ಬ್ರೇಕಿಂಗ್ ನ್ಯೂಸ್
11-06-21 02:09 pm Headline Karnataka News Network ಕರ್ನಾಟಕ
ಗದಗ, ಜೂನ್ 11; ಕೋವಿಡ್ 2ನೇ ಅಲೆಯಿಂದಾಗಿ ಸಾವಿರಾರು ಜನರು ಇದುವರೆಗೂ ಪ್ರಾಣ ಕಳೆದುಕೊಂಡಿದ್ದಾರೆ. ಸೋಂಕಿನ ವಿರುದ್ಧದ ಲಸಿಕೆಗೆ ಈಗ ಭಾರೀ ಬೇಡಿಕೆ ಇದೆ. ಆದರೆ ಇಲ್ಲೊಂದು ಪ್ರದೇಶದಲ್ಲಿ ಲಸಿಕೆ ಬೇಡ ಎಂದು ಜನರು ಹೇಳುತ್ತಿದ್ದಾರೆ.
ಇದು ಗದಗ ಜಿಲ್ಲೆಯ ಮುಳಗುಂದದ ಬಳಿ ಇರುವ ದಾವಲ್ ಮಲ್ಲಿಕ್ ಪ್ರದೇಶ. ಇಲ್ಲಿ ಸುಮಾರು 500 ಜನರು ವಾಸವಾಗಿದ್ದಾರೆ. ಬಹುತೇಕ ಜನರು ಬಟ್ಟೆ ವ್ಯಾಪಾರಿಗಳು. ಈ ಪ್ರದೇಶದ ಜನರು ನಮಗೆ ಕೋವಿಡ್ ಲಸಿಕೆ ಬೇಡ ಎಂದು ಪಟ್ಟು ಹಿಡಿದಿದ್ದಾರೆ.
ಮೂರು ಬಾರಿ ಅಧಿಕಾರಿಗಳು ಈ ಪ್ರದೇಶಕ್ಕೆ ಹೋಗಿ ಜನರ ಮನವೊಲಿಸಲು ಸಾಧ್ಯವಾಗದೇ ವಾಪಸ್ ಬಂದಿದ್ದಾರೆ. ಇಲ್ಲಿಯ ತನಕ ಯಾವುದೇ ಕೋವಿಡ್ ಪ್ರಕರಣಗಳು ಇಲ್ಲಿ ಪತ್ತೆಯಾಗಿಲ್ಲ. ಜನರು "ನಮಗೆ ಲಸಿಕೆ ಬೇಡ, ದೇವರಿದ್ದಾನೆ" ಎಂದು ಅಧಿಕಾರಿಗಳನ್ನು ವಾಪಸ್ ಕಳಿಸಿದ್ದಾರೆ.

ಗ್ರಾಮ ಪಂಚಾಯಿತಿಯ ಸದಸ್ಯರು ಸಹ ಜನರನ್ನು ಭೇಟಿ ಮಾಡಿ ಮನವೊಲಿಸುವ ಕಾರ್ಯ ಮಾಡಿದ್ದಾರೆ. ಆದರೆ ಜನರು ಮಾತ್ರ ಲಸಿಕೆ ಪಡೆಯಲು ತಯಾರಿಲ್ಲ. ಹೆಚ್ಚು ಒತ್ತಾಯ ಮಾಡಿದಾಗ ಲಸಿಕೆ ಹಾಕಿಸಿಕೊಂಡರೆ ಏನೂ ಆಗುವುದಿಲ್ಲ ಎಂದು 25 ಸಾವಿರ ರೂ. ಬಾಂಡ್ ನೀಡಿ ಆಗ ಹಾಕಿಸಿಕೊಳ್ಳುತ್ತೇವೆ ಎಂದು ಹೇಳಿದ್ದಾರೆ.
ಆರೋಗ್ಯ ಇಲಾಖೆ, ಪಟ್ಟಣ ಪಂಚಾಯಿತಿ, ಗ್ರಾಮ ಪಂಚಾಯಿತಿ ಮಟ್ಟದ ಅಧಿಕಾರಿಗಳು ಮೂರು ಬಾರಿ ಹೋದರೂ ಜನರು ಬೇರೆ-ಬೇರೆ ನೆಪ ಹೇಳಿ ಲಸಿಕೆ ಹಾಕಿಸಿಕೊಳ್ಳದೇ ವಾಪಸ್ ಕಳಿಸಿದ್ದಾರೆ. ಜನರ ಮನವೊಲಿಕೆ ಅಧಿಕಾರಿಗಳಿಗೆ ತಲೆನೋವಾಗಿದೆ. ಲಸಿಕೆ ಪಡೆದರೆ ಸಾವನ್ನಪ್ಪುತ್ತಾರೆ ಎಂಬ ಭಯವಿದೆ. ನಮ್ಮೊಂದಿಗೆ ದೇವರು ಇದ್ದಾನೆ. ನಮಗೆ ಏನೂ ಆಗೋಲ್ಲ. ಇಲ್ಲಿಗೆ ಕೋವಿಡ್ ಬಂದರೂ ನಮ್ಮನ್ನು ಸಾಯಿಸಲು ಆಗಲ್ಲ. ಸಾವಿರಾರು ಜನರ ನಂಬಿಕೆಗಳಿಸಿದ ದೇವರ ಸ್ಥಳದಲ್ಲಿ ನಾವಿದ್ದೇವೆ. ದೇವರು ನಮ್ಮನ್ನು ರಕ್ಷಣೆ ಮಾಡುತ್ತಾನೆ ಎಂದು ಜನರು ಹೇಳುತ್ತಿದ್ದಾರೆ.
ಮುಳಗುಂಡ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಗೆ ಈ ಪ್ರದೇಶ ಬರುತ್ತದೆ. ಕೇಂದ್ರದ ವೈದ್ಯಕೀಯ ಅಧಿಕಾರಿ ಮಾತನಾಡಿದ್ದು, "ನಾವು ಜನರ ಮನವೊಲಿಕೆ ಮಾಡಲು ಪ್ರಯತ್ನ ನಡೆಸುತ್ತಿದ್ದೇವೆ. ಲಸಿಕೆ ಕುರಿತು ಅವರಲ್ಲಿ ತಪ್ಪು ಕಲ್ಪನೆಗಳಿವೆ" ಎಂದು ಹೇಳಿದ್ದಾರೆ.
However, irrespective of the villagers’ claim, the health and family welfare department made a bid to convince them to take the jab, but to no avail.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 10:24 pm
Mangalore Correspondent
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
ಜ.18ರಂದು ಮಂಗಳೂರಿನಲ್ಲಿ ಪ್ರಪ್ರಥಮ ಜಾಗತಿಕ ಬಿಲ್ಲವರ...
15-01-26 04:01 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm