಿರ್ಗಮಿತ ಡಿಸಿ ರೋಹಿಣಿ ಸಿಂಧೂರಿ ಭಾವನಾತ್ಮಕ ನುಡಿಗಳನ್ನಾಡಿದ್ದಾರೆ.
ಇದೇ ವೇಳೆ, ಮಹಾನಗರ ಪಾಲಿಕೆ ಆಯುಕ್ತೆಯಾಗಿದ್ದ ಶಿಲ್ಪಾನಾಗ್ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿಂಧೂರಿ, ನನಗೆ ಆಕೆಯ ಬಗ್ಗೆ ಅನುಕಂಪ ಇದೆ. ಅವರ ಮಾತಲ್ಲಿ ಇನ್ಸೆಕ್ಯೂರಿಟಿ ಕಾಣಿಸುತ್ತಿದೆ. ಆ ಹತಾಸೆಯಿಂದಲೇ ಅವರು ನನ್ನ ಬಗ್ಗೆ ಆರೋಪ ಮಾಡುತ್ತಿದ್ದಾರೆ. ಅವರ ಬಗ್ಗೆ ನನಗೆ ಮರುಕ ಉಂಟಾಗುತ್ತಿದೆ. ಅಷ್ಟು ಮಾತ್ರ ಹೇಳಬಲ್ಲೆ. ಅದರಾಚೆಗೆ ನಾನು ಏನೂ ಹೇಳಲಾರೆ. ಐಎಎಸ್ ಅಧಿಕಾರಿಗಳಾದವರಿಗೆ ಪ್ರತಿಯೊಂದಕ್ಕೂ ಪ್ರೊಸೀಜರ್ ಇದೆ. ಆ ಚೌಕಟ್ಟಿನಲ್ಲೇ ನಾನು ಕೆಲಸ ಮಾಡಿದ್ದೇನೆ ಎಂದು ಹೇಳಿದರು ರೋಹಿಣಿ ಸಿಂಧೂರಿ.
ರಾಜಕಾರಣಿಗಳ ಟೀಕೆಗೆ ಗುರಿಯಾಗಿದ್ದ ರೋಹಿಣಿ ಸಿಂಧೂರಿ, ಬಳಿಕ ಪಾಲಿಕೆ ಆಯುಕ್ತೆ ಶಿಲ್ಪಾ ನಾಗ್ ಜೊತೆಗೂ ಜಟಾಪಟಿಗೆ ಕಾರಣವಾಗಿದ್ದರು. ಭೂಮಾಫಿಯಾದ ತನಿಖೆಗೆ ಕೈಹಾಕಿದ್ದಕ್ಕಾಗಿ ರಾಜಕಾರಣಿಗಳು ವಿರೋಧಿಸಲು ಮುಂದಾಗಿದ್ದರು ಎನ್ನುವ ಆರೋಪ ಕೇಳಿಬಂದಿತ್ತು.
Rohini Sindhuri, former Deputy Commissioner of Mysuru, on Monday described as “sad and unfortunate” that an officer had “colluded” with a few politicians in the middle of a pandemic to target the Deputy Commissioner responsible for the district’s disaster management situation.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 10:24 pm
Mangalore Correspondent
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
ಜ.18ರಂದು ಮಂಗಳೂರಿನಲ್ಲಿ ಪ್ರಪ್ರಥಮ ಜಾಗತಿಕ ಬಿಲ್ಲವರ...
15-01-26 04:01 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm