ಬ್ರೇಕಿಂಗ್ ನ್ಯೂಸ್
11-06-21 02:09 pm Headline Karnataka News Network ಕರ್ನಾಟಕ
ಗದಗ, ಜೂನ್ 11; ಕೋವಿಡ್ 2ನೇ ಅಲೆಯಿಂದಾಗಿ ಸಾವಿರಾರು ಜನರು ಇದುವರೆಗೂ ಪ್ರಾಣ ಕಳೆದುಕೊಂಡಿದ್ದಾರೆ. ಸೋಂಕಿನ ವಿರುದ್ಧದ ಲಸಿಕೆಗೆ ಈಗ ಭಾರೀ ಬೇಡಿಕೆ ಇದೆ. ಆದರೆ ಇಲ್ಲೊಂದು ಪ್ರದೇಶದಲ್ಲಿ ಲಸಿಕೆ ಬೇಡ ಎಂದು ಜನರು ಹೇಳುತ್ತಿದ್ದಾರೆ.
ಇದು ಗದಗ ಜಿಲ್ಲೆಯ ಮುಳಗುಂದದ ಬಳಿ ಇರುವ ದಾವಲ್ ಮಲ್ಲಿಕ್ ಪ್ರದೇಶ. ಇಲ್ಲಿ ಸುಮಾರು 500 ಜನರು ವಾಸವಾಗಿದ್ದಾರೆ. ಬಹುತೇಕ ಜನರು ಬಟ್ಟೆ ವ್ಯಾಪಾರಿಗಳು. ಈ ಪ್ರದೇಶದ ಜನರು ನಮಗೆ ಕೋವಿಡ್ ಲಸಿಕೆ ಬೇಡ ಎಂದು ಪಟ್ಟು ಹಿಡಿದಿದ್ದಾರೆ.
ಮೂರು ಬಾರಿ ಅಧಿಕಾರಿಗಳು ಈ ಪ್ರದೇಶಕ್ಕೆ ಹೋಗಿ ಜನರ ಮನವೊಲಿಸಲು ಸಾಧ್ಯವಾಗದೇ ವಾಪಸ್ ಬಂದಿದ್ದಾರೆ. ಇಲ್ಲಿಯ ತನಕ ಯಾವುದೇ ಕೋವಿಡ್ ಪ್ರಕರಣಗಳು ಇಲ್ಲಿ ಪತ್ತೆಯಾಗಿಲ್ಲ. ಜನರು "ನಮಗೆ ಲಸಿಕೆ ಬೇಡ, ದೇವರಿದ್ದಾನೆ" ಎಂದು ಅಧಿಕಾರಿಗಳನ್ನು ವಾಪಸ್ ಕಳಿಸಿದ್ದಾರೆ.

ಗ್ರಾಮ ಪಂಚಾಯಿತಿಯ ಸದಸ್ಯರು ಸಹ ಜನರನ್ನು ಭೇಟಿ ಮಾಡಿ ಮನವೊಲಿಸುವ ಕಾರ್ಯ ಮಾಡಿದ್ದಾರೆ. ಆದರೆ ಜನರು ಮಾತ್ರ ಲಸಿಕೆ ಪಡೆಯಲು ತಯಾರಿಲ್ಲ. ಹೆಚ್ಚು ಒತ್ತಾಯ ಮಾಡಿದಾಗ ಲಸಿಕೆ ಹಾಕಿಸಿಕೊಂಡರೆ ಏನೂ ಆಗುವುದಿಲ್ಲ ಎಂದು 25 ಸಾವಿರ ರೂ. ಬಾಂಡ್ ನೀಡಿ ಆಗ ಹಾಕಿಸಿಕೊಳ್ಳುತ್ತೇವೆ ಎಂದು ಹೇಳಿದ್ದಾರೆ.
ಆರೋಗ್ಯ ಇಲಾಖೆ, ಪಟ್ಟಣ ಪಂಚಾಯಿತಿ, ಗ್ರಾಮ ಪಂಚಾಯಿತಿ ಮಟ್ಟದ ಅಧಿಕಾರಿಗಳು ಮೂರು ಬಾರಿ ಹೋದರೂ ಜನರು ಬೇರೆ-ಬೇರೆ ನೆಪ ಹೇಳಿ ಲಸಿಕೆ ಹಾಕಿಸಿಕೊಳ್ಳದೇ ವಾಪಸ್ ಕಳಿಸಿದ್ದಾರೆ. ಜನರ ಮನವೊಲಿಕೆ ಅಧಿಕಾರಿಗಳಿಗೆ ತಲೆನೋವಾಗಿದೆ. ಲಸಿಕೆ ಪಡೆದರೆ ಸಾವನ್ನಪ್ಪುತ್ತಾರೆ ಎಂಬ ಭಯವಿದೆ. ನಮ್ಮೊಂದಿಗೆ ದೇವರು ಇದ್ದಾನೆ. ನಮಗೆ ಏನೂ ಆಗೋಲ್ಲ. ಇಲ್ಲಿಗೆ ಕೋವಿಡ್ ಬಂದರೂ ನಮ್ಮನ್ನು ಸಾಯಿಸಲು ಆಗಲ್ಲ. ಸಾವಿರಾರು ಜನರ ನಂಬಿಕೆಗಳಿಸಿದ ದೇವರ ಸ್ಥಳದಲ್ಲಿ ನಾವಿದ್ದೇವೆ. ದೇವರು ನಮ್ಮನ್ನು ರಕ್ಷಣೆ ಮಾಡುತ್ತಾನೆ ಎಂದು ಜನರು ಹೇಳುತ್ತಿದ್ದಾರೆ.
ಮುಳಗುಂಡ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಗೆ ಈ ಪ್ರದೇಶ ಬರುತ್ತದೆ. ಕೇಂದ್ರದ ವೈದ್ಯಕೀಯ ಅಧಿಕಾರಿ ಮಾತನಾಡಿದ್ದು, "ನಾವು ಜನರ ಮನವೊಲಿಕೆ ಮಾಡಲು ಪ್ರಯತ್ನ ನಡೆಸುತ್ತಿದ್ದೇವೆ. ಲಸಿಕೆ ಕುರಿತು ಅವರಲ್ಲಿ ತಪ್ಪು ಕಲ್ಪನೆಗಳಿವೆ" ಎಂದು ಹೇಳಿದ್ದಾರೆ.
However, irrespective of the villagers’ claim, the health and family welfare department made a bid to convince them to take the jab, but to no avail.
01-03-26 09:20 pm
HK News Staffer
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
ಖಮೇನಿ ಹತ್ಯೆ ಖಂಡನೀಯ, ಇರಾನ್ ಮೇಲಿನ ಅಮೆರಿಕ ಯುದ್ಧ...
01-03-26 04:51 pm
02-03-26 03:10 pm
HK News Staffer
ಇರಾನ್ ಸಂಘರ್ಷ; ಭಾರತದಲ್ಲಿ ಹಿಂಸಾಚಾರ ಸಾಧ್ಯತೆ, ತುರ...
02-03-26 02:26 pm
ಮಧ್ಯಪ್ರಾಚ್ಯ ಯುದ್ಧ ಎಫೆಕ್ಟ್ ; ಸೆನ್ಸೆಕ್ಸ್ 1,000...
02-03-26 01:34 pm
ಖಮೇನಿ ಯುಗಾಂತ್ಯ; ಹಂಗಾಮಿ ಸುಪ್ರೀಂ ಲೀಡರ್ ಸ್ಥಾನಕ್ಕ...
02-03-26 01:30 pm
Ayatollah Khamenei Killed: ಇರಾನ್ ಪರಮೋಚ್ಚ ನಾಯಕ...
01-03-26 09:52 am
01-03-26 08:37 pm
HK News Staffer
PSI Nasir Hussain: ಉಡುಪಿ ; ಮ್ಯಾರಥಾನಲ್ಲಿ ಪಾಲ್ಗ...
01-03-26 04:07 pm
ಹುಲಿಕಲ್ ಘಾಟಿಯಲ್ಲಿ ದುರ್ಗಾಂಬಾ ಬಸ್ ಗೆ ಬೆಂಕಿ ; ಕು...
28-02-26 08:53 pm
Mangaluru Muscat Flight: ಮಂಗಳೂರು- ಮಸ್ಕತ್ ನಡುವ...
27-02-26 08:59 pm
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm